ಮತದಾನಕ್ಕೆ ಅನಿವಾಸಿ ಭಾರತೀಯ ಕನ್ನಡಿಗರ ನಿರಾಸಕ್ತಿ
ಬೆಂಗಳೂರು, ಏಪ್ರಿಲ್ 24: ಅನಿವಾಸಿ ಭಾರತೀಯರು ಕಳೆದ ಮೂರು ವರ್ಷಗಳಲ್ಲಿ ಭಾರತದಲ್ಲಿ ಸಾಗರದಾಚೆಗಿನ ಭಾರತೀಯರು ಕೆಟಗರಿಯಡಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಣಿ ಮಾಡಿಕೊಳ್ಳುತ್ತಿರುವ ಪ್ರಮಾಣ ಎರಡು ಪಟ್ಟು ಹೆಚ್ಚಳವಾಗಿದೆ.
ಆದರೆ ಮೇ 12 ರಂದು ವಿಧಾನಸಭೆಗೆ ನಡೆಯುವ ಚುನಾವಣೆಗೆ ಕೇವಲ ಅರ್ಧ ಡಜನ್ ಅನಿವಾಸಿ ಭಾರತೀಯ ಕನ್ನಡಿಗರು ಮಾತ್ರ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಿಕೊಂಡಿದ್ದಾರೆ.
ರಾಜ್ಯದ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಕೆ.ಎನ್.ರಮೇಶ್ ಅವರು ಹೇಳುವಂತೆ, ಒಬ್ಬ ಮಹಿಳೆ ಸೇರಿ ಕೇವಲ ಆರು ಮಂದಿ ಅನಿವಾಸಿ ಭಾರತೀಯ ಕನ್ನಡಿಗರು ಈ ಬಾರಿ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಸಾಗರೋತ್ತರ ಭಾರತೀಯರು ವಿಭಾಗದಡಿ ತಮ್ಮ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ.

ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಲು ಅನಿವಾಸಿ ಭಾರತೀಯರು ನಮೂನೆ 6ಎ ನಲ್ಲಿ ಭರ್ತಿ ಮಾಡಿ ಖುದ್ದಾಗಿ ಆಯೋಗಕ್ಕೆ ಸಲ್ಲಿಸಬೇಕಾಗುತ್ತದೆ. ಕೆಲ ತಿಂಗಳ ಹಿಂದಿನವರೆಗೂ ರಾಜ್ಯದಲ್ಲಿ ಕೇವಲ ಒಬ್ಬ ಎನ್ಆರ್ಐ ಕನ್ನಡಿಗರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದರು. ಈ ಬಗ್ಗೆ ಚುನಾವಣಾ ಆಯೋಗ ಸಾಕಷ್ಟು ಪ್ರಚಾರ ಮಾಡಿದರೂ ಅಷ್ಟಾಗಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿಲ್ಲ.
ನಾವು ಹೆಸರು ನೋಂದಣಿಗೆ ಒತ್ತಾಯ ಹೇರಲು ಬರುವುದಿಲ್ಲ. ಒಂದು ವೇಳೆ ಹೆಸರು ನೋಂದಾಯಿಸಿದರೂ ಮತ ಚಲಾಯಿಸಲು ಬರಲು ಆಗುವುದಿಲ್ಲ ಎಂಬ ಭಾವನೆ ಅವರಲ್ಲಿ ಇರಬಹುದು. ಆದರೂ ಕೂಡ ನಾವು ಸಾಕಷ್ಟು ಪ್ರೋತ್ಸಾಹ ಹಾಗೂ ಪ್ರಚಾರ ನೀಡಿ, ಹೆಚ್ಚು ಎನ್ಆರ್ಐಗಳು ಹೆಸರು ಸೇರ್ಪಡೆ ಮಾಡುವಂತೆ ಪ್ರಯತ್ನಿಸುತ್ತಿದ್ದೇವೆ ಎನ್ನುತ್ತಾರೆ ರಮೇಶ್.
ಕರ್ನಾಟಕದ 10ರಿಂದ 12 ಲಕ್ಷ ಅನಿವಾಸಿ ಭಾರತೀಯ ಕನ್ನಡಿಗರು ಜಗತ್ತಿನ ಬೇರೆ ಬೇರೆ ರಾಷ್ಟ್ರಗಳಲ್ಲಿ ನೆಲೆಸಿದ್ದಾರೆ. ಅವರಲ್ಲಿ 3-4 ಲಕ್ಷ ಜನರಿಗೆ ನೋಂದಣಿಗೆ ಅರ್ಹತೆ ಇರುತ್ತದೆ. ಅಂಥವರು ತಮ್ಮ ತವರು ನೆಲದಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡುವಂತೆ ಸಾಕಷ್ಟು ಉತ್ತೇಜನ ನೀಡುತ್ತಿದ್ದೇವೆ ಎನ್ನುತ್ತಾರೆ ಅನಿವಾಸಿ ಭಾರತೀಯರ ವೇದಿಕೆಯ ಅಧ್ಯಕ್ಷೆ ಆರತಿ ಕೃಷ್ಣ.
ಪ್ರಜಾಪ್ರತಿನಿಧಿ ಕಾಯ್ದೆ ತಿದ್ದುಪಡಿ ವಿಧೇಯಕ 2017ರ ಅನ್ವಯ ಸಾಗರೋತ್ತರ ಭಾರತೀಯರಿಗೂ ಮತದಾನದ ಅವಕಾಶ ನೀಡಲಾಗಿದ್ದು, ಅಲ್ಲಿಂದ ಬಾರದೇ ಇರುವವರು ಇಲ್ಲಿರುವ ಒಬ್ಬ ವ್ಯಕ್ತಿಗೆ ಮತ ಚಲಾವಣೆ ಅಧಿಕಾರ ನೀಡಲು ಕಾನೂನಿನಲ್ಲಿ ಅವಕಾಶವಿದೆ. ಆದರೆ ಒಬ್ಬ ಎನ್ಆರ್ಐ ಪರವಾಗಿ ಒಬ್ಬ ವ್ಯಕ್ತಿ ಒಂದೇ ಬಾರಿ ಮತ ಚಲಾವಣೆ ಮಾಡಬಹುದು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications