70th Filmfare Awards: ಶ್ರೀಮುರಳಿ ಅತ್ಯುತ್ತಮ ನಟ, ಕನ್ನಡ ಚಿತ್ರರಂಗದ ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ
ದಕ್ಷಿಣ ಭಾರತದ ಪ್ರತಿಷ್ಠಿತ ಸಿನಿಮಾ ಪ್ರಶಸ್ತಿ ಸಮಾರಂಭಗಳಲ್ಲಿ ಒಂದಾದ 70ನೇ ಫಿಲ್ಮ್ಫೇರ್ ಅವಾರ್ಡ್ಸ್ ಸೌತ್ (Filmfare Awards South) ಭರ್ಜರಿಯಾಗಿ ಕೇರಳದ ಕೊಚ್ಚಿಯಲ್ಲಿ ನಡೆಯಿತು. 2024ರಲ್ಲಿ ಬಿಡುಗಡೆಯಾದ ತೆಲುಗು, ತಮಿಳು, ಮಲಯಾಳಂ ಮತ್ತು ಕನ್ನಡ ಚಿತ್ರಗಳಿಗೆ ಈ ಬಾರಿಯ ಪ್ರಶಸ್ತಿಗಳು ಪ್ರಕಟಗೊಂಡಿವೆ. ಕನ್ನಡ ಚಿತ್ರರಂಗದ ಹಲವರು ಪ್ರಶಸ್ತಿಗೆ ಭಾಜನರಾಗಿದ್ದು, ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ.
'ಶಾಖಾಹಾರಿ'ಗೆ ಅತ್ಯುತ್ತಮ ಸಿನಿಮಾ ಪ್ರಶಸ್ತಿ
2024ನೇ ಸಾಲಿನ ಕನ್ನಡ ವಿಭಾಗದಲ್ಲಿ "ಶಾಖಾಹಾರಿ" ಚಿತ್ರಕ್ಕೆ ಅತ್ಯುತ್ತಮ ಸಿನಿಮಾ ಫಿಲ್ಮ್ಫೇರ್ ಸೌತ್ ಪ್ರಶಸ್ತಿ ಲಭಿಸಿದೆ. ವಿಭಿನ್ನ ಕಥಾಹಂದರ ಮತ್ತು ನಿರೂಪಣೆಯ ಮೂಲಕ ಈ ಚಿತ್ರ ಪ್ರೇಕ್ಷಕರ ಹಾಗೂ ವಿಮರ್ಶಕರ ಮೆಚ್ಚುಗೆ ಪಡೆದಿತ್ತು.

"ಬಘೀರ" ಸಿನಿಮಾದಲ್ಲಿನ ನಟನೆಗಾಗಿ ನಟ ರೋರಿಂಗ್ ಸ್ಟಾರ್ ಶ್ರೀಮುರಳಿ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಸಿಕ್ಕಿದೆ. "ಕೋಳಿ ಎಸ್ರು" ಚಿತ್ರದ ಅಭಿನಯಕ್ಕಾಗಿ ಅಕ್ಷತಾ ಪಾಂಡವಪುರ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ.
ಇತರ ಪ್ರಮುಖ ಪ್ರಶಸ್ತಿಗಳು
* ಅತ್ಯುತ್ತಮ ನಿರ್ದೇಶಕ: ಪೃಥ್ವಿ ಕೊಣನೂರು
* ಅತ್ಯುತ್ತಮ ಚಿತ್ರ (ವಿಮರ್ಶಕರು): ಬ್ಲಿಂಕ್
* ಅತ್ಯುತ್ತಮ ನಟ (ಕ್ರಿಟಿಕ್ಸ್): ಗೌರಿಶಂಕರ್-ಕೆರೆಬೇಟೆ
* ಅತ್ಯುತ್ತಮ ನಟಿ (ಕ್ರಿಟಿಕ್ಸ್): ಅಂಕಿತಾ ಅಮರ್-ಇಬ್ಬನಿ ತಬ್ಬಿದ ಇಳೆಯಲಿ
* ಅತ್ಯುತ್ತಮ ಪೋಷಕ ನಟ: ಗೋಪಾಲಕೃಷ್ಣ ದೇಶಪಾಂಡೆ (ಬ್ಲಿಂಕ್)
* ಅತ್ಯುತ್ತಮ ಪೋಷಕ ನಟಿ: ಪ್ರಿಯಾ ಶತಮರ್ಷನ್ (ಭೀಮಾ)
* ಅತ್ಯುತ್ತಮ ಸಂಗೀತ ನಿರ್ದೇಶಕ: ಅರ್ಜುನ್ ಜನ್ಯ (ಕೃಷ್ಣಂ ಪ್ರಣಯ ಸಖಿ)

* ಅತ್ಯುತ್ತಮ ಗಾಯಕ: ಜಸ್ಕರನ್ ಸಿಂಗ್-'ದ್ವಾಪರ' ಹಾಡು
* ಅತ್ಯುತ್ತಮ ಗಾಯಕಿ: ಶ್ರುತಿ ಪ್ರಹ್ಲಾದ್-'ಹಿತ್ತಲಕ ಕರಿಬೇಡ ಮಾವ' (ಕರಟಕ ದಮನಕ)
* ಅತ್ಯುತ್ತಮ ಗೀತರಚನೆ: ವಿ.ನಾಗೇಂದ್ರ ಪ್ರಸಾದ್ (ದ್ವಾಪರ ಹಾಡು)
* ಅತ್ಯುತ್ತಮ ಡೆಬ್ಯು ನಟ: ಸಮರ್ಜಿತ್ ಲಂಕೇಶ್ (ಗೌರಿ)
ದಕ್ಷಿಣ ಭಾರತದ ಅತ್ಯಂತ ಪ್ರತಿಷ್ಠಿತ ಸಿನಿಮಾ ಪ್ರಶಸ್ತಿ ಸಮಾರಂಭಗಳಲ್ಲಿ ಒಂದಾದ 70ನೇ ಫಿಲ್ಮ್ಫೇರ್ ಅವಾರ್ಡ್ಸ್ ಸೌತ್ ಅದ್ಧೂರಿಯಾಗಿ ಶನಿವಾರ ಫೆಬ್ರವರಿ 21ರಂದು ಕೇರಳದ ಕೊಚ್ಚಿಯಲ್ಲಿರುವ ಅಡ್ಲಕ್ಸ್ ಇಂಟರ್ನ್ಯಾಶನಲ್ ಕನ್ವೆನ್ಷನ್ ಸೆಂಟರ್ನಲ್ಲಿ ನಡೆಯಿತು. ಸಂಜೆ ವೇಳೆ ತಾರೆಯರ ಕಂಗೊಳಿಸುವ ರೆಡ್ ಕಾರ್ಪೆಟ್ ಕಾರ್ಯಕ್ರಮದೊಂದಿಗೆ ಸಮಾರಂಭ ಆರಂಭವಾಯಿತು. ಬಳಿಕ ಮುಖ್ಯ ವೇದಿಕೆಯಲ್ಲಿ ಮನಮೋಹಕ ನೃತ್ಯ ಪ್ರದರ್ಶನಗಳು, ವಿಶೇಷ ಸಂಗೀತ ಕಾರ್ಯಕ್ರಮಗಳು ಮತ್ತು ಹೃದಯಸ್ಪರ್ಶಿ ಕ್ಷಣಗಳ ನಡುವೆ ಪ್ರಶಸ್ತಿಗಳ ವಿತರಣೆ ನಡೆಯಿತು.
ಮಲಯಾಳಂ, ತಮಿಳು, ತೆಲುಗು ಮತ್ತು ಕನ್ನಡ ಚಿತ್ರರಂಗಗಳ ಸಾಧಕರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ದಕ್ಷಿಣ ಭಾರತ ಚಿತ್ರರಂಗದ ತಾರೆಗಳು, ನಿರ್ದೇಶಕರು, ಸಂಗೀತ ನಿರ್ದೇಶಕರು ಹಾಗೂ ತಾಂತ್ರಿಕ ತಂಡಗಳ ಉಪಸ್ಥಿತಿಯಿಂದ ಈ ಸಮಾರಂಭ ಮತ್ತಷ್ಟು ಕಂಗೊಳಿಸಿ ಸಿನಿಪ್ರಿಯರಿಗೆ ಇದು ಮರೆಯಲಾಗದ ಸಂಭ್ರಮದ ರಾತ್ರಿಯಾಯಿತು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications