ಪಬ್ಲಿಕ್ ಟಿವಿ ಸಮೀಕ್ಷೆ : ಸಮ್ಮಿಶ್ರ ಸರ್ಕಾರ ರಚನೆ ಅಂತಾರೆ ಜನರು!
ಬೆಂಗಳೂರು, ಮೇ 09 : ಪಬ್ಲಿಕ್ ಟಿವಿ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆ ಫಲಿತಾಂಶ ಪ್ರಕಟವಾಗಿದೆ. ರಾಜ್ಯದಲ್ಲಿ ಅತಂತ್ರ ವಿಧಾನಸಭೆ ರಚನೆಯಾಗಲಿದೆ. ಸಮೀಕ್ಷೆಯಲ್ಲಿ ಪಾಲ್ಗೊಂಡ ಜನರು ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾಗಲಿದೆ ಎಂದು ಹೇಳಿದ್ದಾರೆ.
ರಾಜ್ಯದ 224 ಕ್ಷೇತ್ರಗಳಲ್ಲಿ ಮಾಹಿತಿ ಸಂಗ್ರಹಿಸಿ ಸಮೀಕ್ಷೆ ಮಾಡಲಾಗಿದೆ. ಒಟ್ಟು 21,617 ಮಾದರಿಗಳನ್ನು ಪಡೆದುಕೊಂಡು ಸಮೀಕ್ಷೆಯ ಅಂತಿಮ ವರದಿಯನ್ನು ಸಿದ್ಧಪಡಿಸಲಾಗಿದೆ. ಅಂತಿಮ ವರದಿ ಪ್ರಕಾರ ಕಾಂಗ್ರೆಸ್ ಮತ್ತು ಬಿಜೆಪಿ ಭಾರೀ ಪೈಪೋಟಿ ನಡೆದಿದೆ.
ಸಮೀಕ್ಷೆ ವರದಿ ಪ್ರಕಾರ ಕಾಂಗ್ರೆಸ್ 89-94, ಬಿಜೆಪಿ 86-91, ಜೆಡಿಎಸ್ 38-43 ಮತ್ತು ಇತರ ಅಭ್ಯರ್ಥಿಗಳು 0-6 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದಾರೆ. ವರದಿ ಪ್ರಕಾರ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ (113) ಬರುವುದಿಲ್ಲ.

ಚುನಾವಣೆ ಬಳಿಕ ಯಾವ ರೀತಿಯ ಸರ್ಕಾರ ರಚನೆಯಾಗಲಿದೆ? ಎಂದು ಸಮೀಕ್ಷೆಯಲ್ಲಿ ಜನರಿಂದ ಮಾಹಿತಿ ಸಂಗ್ರಹಿಸಲಾಗಿದೆ. ಶೇ 61 ರಷ್ಟು ಜನರು ಸಮ್ಮಿಶ್ರ ಸರ್ಕಾರ ರಚನೆಯಾಗಲಿದೆ ಎಂದು ಹೇಳಿದ್ದಾರೆ.
ಸಮೀಕ್ಷೆಯ ವರದಿಯ ಅಂಶಗಳು ಇಲ್ಲಿವೆ...
ಸಮಗ್ರ ಫಲಿತಾಂಶ : ಸಮಗ್ರ ಕರ್ನಾಟಕದ ಸಮೀಕ್ಷಾ ವರದಿಯಂತೆ ರಾಜ್ಯದಲ್ಲಿ ಬಹುಮತದ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಶೇ 26ರಷ್ಟು ಜನರು ಹೇಳಿದ್ದಾರೆ. ಸಮ್ಮಿಶ್ರ ಸರ್ಕಾರ ರಚನೆಯಾಗಲಿದೆ ಎಂದು 61 ರಷ್ಟು ಜನರು, ಏನೂ ಹೇಳುವುದಿಲ್ಲ ಎಂದು ಶೇ 13ರಷ್ಟು ಜನರು ಸಮೀಕ್ಷೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ನಗರ : ಬೆಂಗಳೂರು ನಗರದ ವ್ಯಾಪ್ತಿಯಲ್ಲಿ 27 ಕ್ಷೇತ್ರಗಳಿವೆ (ಜಯನಗರ ಹೊರತುಪಡಿಸಿ). ಬಹುಮತದ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ 31.10ರಷ್ಟು ಜನರು ಹೇಳಿದ್ದಾರೆ. ಸಮ್ಮಿಶ್ರ ಸರ್ಕಾರ ಬರಲಿದೆ ಎಂದು 52.20 ರಷ್ಟು ಜನರು ಏನೂ ಹೇಳಲ್ಲ ಎಂದು 17.70 ರಷ್ಟು ಜನರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮುಂಬೈ ಕರ್ನಾಟಕ ಭಾಗದಲ್ಲಿ ಶೇ 68.30ರಷ್ಟು ಜನರು, ಹೈದರಾಬಾದ್ ಕರ್ನಾಟಕದಲ್ಲಿ 65.90 ರಷ್ಟು ಜನರು, ಮಧ್ಯ ಕರ್ನಾಟಕದಲ್ಲಿ ಶೇ 59.90ರಷ್ಟು ಜನರು, ಕರಾವಳಿ ಕರ್ನಾಟಕದಲ್ಲಿ ಶೇ 47.60ರಷ್ಟು ಜನರು, ಹಳೆ ಮೈಸೂರು ಭಾಗದಲ್ಲಿ 62.10 ರಷ್ಟು ಜನರು ಸಮ್ಮಿಶ್ರ ಸರ್ಕಾರ ರಚನೆಯಾಗಲಿದೆ ಎಂದು ಹೇಳಿದ್ದಾರೆ.
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ












Click it and Unblock the Notifications