ಅಪ್ಪು ಹೆಸರಲ್ಲಿ ಹೀಗಾ ಮಾಡೋದು? ವಿಷಯ ಗೊತ್ತಾದ್ರೆ ಅಭಿಮಾನಿಗಳ ರಕ್ತ ಕುದಿಯುತ್ತೆ!
ಸ್ಯಾಂಡಲ್ವುಡ್ ನಟ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿಗಳ ಹೃದಯದಲ್ಲಿ ದೇವರಾಗಿ ನೆಲೆಸಿದ್ದಾರೆ. ಅಪ್ಪು ಸ್ಮರಣಾರ್ಥ ಹಲವರು ಪುಣ್ಯದ ಕೆಲಸಗಳನ್ನು ಮಾಡುತ್ತಿದ್ದಾರೆ. ಅನ್ನದಾನ, ಶಿಕ್ಷಣ ಸೇರಿದಂತೆ ಹಲವು ಜನೋಪಯೋಗಿ ಕೆಲಸಗಳ ಮೂಲಕ ಆರಾಧಿಸುತ್ತಿದ್ದಾರೆ. ಆದರೆ, ಅಪ್ಪು ಹೆಸರಿಗೆ ಕಳಂಕ ತರುವ ಯತ್ನವೊಂದು ನಡೆದಿರುವುದು ಬೆಳಕಿಗೆ ಬಂದಿದೆ.
ರಾಜ್ಯಾದ್ಯಂತ ಪುನೀತ್ ರಾಜ್ಕುಮಾರ್ ಅವರ ಹೆಸರಿನಲ್ಲಿ ಒಳ್ಳೆಯ ಕೆಲಸಗಳೇ ನಡೆಯುತ್ತಿದ್ದು, ಯಾರೋ ಅಪರಿಚಿತ ವ್ಯಕ್ತಿಯೊಬ್ಬ ಅಪ್ಪು ಅವರ ಹೆಸರಿನಲ್ಲಿ ವಂಚನೆ ಮಾಡಲು ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಪುನೀತ್ ರಾಜ್ಕುಮಾರ್ ಅಭಿಮಾನಿ ಸಂಘದ ಹೆಸರಿನಲ್ಲೇ ಯಾವುದೋ ವ್ಯಕ್ತಿ ನಕಲಿ ಕ್ರೀಡಾಕೂಟದ ಪೋಸ್ಟರ್ ಮಾಡಿಸಿ ಹರಿಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಪೋಸ್ಟರ್ನಲ್ಲಿ ನ್ಯಾಷನಲ್ ಲೆವೆಲ್ ಪುರುಷರ ಮತ್ತು ಮಹಿಳೆಯರ ಓಟದ ಸ್ಪರ್ಧೆ ಆಯೋಜಿಸಿರುವುದಾಗಿ ಮುದ್ರಿಸಲಾಗಿದೆ. ಈ ಪೋಸ್ಟರ್ ಮೂಲಕ ಅಮಾಯಕರನ್ನು ವಂಚಿಸುವ ಉದ್ದೇಶ ಹೊಂದಿದ್ದಾನೆ ಎನ್ನಲಾಗಿದೆ. ಈ ಪೋಸ್ಟರ್ನಲ್ಲಿ ಕ್ರೀಡಾಕೂಟದ ಸ್ಥಳ ಮಳವಳ್ಳಿ ಎಂದು ಮುದ್ರಿಸಿದ್ದು, ಅಸಲಿಗೆ ಇಂತಹ ಯಾವುದೇ ಕ್ರೀಡಾಕೂಟ ಅಲ್ಲಿ ಆಯೋಜಿಸುತ್ತಿಲ್ಲ ಎಂಬುದು ಗೊತ್ತಾಗಿದೆ.
ಇನ್ನು ಈ ನಕಲಿ ಪೋಸ್ಟರ್ನಲ್ಲಿ ಕ್ರೀಡಾಕೂಟಕ್ಕೆ ಭಾರಿ ಮೊತ್ತದ ನಗದು ಬಹುಮಾನ ಕೂಡ ಇರುವುದಾಗಿ ಪ್ರಕಟಣೆ ಹೊರಡಿಸಲಾಗಿದೆ. ಓಟದ ಸ್ಪರ್ಧೆಯಲ್ಲಿ ಗೆದ್ದವರಿಗೆ 5 ಲಕ್ಷ ರೂಪಾಯಿ ಪ್ರಥಮ ಬಹುಮಾನ, 4 ಲಕ್ಷ ದ್ವಿತೀಯ ಬಹುಮಾನ ಹಾಗೂ ಕ್ರಮವಾಗಿ 3 ಲಕ್ಷ, 2 ಲಕ್ಷ ಹಾಗೂ 1 ಲಕ್ಷ ರೂಪಾಯಿ ನಗದು ಬಹುಮಾನ ಇರುವುದಾಗಿ ಪ್ರಕಟಣೆಯಲ್ಲಿದೆ. ವಾಟ್ಸಾಪ್ ಸೇರಿದಂತೆ ಸೋಶಿಯಲ್ ಮೀಡಿಯಾದಲ್ಲಿ ಈ ಪೋಸ್ಟರ್ ಶೇರ್ ಮಾಡಲಾಗಿದ್ದು, ಇದನ್ನು ಹಲವರು ನಿಜ ಎಂದೇ ಭಾವಿಸಿದ್ದಾರೆ.

ಈ ನಕಲಿ ಪೋಸ್ಟರ್ ರಾಶಿರಾಪು ಸೇನಾ ಸಮಿತಿ ಕಣ್ಣಿಗೆ ಬಿದ್ದಿದ್ದು, ಕೂಡಲೇ ಮಳವಳ್ಳಿ ಠಾಣೆಗೆ ತೆರಳಿ ದೂರು ದಾಖಲಿಸಿದೆ. ಯಾರೋ ಅಪರಿಚಿತ ವ್ಯಕ್ತಿಯು ಈ ರೀತಿ ವಂಚನೆ ಮಾಡಲು ಅಪ್ಪು ಅವರ ಹೆಸರನ್ನು ಬಳಸಿಕೊಳ್ಳುತ್ತಿದ್ದಾನೆ. ಓಟದ ಸ್ಪರ್ಧೆಯಲ್ಲಿ ಭಾಗವಹಿಸಲು ಮುಂಗಡವಾಗಿ 3,500 ರೂಪಾಯಿ ಎಂಟ್ರಿ ಫೀಸ್ ಕಟ್ಟಬೇಕು ಎಂದೂ ಪ್ರಕಟಣೆಯಲ್ಲಿದ್ದು, ಹಲವರು ಈ ಸ್ಪರ್ಧೆ ನಿಜವೆಂದು ನಂಬಿ ಹಣ ಹಾಕಿರುವ ಸಾಧ್ಯತೆಯೂ ಇದೆ ಎಂದು ದೂರಿದೆ.
ಇನ್ನು ನವೆಂಬರ್ 20ರಂದು ಬೆಳಿಗ್ಗೆ 8 ಗಂಟೆಗೆ ಈ ಓಟದ ಸ್ಪರ್ಧೆ ನಡೆಯಲಿದ್ದು, ಇದನ್ನು ಮಂಡ್ಯ ಜಿಲ್ಲೆಯ ಮಳವಳ್ಳಿಯ ಡಾ.ಪುನೀತ್ ರಾಜಕುಮಾರ್ ಅಭಿಮಾನಿ ಬಳಗ ಆಯೋಜಿಸುತ್ತಿದೆ ಎಂದು ಬಿಂಬಿಸಲಾಗಿದೆ. ಆದರೆ, ಈ ಪೋಸ್ಟರ್ ಅನ್ನು ಮುಧೋಳದಲ್ಲಿ ಮುದ್ರಿಸಲಾಗಿದ್ದು, ಇದು ಸಂಪೂರ್ಣ ನಕಲಿ ಎಂದು ಆರೋಪ ಮಾಡಲಾಗಿದೆ.

ಸ್ಪರ್ಧೆ ಮಾಡಿರುವ ವ್ಯಕ್ತಿ ಬಗ್ಗೆ ಇನ್ನೂ ಯಾವುದೇ ಮಾಹಿತಿ ಸಿಕ್ಕಿಲ್ಲ. ಕೆಲವರು ಈ ಪೋಸ್ಟರ್ ಓದಿ ಭಾರಿ ಮೊತ್ತದ ನಗದು ಬಹುಮಾನ ಪಡೆಯುವ ಆಸೆಗೆ ಮುಂಗಡ ಹಣ ನೀಡುವ ಸಾಧ್ಯತೆಯೂ ಇದೆ. ದಯವಿಟ್ಟು ಯಾರೂ ಕೂಡ ಈ ರೀತಿ ಪೋಸ್ಟರ್ ನಂಬಿ ಮೊದಲೇ ಹಣ ಕಳಿಸಿ ವಂಚನೆಗೆ ಒಳಗಾಗಬೇಡಿ ಎಂದು ರಾಶಿರಾಪು ಸೇನಾ ಸಮಿತಿ ಅಧ್ಯಕ್ಷ ದೊಡ್ಡಯ್ಯ ಮನವಿ ಮಾಡಿದ್ದಾರೆ. ಸದ್ಯ ಈ ವಿಚಾರವು ಅಪ್ಪು ಅಭಿಮಾನಿಗಳು ಗರಂ ಆಗುವಂತೆ ಮಾಡಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications