ಕರ್ನಾಟಕ ಮಹಿಳಾ ಮತದಾರರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ
ಬೆಂಗಳೂರು, ಮಾರ್ಚ್ 9: 2013ರ ಮತದಾರರ ಪಟ್ಟಿಗೆ ಹೋಲಿಸಿದರೆ ಈ ಸಲದ ಪಟ್ಟಿಯ ಪರಿಷ್ಕರಣೆಯಲ್ಲಿ ಮಹಿಳಾ ಮತದಾರರ ನೋಂದಣಿ ಪ್ರಮಾಣದಲ್ಲಿ ಶೇ.13ರಷ್ಟು ಹೆಚ್ಚಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಹೇಳಿದರು.
ಅಂತಾರಾಷ್ಟ್ರೀಯ ಮಹಿಳಾ ದಿನದ ನಿಮಿತ್ತ ನಿನ್ನೆ(ಮಾ.8) ಮಾರತಹಳ್ಳಿಯ ಬರ್ಥ್ ರೈಟ್ ಬೈ ರೈನ್ಬೋ ಚಿಲ್ಡ್ರನ್ಸ್ ಹಾಸ್ಪಿಟಲ್ ಆಯೋಜಿಸಿದ್ದ ವಾಕಥಾನ್ ನಲ್ಲಿ ಭಾಗವಹಿಸಿದ್ದ ಅವರು, ಮುಂದಿನ ವಿಧಾನಸಭೆಯ ಚುನಾವಣೆಗೆ ಮಹಿಳೆಯರು ದೊಡ್ಡ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಬೇಕು ಎಂದರು.

2018ರ ಪರಿಷ್ಕೃತ ಮತದಾರರ ಪಟ್ಟಿಯ ಪ್ರಕಾರ ಕರ್ನಾಟಕದಲ್ಲಿ 4,95,56,059 ಮತದಾರರಿದ್ದು ಅವರಲ್ಲಿ ಮಹಿಳೆಯರು 2,44,72,288 ಮಂದಿ ಇದ್ದಾರೆ. ಬೆಂಗಳೂರಿನಲ್ಲಿ 41,92,706 ಮಹಿಳಾ ಮತದಾರರಿದ್ದಾರೆ. 46,04,190 ಪುರುಷ ಮತದಾರರಿದ್ದಾರೆ ಎಂದು ಹೇಳಿದರು.
2013ರ ಮತದಾರರ ಪಟ್ಟಿಗೆ ಹೋಲಿಸಿದರೆ ಈ ಸಲದ ಪಟ್ಟಿಯ ಪರಿಷ್ಕರಣೆಯಲ್ಲಿ ಮಹಿಳಾ ಮತದಾರರ ನೋಂದಣಿ ಪ್ರಮಾಣದಲ್ಲಿ ಶೇ.13ರಷ್ಟು ಹೆಚ್ಚಾಗಿದೆ. '18-19ರ ವಯೋಮಾನದ 7.72 ಲಕ್ಷ ಯುವ ಮತದಾರರು ಈ ವಿಶೇಷ ಪರಿಷ್ಕರಣೆ ಸಮಯದಲ್ಲಿ ನೋಂದಣಿ ಮಾಡಿಕೊಂಡಿದ್ದು, ಒಟ್ಟು 15.42 ಲಕ್ಷ ಮತದಾರರು ಸೇರ್ಪಡೆಯಾಗಿದ್ದಾರೆ. 2013ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿನ ಲಿಂಗಾನುಪಾತ 958 ಇದ್ದು, ಈಗ 972ಕ್ಕೆ ಏರಿಕೆಯಾಗಿದೆ' ಎಂದು ಅವರು ಮಾಹಿತಿ ನೀಡಿದರು.
ಹಿಂದಿನ ಮತದಾರರ ಪಟ್ಟಿಯ ಪರಿಷ್ಕರಣೆ ಅನ್ವಯ ಮತದಾರರ ಲಿಂಗಾನುಪಾತ:
| ಪರಿಷ್ಕರಣೆಯ ವರ್ಷ | ಲಿಂಗಾನುಪಾತ | |
|---|---|---|
| 2013 ರ ವಿಧಾನಸಭಾ ಚುನಾವಣೆ | 958 | |
| 2014 ಲೋಕಸಭೆ ಚುನಾವಣೆ | 960 | |
| 2015 ಅಂತ್ಯಕ್ಕೆ | 963 | |
| 2016 ಅಂತ್ಯಕ್ಕೆ | 969 | |
| 2017 ಅಂತ್ಯಕ್ಕೆ | 969 | |
| 2018 ಕರಡು | 971 | |
| 2018 ಅಂತಿಮ | 972 | |
ಹಿಂದಿನ ಚುನಾವಣೆಗಳಲ್ಲಿ ಒಟ್ಟು ಮತದಾನ ಮಾಡಿದ ಮತದಾರರಲ್ಲಿ ಶೇಕಡಾವಾರು ಮಹಿಳಾ ಮತದಾರರ ಪ್ರಮಾಣ
| ಪರಿಷ್ಕರಣೆಯ ವರ್ಷ | % ಮಹಿಳೆಯರು | %ಪುರುಷರು | %ಇತರರು |
|---|---|---|---|
| 2013ರ ವಿಧಾನಸಭೆ ಚುನಾವಣೆ | 70.47 | 72.40 | 2 |
| 2014ರ ಲೋಕಸಭೆ ಚುನಾವಣೆ | 65.54 | 67 | 7 |
18 ವರ್ಷ ವಯೋಮಾನದ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗದೇ ಇದ್ದರೆ ನಾಮಪತ್ರಗಳನ್ನು ಸಲ್ಲಿಸುವ ಕೊನೆಯ ದಿನಾಂಕದವರೆಗೆ ಮತದಾರರು ತಮ್ಮ ಹೆಸರನ್ನು ಪಟ್ಟಿಯಲ್ಲಿ ಸೇರಿಸಬಹುದು ಎಂದರು. ರೈನ್ ಬೋ ಚಿಲ್ಡ್ರನ್ಸ್ ಹಾಸ್ಪಿಟಲ್ನ ಕ್ಲಸ್ಟರ್ ಹೆಡ್ ಮತ್ತು ಉಪಾಧ್ಯಕ್ಷ ನೀರಜ್ ಲಾಲ್ ಮಾತನಾಡಿ, ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಅರ್ಥಪೂರ್ಣ ರೀತಿಯಲ್ಲಿ ಆಚರಿಸಬೇಕೆಂದು ಬಯಸಿದ್ದೆವು. ಆದ್ದರಿಂದ ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳನ್ನು ಆಹ್ವಾನಿಸುವ ಮೂಲಕ ಮಹಿಳಾ ಮತದಾರರನ್ನು ಉತ್ತೇಜಿಸುವ ಮತ್ತು ಸಂದೇಶ ಪಸರಿಸುವ ಪ್ರಯತ್ನ ನಡೆಸಲಾಯಿತು ಎಂದರು. ಈ ವಾಕಥಾನ್ ಬೆಂಗಳೂರಿನಲ್ಲಿ ಸುರಕ್ಷಿತ ಮತ್ತು ಭದ್ರತೆಯ ಪರಿಸರವನ್ನು ಮಹಿಳೆಯರಿಗೆ ಸೃಷ್ಟಿಸುವ ಕುರಿತು ಅರಿವನ್ನು ಉಂಟು ಮಾಡಲು ಆಯೋಜಿಸಲಾಗಿತ್ತು. ಮಿಸೆಸ್ ಇಂಡಿಯಾ 2017 ತೃಪ್ತಿ ಅರವಿಂದ್ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದು ವಾಕಥಾನ್ ನೇತೃತ್ವ ವಹಿಸಿದ್ದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications