ಮತ ಹಾಕಲು ಅಂಗವಿಕಲರಿಗೆ ವಿಶೇಷ ಸೌಲಭ್ಯ:ಸಂಜೀವ್ ಕುಮಾರ್
ಬೆಂಗಳೂರು, ಮೇ 1: ಮತದಾನದಲ್ಲಿ ಪ್ರತಿಯೊಬ್ಬರು ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂಬ ಉದ್ದೇಶದಿಂದ ಚುನಾವಣಾ ಆಯೋಗ ದಿವ್ಯಾಂಗರಿಗಾಗಿ ಪ್ರಸ್ತುತ ವಿಧಾನ ಸಭಾ ಚುನಾವಣೆಯ ಅಂಗವಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ತಿಳಿಸಿದರು.
ದಿವ್ಯಾಂಗರ ಮತದಾನವನ್ನು ಪ್ರೋತ್ಸಾಹಿಸಲು ಹಾಗೂ ದಿವ್ಯಾಂಗರಿಗಾಗಿ ಚುನಾವಣಾ ಆಯೋಗ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸುತ್ತಾ ರಾಜ್ಯದಲ್ಲಿ 3,40,276 ದಿವ್ಯಾಂಗಚೇತನರಿದ್ದು ಈ ಪೈಕಿ 3,35,966 ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿದ್ದಾರೆ.
ಇತ್ತೀಚೆಗಷ್ಟೆ ಮುಕ್ತಾಯಗೊಂಡ ವಿಶೇಷ ಮತದಾರರ ನೋಂದಣಿ ಅಭಿಯಾನದಲ್ಲಿ ದಿವ್ಯಾಂಗರಿಗೆ ಹೆಚ್ಚಿನ ಒತ್ತು ನೀಡಿದ್ದರಿಂದ ಸುಮಾರು 13,243 ದಿವ್ಯಾಂಗರು ಹೊಸದಾಗಿ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿದ್ದಾರೆ.

ದೇಶದ ಕೀರ್ತಿ ಪತಾಕೆಯನ್ನು ಹಾರಿಸಿದ ಅಶ್ವಿನಿ ಅಂಗಡಿ ಮತ್ತು ಪ್ಯಾರಾ ಒಲಂಪಿಯಡ್ ಗಿರೀಶ್ ಅವರನ್ನು ಚುನಾವಣಾ ರಾಯಭಾರಿಗಳನ್ನಾಗಿ ಆಯ್ಕೆ ಮಾಡಲಾಗಿದ್ದು ಇದರಿಂದ ದಿವ್ಯಾಂಗರಿಗೆ ಮತದಾನದ ಬಗ್ಗೆ ಉತ್ಸಾಹ ತುಂಬಬಹುದು ಎಂದು ಹೇಳಿದರು.
ದಿವ್ಯಾಂಗರ ಅನುಕೂಲಕ್ಕಾಗಿ ಮತಗಟ್ಟೆಗಳಲ್ಲಿ ಅನೇಕ ರೀತಿಯ ದಿವ್ಯಾಂಗ ಸ್ನೇಹಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರತಿ ಮತಗಟ್ಟೆಯಲ್ಲೂ ದಿವ್ಯಾಂಗರು ಸುಲಭವಾಗಿ ಮತಗಟ್ಟೆ ಪ್ರವೇಶಿಸಲು ಅನುವಾಗುವಂತೆ ರ್ಯಾಂಪ್ಗಳನ್ನು ನಿರ್ಮಿಸಲಾಗಿದೆ.
ವಿಕಲಾಂಗರ ವಾಹನಗಳಿಗೆ ಮತಗಟ್ಟೆ ಹತ್ತಿರ ನಿಲುಗಡೆಗೆ ಅವಕಾಶ ಮಾಡಿಕೊಡಲಾಗಿದೆ. ಅವರುಗಳು ಸಹಾಯಕ್ಕಾಗಿ ಸ್ವಯಂ ಸೇವಕ ಸಿಬ್ಬಂದಿಗಳಿರುತ್ತಾರೆ. ಜೊತೆಗೆ ಸುಲಭವಾಗಿ ಮತದಾನ ಮಾಡಲು ಅವರುಗಳಿಗೆ ಸರತಿಯಲ್ಲಿ ನಿಲ್ಲುವ ಬದಲು ನೇರವಾಗಿ ಮತ ಚಲಾಯಿಸಲು ಮೊದಲ ಅವಕಾಶ ಮಾಡಿಕೊಡಲಾಗುತ್ತದೆ.
ಮತ ಯಂತ್ರಗಳಲ್ಲಿ ಅಂಧ ವ್ಯಕ್ತಿಗಳಿಗಾಗಿ ಬ್ರೈಲ್ ಲಿಪಿಯನ್ನು ಅಳವಡಿಸಲಾಗಿದೆ. ದೃಷ್ಠಿ ಮಂದವುಳ್ಳ ವ್ಯಕ್ತಿಗಳಿಗಾಗಿ ಭೂತಕನ್ನಡಿಯನ್ನು ನೀಡಲಾಗುತ್ತದೆ. ಮತಗಟ್ಟೆ ಪ್ರವೇಶಿಸುವ ಅಂಗವಿಕಲರು ಕೆಲಕಾಲ ವಿರಮಿಸಿಕೊಳ್ಳಲು ಅನುವಾಗುವಂತೆ ಆಸನ ವ್ಯವಸ್ಥೆಯನ್ನು ಮಾಡಲಾಗಿದೆ.
ಪ್ರಸ್ತುತ ರಾಜ್ಯ ವಿಧಾನಸಭಾ ಚುನಾವಣೆಗೆ ತಮ್ಮನ್ನು ರಾಯಭಾರಿಯನ್ನಾಗಿ ಆಯ್ಕೆ ಮಾಡಿದ್ದಕ್ಕೆ ಚುನಾವಣಾ ಆಯೋಗಕ್ಕೆ ತಾವು ಅಭಾರಿ, ಸಾರ್ವಜನಿಕರು ಯಾವುದೇ ಆಮಿಷಗಳಿಗೆ ಒಳಗಾಗದೆ ಉತ್ತಮ ನಾಯಕರನ್ನು ಆರಿಸಬೇಕು, ಕೃತಕಕೊಡುಗೆಗಳಿಗೆ ಮಾರು ಹೋಗಬೇಡಿ ನಾನು ಮತದಾನ ಮಾಡುತ್ತೇನೆ ನೀವು ಸಹ ಮತದಾನ ಮಾಡಿ ಎಂದು ಅಶ್ವಿನಿ ಅಂಗಡಿ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications