Dr Rajkumar: ಡಾ.ರಾಜ್ ಅಪಹರಣ ಪ್ರಕರಣಕ್ಕೆ ಇಂದಿಗೆ 25 ವರ್ಷ; ಜುಲೈ 30, 2000 ರಂದು ಅಪಹರಿಸಿದ್ದ ವೀರಪ್ಪನ್
ಬೆಂಗಳೂರು, ಜುಲೈ 30: ವರನಟ ಡಾ. ರಾಜ್ ಕುಮಾರ್ ಅಪಹರಣ ಪ್ರಕರಣಕ್ಕೆ ಇಂದಿಗೆ 25 ವರ್ಷಗಳು ಪೂರ್ಣವಾಗಿವೆ. 2000ನೇ ಜುಲೈ 30ರಂದು, ಪ್ರಸಿದ್ಧ ಚಿತ್ರನಟ ಡಾ. ರಾಜ್ ಕುಮಾರ್ ಅವರನ್ನು ಕಾಡುಗಳ್ಳ ವೀರಪ್ಪನ್ ಹಾಗೂ ಅವನ ತಂಡವು ಗಾಜನೂರಿನ ಅವರ ತೋಟದ ಮನೆಯಿಂದ ಅಪಹರಿಸಿತು. ಈ ಘಟನೆ ಕನ್ನಡಿಗರಿಗೆ ಮತ್ತು ಚಿತ್ರರಂಗಕ್ಕೆ ಕರಾಳ ನೆನಪಾಗಿ ಉಳಿದಿದೆ. ಆ ರಾತ್ರಿ ಭೀಮನ ಅಮಾವಾಸ್ಯೆ ದಿನವಾಗಿದ್ದು, ವೀರಪ್ಪನ್ 108 ದಿನಗಳ ಕಾಲ ಡಾ.ರಾಜ್ ಕುಮಾರ್ ಹಾಗೂ ಇನ್ನಿತರ ಮೂವರನ್ನು ಸತ್ಯ ಮಂಗಲ ಕಾಡಿನಲ್ಲಿ ಒತ್ತೆಯಾಳಾಗಿರಿಸಿಕೊಂಡಿದ್ದನು. ನಂತರ, 2000ರ ನವೆಂಬರ್ ನಲ್ಲಿ ಅವರನ್ನು ಬಿಡುಗಡೆಗೊಳಿಸಲಾಯಿತು.
ಈ ಅಪಹರಣ ಪ್ರಕರಣವು ರಾಷ್ಟ್ರವ್ಯಾಪಿ ಸಂಚಲನಕೊಂಡಿದ್ದು, ಈ ಪ್ರಕರಣ ಅಂದಿನ ಸರ್ಕಾರಕ್ಕೂ ಭಾರಿ ಸವಾಲು ತಂದಿತ್ತು. ಈ ಘಟನೆಗೆ ಕಾರಣ ವೀರಪ್ಪನ್ ಸರ್ಕಾರಕ್ಕೆ ನನ್ನ ಬೇಡಿಕೆಗಳನ್ನು ಈಡೇರಿಸುವೆಂದು ಸಂದೇಶ ನೀಡಿದ್ದರು. ಈ ಘಟನೆಯ 25ನೇ ವರ್ಷದ ನೆನಪಿನಲ್ಲಿ, ಇನ್ನೂ ಕರ್ನಾಟಕ ಜನರ ಮನದಲ್ಲಿ ಆತಂಕದ ನೆನಪಾಗಿ ಉಳಿದಿದೆ. ಕನ್ನಡಿಗರಿಗೆ, ಡಾ. ರಾಜ್ ಕುಮಾರ್ ಅಭಿಮಾನಿಗಳಿಗೆ ಜುಲೈ 30, 2000ನೇ ಇಸವಿ ಅಂದ್ರೆ ಮರೆಯಲಾಗದ ದಿನ. ಕನ್ನಡಿಗರ ಆರಾಧ್ಯ ದೈವ ಎಂದೆನಿಸಿದ್ದ ಅಣ್ಣಾವ್ರ ಕುಟುಂಬವನ್ನೇ ತಲ್ಲಣಗೊಳಿಸಿದ ಈ ಅಪಹರಣ ಘಟನೆ ಕರಾಳ ನೆನಪಾಗಿ ಉಳಿದಿದೆ.

ಡಾ.ರಾಜ್ಕುಮಾರ್ ಅವರಿಗೆ ಗಾಜನೂರನ್ನು ಕಂಡರೆ ಹೆಚ್ಚು ಪ್ರೀತಿ. ಅಲ್ಲಿರುವ ಅವರ ಜಮೀನಿನಲ್ಲಿ ಕೊರೆಸಿರುವ ಕೊಳವೆಬಾವಿಯಲ್ಲಿ ನೀರು ಬಂತೆಂಬ ಸುದ್ದಿ ತಿಳಿದು ಪತ್ನಿ ಪಾರ್ವತಮ್ಮ ಅವರೊಡನೆ ಗಾಜನೂರಿಗೆ ಬಂದಿದ್ದರು. ಆದರೆ, ಆ ರಾತ್ರಿ ವೇಳೆ ಕಾಡುಗಳ್ಳ ವೀರಪ್ಪನ್ ವರನಟ ರಾಜ್ ಕುಮಾರ್ ಅವರನ್ನೇ ಅಪಹರಿಸಿದ್ದ. ಸತ್ಯ ಮಂಗಲ ಕಾಡಿನಲ್ಲಿ ಒತ್ತೆಯಾಳಾಗಿರಿಸಿಕೊಂಡು 108 ದಿನಗಳ ನಂತರ ಬಿಡುಗಡೆಗೊಳಿಸಿದ್ದರು. ಇದೀಗ ಆ ಕಹಿ ಘಟನೆ ಕುರಿತು ಡಾ. ರಾಜ್ ಕುಮಾರ್ ಅವರ ಕುಟುಂಬಸ್ಥರು ಮಾತನಾಡಿದ್ದಾರೆ.
ಅಂದು ರಾತ್ರಿ ಬಂದೂಕುಗಳೊಂದಿಗೆ ಬಂದಿದ್ದ ವೀರಪ್ಪನ್ ಹಾಗೂ ಸಹಚರರು, ಮನೆಯನ್ನು ಕೂಡ ಸುತ್ತುವರಿದಿದ್ದರು. ಪಾರ್ವತಮ್ಮರಿಗೆ ಕ್ಯಾಸೆಟ್ ಕೊಟ್ಟು ಸರ್ಕಾರಕ್ಕೆ ತಲುಪಿಸಲು ಹೇಳಿದ್ದ. ಮನೆಯವರಿಗೆ, ಮಕ್ಕಳಿಗೆ ತೊಂದರೆ ಕೊಡಬೇಡ ನಾನೇ ನಿನ್ನ ಜೊತೆಗೆ ಬರ್ತೀನಿ ಅಂತಾ ಹೇಳಿ ನಟ ರಾಜ್ಕುಮಾರ್ ವೀರಪ್ಪನ್ ಜೊತೆಗೆ ಹೋಗಿದ್ರು. ಅವರ ಅಳಿಯ ಎಸ್.ಎ ಗೋವಿಂದರಾಜ್, ಸಹ ನಿರ್ದೇಶಕ ನಾಗಪ್ಪ ಮಾರಡಗಿ ಹಾಗೂ ಸಂಬಂಧಿ ನಾಗೇಶ್ ಅವರನ್ನು ವೀರಪ್ಪನ್ ಅಪಹರಿಸಿದ್ದರು ಎಂದು ರಾಜ್ ಕುಮಾರ್ ಕುಟುಂಬಸ್ಥರು ಹೇಳಿದ್ದಾರೆ.
ಅವತ್ತು ರಾತ್ರಿ 9 ಗಂಟೆ ಸಮಯ. ನ್ಯೂಸ್ ಮುಗಿದ ನಂತರ ಊಟ ಮಾಡಿ ವಿಷ್ಣುವರ್ಧನ್ ಸಿನಿಮಾ ನೋಡುತ್ತಿದ್ದರು. ಇನ್ನೂ ಅಣ್ಣಾವ್ರ ಟಿ ವಿ ನೋಡ್ತಾ ಇದ್ರು. ಅಣ್ಣಾವ್ರ ಜೊತೆಗೆ ಮೂರು ಜನ ಟಿವಿ ನೋಡ್ತಾ ಇದ್ರು. ನಾವು ಮನೆ ಹಿಂದೆ ಇದ್ವಿ. ಚಿಕ್ಕ ಹುಡುಗಿ ಬಂದು ನಮಗೆ ಹೇಳಿದ ಮೇಲೆ ನಾವು ಬಂದಿದ್ದು, ವೀರಪ್ಪನ್ ಹಿಂದೆ ಒಮ್ಮೆ ನೋಡಿದ್ವಿ. ನಮಗೆ ಭಯ ಆಯ್ತು. ಅಣ್ಣಾವ್ರು ಮಕ್ಕಳಿಗೆ ಏನು ತೊಂದರೆ ಮಾಡಬೇಡಿ. ನಾನೇ ಬರ್ತಿನಿ ಅಂತ ಅಣ್ಣಾವ್ರು ಅವರ ಜೊತೆಗೆ ಹೋದ್ರು ಎಂದು ಕುಟುಂಬಸ್ಥರು ಖಾಸಗಿ ವಾಹಿನಿ ಜೊತೆಗೆ ಮಾತನಾಡಿದ್ದಾರೆ.
ಅವತ್ತು ಡಾ. ರಾಜ್ ಕುಮಾರ್ ಅವರು ಅಪಹರಣ ಆದ ಕೆಲವೇ ನಿಮಿಷಗಳಲ್ಲಿ ನಡೆದು ಹೋದ ಅನಿರೀಕ್ಷಿತ ಬೆಳವಣಿಗೆಯಿಂದ ಗಾಜನೂರಿನ ಮನೆಯಲ್ಲಿದ್ದ ಎಲ್ಲರೂ ಕಂಗಾಲಾಗಿ ಹೋಗಿದ್ದರು. ಆದರೆ ಈ ಅನಿರೀಕ್ಷಿತ ಘಟನೆಯಿಂದ ಎದೆಗುಂದದೆ ಪಾರ್ವತಮ್ಮ ರಾಜ್ಕುಮಾರ್ ಅವರು ಅಂದು ರಾತ್ರಿಯೇ ಬೆಂಗಳೂರಿಗೆ ಪ್ರಯಾಣಿಸಿ ಅಂದಿನ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ವೀರಪ್ಪನ್ ನೀಡಿದ್ದ ಆಡಿಯೋ ಕ್ಯಾಸೆಟ್ ತಲುಪಿಸಿದ್ದರು.
-
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ












Click it and Unblock the Notifications