ದರ್ಶನ್ ಜೈಲಲ್ಲೂ ಜಾಲಿ, ʼಇದ್ರೆ ನೆಮ್ದಿಯಾಗ್ ಇರ್ಬೇಕು..ʼ ಅಂದ್ರೆ ಹೀಗೇನಾ?
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವುದು ಗೊತ್ತೇ ಇದೆ. ಜೈಲಿನಲ್ಲಿ ದರ್ಶನ್ ಅವರು ಸಾಮಾನ್ಯ ಕೈದಿಯಂತಿದ್ದಾರೆ. ಜೈಲಿಗೆ ಹೋದ ನಂತರ ಅವರು ಸರಿಯಾಗಿ ಊಟ ಮಾಡದೆ, ಬಹಳ ನೊಂದಿದ್ದಾರೆ ಎಂದೆಲ್ಲ ಹೇಳಲಾಗುತ್ತಿತ್ತು. ಆದರೆ, ಇಂದು ಲೀಕ್ ಆಗಿರುವ ಜೈಲಿನಲ್ಲಿರುವ ದರ್ಶನ್ ಫೋಟೋ ಈ ಎಲ್ಲವನ್ನೂ ಸುಳ್ಳು ಮಾಡಿದೆ. ಅಲ್ಲದೇ ಎಲ್ಲರಿಗೂ ಶಾಕ್ ಕೂಡ ನೀಡಿದೆ.
ಹೌದು, ದರ್ಶನ್ ಪರಪ್ಪನ ಅಗ್ರಹಾರದಲ್ಲಿ ಮುದ್ದೆ ಮುರಿಯುತ್ತಿದ್ದಾರೆ ಎಂದುಕೊಂಡಿದ್ದವರಿಗೆ ಶಾಕ್ ನೀಡುವಂತಹ ಫೋಟೋ ಲೀಕ್ ಆಗಿದ್ದು, ಇದರಲ್ಲಿ ದರ್ಶನ್ ʼಇದ್ರೆ ನೆಮ್ದಿಯಾಗ್ ಇರ್ಬೇಕುʼ ಅನ್ನೋ ರೀತಿ ಜಾಲಿ ಮೂಡ್ನಲ್ಲಿದ್ದಾರೆ. ಕೈಯಲ್ಲಿ ಸ್ಟೈಲಾಗಿ ಕಾಫಿ ಮಗ್ ಹಿಡಿದುಕೊಂಡು, ಮತ್ತೊಂದು ಕೈಯಲ್ಲಿ ಸಿಗರೇಟ್ ಹಚ್ಚಿಕೊಂಡು ಥೇಟ್ ಓಪನ್ ಪಾರ್ಟಿ ಹಾಲ್ನಲ್ಲಿರುವಂತೆ ಕುಳಿತು ಎಂಜಾಯ್ ಮಾಡ್ತಿದ್ದಾರೆ. ಕೊಲೆ ಕೇಸ್ನಲ್ಲಿ ಜೈಲಿನಲ್ಲಿರುವುದರಿಂದ ದರ್ಶನ್ ಮುಖದಲ್ಲಿ ಸಂಕಟ ಇರುತ್ತೆ ಎಂದೆಲ್ಲ ಹೇಳಲಾಗುತ್ತಿತ್ತು. ಅವರನ್ನು ಇತ್ತೀಚೆಗೆ ಭೇಟಿಯಾಗಿ ಬಂದವರೂ ಇದೇ ಮಾತನ್ನು ಹೇಳಿದ್ದರು. ಆದರೆ ಈ ಫೋಟೋದಲ್ಲಿ ದರ್ಶನ್ ನಗುತ್ತಾ ಚಿಲ್ ಮಾಡುತ್ತಿದ್ದಾರೆ.

ಈ ಫೋಟೋ ಸೋಶಿಯಲ್ ಮೀಡಿಯಾಗಳಲ್ಲಿ ಸಖತ್ ವೈರಲ್ ಆಗಿದ್ದು, ಇದಕ್ಕೆ ʼಇದ್ರೆ ನೆಮ್ದಿಯಾಗ್ ಇರ್ಬೇಕು...ʼ ಎಂದು ಕಾಮೆಂಟ್ ಮಾಡಲಾರಂಭಿಸಿದ್ದಾರೆ. ಯಾಕೆ ಅಂದ್ರೆ, ಹಲವು ವರ್ಷಗಳ ಹಿಂದೆ ದರ್ಶನ್ ಅವರದ್ದು ಎನ್ನಲಾದ ಆಡಿಯೋವೊಂದು ಎಲ್ಲೆಡೆ ಹರಿದಾಡಿತ್ತು. ಅದರಲ್ಲಿ ಖುದ್ದು ದರ್ಶನ್ ಅವರಂತಹ ಧ್ವನಿಯಲ್ಲೇ ʼಇದ್ರೆ..ನೆಮ್ದಿಯಾಗ್ ಇರ್ಬೇಕುʼ ಎನ್ನುವ ಸಾಲುಗಳಿತ್ತು. ಈಗ ಈ ಫೋಟೋಗೆ ಆ ಡೈಲಾಗ್ ಸೇರಿ ಶೇರ್ ಮಾಡುತ್ತಿದ್ದಾರೆ.
ಇನ್ನು ದರ್ಶನ್ ಮೂರ್ನಾಲ್ಕು ಮಂದಿಯೊಂದಿಗೆ ಕುಳಿತು ಜಾಲಿಯಾಗಿ ಮಾತುಕತೆ ನಡೆಸುತ್ತಿರುವ ಫೋಟೋದಲ್ಲಿ ಬೆಂಗಳೂರಿನ ನಟೋರಿಯಸ್ ರೌಡಿ ವಿಲ್ಸನ್ ಗಾರ್ಡನ್ ನಾಗ ಕೂಡ ಇದ್ದಾನೆ ಎನ್ನಲಾಗಿದೆ. ಸದ್ಯ ಜೈಲು ಸೇರಿದ್ದರೂ ಒಳಗೆ ಆರಾಮದಾಯಕವಾಗಿ ಟೀ ಕುಡಿಯುತ್ತಾ, ಹರಟೆ ಹೊಡೆಯುತ್ತಿರುವ ಫೋಟೊ ವೈರಲ್ ಆದ ಬೆನ್ನಲ್ಲೇ ದರ್ಶನ್ಗೆ ರಾಜಾತಿಥ್ಯ ನೀಡಲಾಗುತ್ತಿದೆಯೇ ಎನ್ನುವ ಪ್ರಶ್ನೆಗಳು ಉದ್ಭವಿಸಿದೆ.

ಯಾಕಂದ್ರೆ, ನಟ ದರ್ಶನ್ ತೂಗುದೀಪ ಮನೆ ಊಟಕ್ಕಾಗಿ ಅರ್ಜಿ ಸಲ್ಲಿಸಿದ್ದರೂ, ಮನೆ ಊಟ ಕೊಡಲು ಸಾಧ್ಯವಿಲ್ಲ ಎಂದು ಪರಪ್ಪನ ಅಗ್ರಹಾರ ಜೈಲಿನ ಅಧಿಕಾರಿಗಳು ಹೇಳಿದ್ದರು. ಅಧಿಕಾರಿಗಳು ಕೂಡ ಕಾನೂನಿಗೆ ಮುಂದೆ ಯಾರೂ ದೊಡ್ಡವರಲ್ಲ. ಎಲ್ಲರಿಗೂ ಒಂದೇ ನ್ಯಾಯ ಎಂದೆಲ್ಲ ಡೈಲಾಗ್ ಹೊಡೆದಿದ್ದರು. ಆದರೆ ಅವರು ಹೇಳಿದ್ದಕ್ಕೂ ಈ ಫೋಟೋದಲ್ಲಿ ನೋಡುತ್ತಿರುವುದಕ್ಕೂ ಸಂಬಂಧವೇ ಇಲ್ಲ ಎನ್ನುವ ಹಾಗಿದೆ. ಇನ್ನು ದರ್ಶನ್ ಜೈಲಿಗೆ ಹೋದ ಮೇಲೆ ಕೂದಲು ಬೋಳಿಸಲಾಗಿದೆ ಎಂದು ಹೇಳಲಾಗಿತ್ತು. ಆದರೆ ಅಧಿಕೃತವಾಗಿ ಈ ಬಗ್ಗೆ ಫೋಟೋಗಳು ಲಭ್ಯವಾಗಿರಲಿಲ್ಲ. ಸದ್ಯ ಲೀಕ್ ಆಗಿರುವ ಫೋಟೋದಲ್ಲಿ ದರ್ಶನ್ ಅವರ ತಲೆ ಬೋಳಿಸಿರುವುದು ನಿಜ ಎನ್ನಲಾಗಿದೆ.
ಫೋಟೊ ಲೀಕ್ ಆಗಿದ್ದು ಹೇಗೆ?: ಜೈಲಿನಲ್ಲಿ ದರ್ಶನ್ ಹೇಗಿರಬಹುದು? ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಇದೀಗ ಜೈಲಿನಲ್ಲಿ ದರ್ಶನ್ ಮೋಜು ಮಸ್ತಿ ಮಾಡುತ್ತಿರುವುದು ಒಂದೆಡೆ ಶಾಕ್ ನೀಡಿದ್ದರೆ, ಈ ಫೋಟೊ ಲೀಕ್ ಆಗಿದ್ದಾದರೂ ಹೇಗೆ ಎನ್ನುವ ಪ್ರಶ್ನೆ ಎಲ್ಲರ ತಲೆಯಲ್ಲಿ ಬಂದು ನಿಂತಿದೆ. ಮೂಲಗಳ ಪ್ರಕಾರ ಜೈಲಿನಲ್ಲಿರುವ ಕೈದಿಯೊಬ್ಬ ಈ ಫೋಟೊ ತೆಗೆದು ತನ್ನ ಹೆಂಡತಿಗೆ ವಾಟ್ಸಾಪ್ ಮಾಡಿದ್ದನಂತೆ. ಬಳಿಕ ಫೋಟೋ ಅಲ್ಲಿಂದಲೇ ಲೀಕ್ ಆಗಿದೆ ಎಂದು ಹೇಳಲಾಗುತ್ತಿದೆ. ಅತಿರೇಕ ಅಂದ್ರೆ ಈ ಫೋಟೋ ನೋಡಿದ ದರ್ಶನ್ ಅಭಿಮಾನಿಗಳು ʼಸಿಂಹ ಎಲ್ಲಿದ್ರೂ ಸಿಂಹಾನೇ..ʼ ಎಂದೆಲ್ಲ ಬೆನ್ನುತಟ್ಟಿಕೊಳ್ಳುತ್ತಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications