ವಿಡಿಯೋ : ರವಿ ಸುಬ್ರಮಣ್ಯ ಅವರ ಕನಸಿನ ಕರ್ನಾಟಕ ಹೇಗಿರಬೇಕು?
Recommended Video

ವಿಧಾನಸಭೆ ಚುನಾವಣೆಯ ಹೊತ್ತಿಲಲ್ಲಿ ನಿಂತಿದ್ದೇವೆ. ನಮ್ಮ ರಾಜ್ಯ ಹೇಗೆ ಅಭಿವೃದ್ಧಿಯಾಗಬೇಕು? ಎಂಬ ಬಗ್ಗೆ ನಮ್ಮದೇ ಆದ ಕನಸು ಇರುತ್ತದೆ. ಅದಕ್ಕಾಗಿ ಯಾವ ಪಕ್ಷಕ್ಕೆ ಮತ ನೀಡಬೇಕು? ಎಂಬುದನ್ನು ತೀರ್ಮಾನಿಸಿ ಮತದಾನ ಮಾಡುತ್ತೇವೆ.
ಬಸವನಗುಡಿ ಕ್ಷೇತ್ರದ ಬಿಜೆಪಿ ಶಾಸಕ ರವಿ ಸುಬ್ರಮಣ್ಯ ಅವರು ಅವರ ಕನಸಿನ ಕರ್ನಾಟಕ ಹೇಗಿರಬೇಕು? ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಎರಡು ಬಾರಿ ಕ್ಷೇತ್ರದಲ್ಲಿ ಗೆದ್ದಿರುವ ಅವರು ಕ್ಷೇತ್ರ, ರಾಜ್ಯದ ಅಭಿವೃದ್ಧಿ ಬಗ್ಗೆ ನಿರೀಕ್ಷೆಗಳನ್ನು ಹೊಂದಿದ್ದಾರೆ.
ರವಿ ಸುಬ್ರಮಣ್ಯ ಅವರ ಕನಸಿನ ಕರ್ನಾಟಕ ಹೇಗಿರಲಿದೆ? ಎಂಬುದನ್ನು ವಿಡಿಯೋದಲ್ಲಿ ನೋಡಿ

ನನ್ನ ಕನಸಿನ ಕರ್ನಾಟಕ ಎಂದರೆ ಅಭಿವೃದ್ಧಿಯ ಕರ್ನಾಟಕ. ರಾಜ್ಯದ ಎಲ್ಲಾ ಜನರ ಅಭಿವೃದ್ಧಿಯ ಕರ್ನಾಟಕವಾಗಬೇಕು. ಯವಕರು, ರೈತರು, ಮಹಿಳೆಯರ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಬೇಕು. ಕರ್ನಾಟಕ ಮತ್ತು ದೇಶದ ಬೆನ್ನೆಲುಬು ರೈತ. ಅವರಿಗೆ ಅಗತ್ಯವಿರುವ ವಿದ್ಯುತ್, ನೀರಿನ ಸೌಲಭ್ಯ ಒದಗಿಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಗಮನ ಹರಿಸಬೇಕು.
ದೇಶದಲ್ಲಿ ಯುವ ಸಮಯದಾಯ ಹೆಚ್ಚಿದೆ. ದುಡಿಯುವ ಕೈಗಳಿಗೆ ಕೆಲಸ ಸಿಗಬೇಕು. ಹಳ್ಳಿಯಿಂದ ಸಾಕಷ್ಟು ವಲಸೆ ಆಗುತ್ತಿದೆ. ಯುವಜನರು ಹಳ್ಳಿಗಳನ್ನು ಬಿಟ್ಟು ಬರದಂತೆ ಅವರಿಗೆ ಅಲ್ಲೇ ಉದ್ಯೋಗ ಸಿಗುವಂತೆ ಮಾಡಬೇಕು.
ಹಳ್ಳಿಗಳು ಉಳಿಯಬೇಕು, ಕೃಷಿ ಜೊತೆ ಬೇರೆ ಉದ್ಯೋಗ ಸೃಷಿಯಾಗಬೇಕು. ನಗರ ಪ್ರದೇಶದ ಒತ್ತಡ ಕಡಿಮೆಯಾಗಬೇಕು. ಕಸ ಮುಕ್ತ ಕರ್ನಾಟಕ ನಿರ್ಮಾಣವಾಗಬೇಕು. ಆರೋಗ್ಯ ಸೇವೆಗಳು ಉತ್ತಮವಾಗಿ ಸಿಗಬೇಕು ಎಂದು ರವಿ ಸುಬ್ರಮಣ್ಯ ಕನಸನ್ನು ತೆರೆದಿಟ್ಟಿದ್ದಾರೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications