A.R.Rahman: ಖ್ಯಾತ ಗಾಯಕ ಎ.ಆರ್.ರೆಹಮಾನ್ ಆಸ್ಪತ್ರೆಗೆ ದಾಖಲು
A.R.Rahman: ಖ್ಯಾತ ಸಂಗೀತ ಸಂಯೋಜಕ ಎ.ಆರ್.ರೆಹಮಾನ್ ಅವರಿಗೆ ಇಂದು (ಮಾರ್ಚ್ 16) ಬೆಳಗ್ಗೆ ದಿಢೀರ್ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಚೆನ್ನೈನ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂಲಗಳ ಪ್ರಕಾರ, ಎ.ಆರ್.ರೆಹಮಾನ್ ಅವರನ್ನು ಆಸ್ಪತ್ರೆಯ ತುರ್ತು ವಾರ್ಡ್ಗೆ ದಾಖಲಿಸಲಾಗಿದೆ. ಅಲ್ಲಿ ಅವರಿಗೆ ವೈದ್ಯರು ಇಸಿಜಿ ಮತ್ತು ಎಕೋಕಾರ್ಡಿಯೋಗ್ರಾಮ್ ಸೇರಿದಂತೆ ಪರೀಕ್ಷೆಗಳನ್ನು ನಡೆಸಿದರು. ವೈದ್ಯರ ತಂಡವು ಅವರ ಆರೋಗ್ಯದ ಸ್ಥಿತಿಯನ್ನು ಪರಿಶೀಲನೆ ನಡೆಸಿದ್ದು, ಆಂಜಿಯೋಗ್ರಾಮ್ ಮಾಡಿಸಬಹುದು ಎಂದು ಆಸ್ಪತ್ರೆಯ ನಿಕಟ ಮೂಲಗಳು ಸೂಚಿಸಿವೆ. ಅವರ ಆರೋಗ್ಯದ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ಸಿಎಂ ಸ್ಟಾಲಿನ್ ಹೇಳಿದ್ದೇನು?: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ರೆಹಮಾನ್ ಅವರ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ನೀಡಿದ್ದು, ತಾವು ವೈದ್ಯರೊಂದಿಗೆ ಮಾತನಾಡಿದ್ದು ರೆಹಮಾನ್ ಅವರು ಚೆನ್ನಾಗಿದ್ದಾರೆ. ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆ ಹೊಂದಲಿದ್ದಾರೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ರೆಹಮಾನ್ ಅವರ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಸುದ್ದಿ ತಿಳಿದ ತಕ್ಷಣ, ನಾನು ವೈದ್ಯರನ್ನು ಸಂಪರ್ಕಿಸಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದೆ. ಅವರು ಚೆನ್ನಾಗಿದ್ದಾರೆ ಮತ್ತು ಶೀಘ್ರದಲ್ಲೇ ಮನೆಗೆ ಮರಳುತ್ತಾರೆ ಎಂದು ವೈದ್ಯರು ಹೇಳಿದ್ದಾರೆ ಎಂದು ಬರೆದುಕೊಂಡಿದ್ದಾರೆ.
58 ವರ್ಷದ ಎ.ಆರ್.ರೆಹಮಾನ್ ಅವರನ್ನು ಇಂದು ಮುಂಜಾನೆ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಅವರ ವ್ಯವಸ್ಥಾಪಕ ಸೆಂಥಿಲ್ ವೇಲನ್ ತಿಳಿಸಿದ್ದಾರೆ. ಎ.ಆರ್.ರೆಹಮಾನ್ ಈ ಹಿಂದೆ ಕತ್ತು ನೋವಿಗೂ ಒಳಗಾಗಿದ್ದರು ಅಂತಲೂ ಹೇಳಿದ್ದಾರೆ.
ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಎ.ಆರ್.ರೆಹಮಾನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ವರದಿಗಳನ್ನು ಅವರ ಸಹೋದರಿ ರೈಹಾನಾ ತಳ್ಳಿಹಾಕಿದ್ದಾರೆ. ಅವರು ನಿರ್ಜಲೀಕರಣ ಹಾಗೂ ಉದರ ಸಂಬಂಧಿ ತೊಂದರೆಗೊಳಗಾಗಿದ್ದರು ಎಂದು ಅವರು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.
ಎರಡು ಬಾರಿಯ ಆಸ್ಕರ್ ಪ್ರಶಸ್ತಿ ಹಾಗೂ ಒಮ್ಮೆ ಗ್ರಾಮಿ ಪ್ರಶಸ್ತಿಗೆ ಭಾಜನರಾಗಿರುವ ಎ.ಆರ್.ರೆಹಮಾನ್, 'ರೋಜಾ', 'ದಿಲ್ ಸೆ', 'ಎಂದಿರನ್' ಹಾಗೂ 'ಸ್ಲಮ್ ಮಿಲಿಯನೇರ್' ಚಿತ್ರಗಳಿಗೆ ಸಂಯೋಜಿಸಿದ ಸಂಗೀತದಿಂದ ವಿಶ್ವವಿಖ್ಯಾತ ಸಂಗೀತ ನಿರ್ದೇಶಕರೆನಿಸಿಕೊಂಡಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications