ನನ್ನ ಕನಸಿನ ಕರ್ನಾಟಕದಲ್ಲಿ ರೈತರ ಬದುಕು ಹಸನಾಗಬೇಕು
Recommended Video

ಶಿವಮೊಗ್ಗ, ಮೇ 08 : 'ರೈತರ ಬದುಕು ಹಸನಾಗುವಂತಹ ರಾಜ್ಯ ನಮ್ಮದಾಗಬೇಕು. ರೈತರು ಬೆಳೆಯುವ ಎಲ್ಲಾ ಬೆಳೆಗಳಿಗೆ ಬೆಂಬಲ ಬೆಲೆ ಸಿಗುವಂತಾಗಬೇಕು' ಎಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಾರದಾ ಪೂರ್ಯಾನಾಯ್ಕ ಹೇಳಿದರು.
ಒನ್ ಇಂಡಿಯಾ ಕನ್ನಡದ ಜೊತೆ ಮಾತನಾಡಿದ ಅವರು ಕನಸಿನ ಕರ್ನಾಟಕ ಹೇಗಿರಬೇಕು? ಎಂದು ಅಭಿಪ್ರಾಯ ಹಂಚಿಕೊಂಡರು. 'ಕರ್ನಾಟಕದಲ್ಲಿ ರೈತ ಪರವಾದ ಸರ್ಕಾರ ಬರಬೇಕು. ಅವರ ಬದುಕು ಸುಂದರವಾಗಬೇಕು' ಎಂದರು.
'ಮೊದಲು ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ನೀಡುತ್ತಿದ್ದರು. ಆದರೆ, ಈಗ ಕೇಂದ್ರ ಸರ್ಕಾರ ಅದು ಜನರು ತಿನ್ನುವ ಉತ್ಪನ್ನವಲ್ಲ ಬೆಲೆ ನೀಡುವುದಿಲ್ಲ ಎನ್ನುತಾರೆ. ಹಾಗಾದರೆ ರೈತರು ಯಾವ ಬೆಳೆಯನ್ನು ಬೆಳೆಯಬೇಕು?' ಎಂದು ಪ್ರಶ್ನಿಸಿದರು.

'ರೈತರಿಗೆ ಬೆಂಬಲ ಬೆಲೆ ಕೊಡಿ ಎಂದರೆ ಕೇಂದ್ರ ಸರ್ಕಾರ ರಾಜ್ಯದತ್ತ, ರಾಜ್ಯ ಕೇಂದ್ರದತ್ತ ಕೈ ತೋರಿಸುತ್ತದೆ. ಎರಡೂ ಸರ್ಕಾರದ ನಡುವೆ ಸಿಕ್ಕಿಕೊಂಡು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಪರಿಸ್ಥಿತಿ ಬರಬಾರದು' ಎಂದು ಶಾರದಾ ಪೂರ್ಯಾನಾಯ್ಕ ತಿಳಿಸಿದರು.
'ರಾಜ್ಯದಲ್ಲಿ ಯುವಕರ ಸಂಖ್ಯೆ ಹೆಚ್ಚಿದೆ, ಅವರು ಉನ್ನತ ಶಿಕ್ಷಣ ಪಡೆದಿದ್ದಾರೆ. ಆದರೆ, ಅವರು ನಿರುದ್ಯೋಗ ಸಮಸ್ಯೆ ಎದುರಿಸುವಂತಾಗಿದೆ. ಇಂತಹ ಸ್ಥಿತಿ ಬರಬಾರದು, ಸ್ಥಳೀಯ ಮಟ್ಟದಲ್ಲಿ ಅವರಿಗೆ ಉದ್ಯೋಗ ಸಿಗುವ ವ್ಯವಸ್ಥೆಯಾಗಬೇಕು' ಎಂದರು.
'ಆರೋಗ್ಯ ಕ್ಷೇತ್ರದತ್ತ ಹೆಚ್ಚು ಗಮನ ಹರಿಸಬೇಕು. ಗರ್ಭಿಣಿಯರಿಗೆ ಉತ್ತಮ ಪೌಷ್ಠಕಾಂಶ ಯುಕ್ತ ಆಹಾರವನ್ನು ಒದಗಿಸುವ ಕೆಲಸವಾಗಬೇಕು. ವೃದ್ಧರು, ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಆರೋಗ್ಯ ಸೇವೆಗಳು ಉತ್ತಮವಾಗಿ ದೊರೆಯವು ಕರ್ನಾಟಕ ನನ್ನದಾಗಬೇಕು' ಎಂದು ಹೇಳಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications