ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಹುಟ್ಟುಹಬ್ಬದ ಸಂಭ್ರಮಕ್ಕೆ ರಾಜ್ಯಾದ್ಯಂತ ಕಳೆ ಬಂದಿದೆ. ಅಪ್ಪು ಅವರ ಜನ್ಮದಿನದ (ಮಾರ್ಚ್ 17) ಅಂಗವಾಗಿ ಅವರ ಅಭಿನಯದ ಸೂಪರ್ ಹಿಟ್ ಚಿತ್ರ "ಆಕಾಶ್" ಭರ್ಜರಿಯಾಗಿ ಮರುಬಿಡುಗಡೆಯಾಗಿದೆ. ಅಭಿಮಾನಿಗಳ ಸಡಗರ ಮುಗಿಲು ಮುಟ್ಟಿದೆ. ಈ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿದ್ದು ಚಿತ್ರದ ನಾಯಕಿ, ಸ್ಯಾಂಡಲ್ವುಡ್ ಕ್ವೀನ್ ರಮ್ಯಾ. ಬೆಂಗಳೂರಿನ ಕೆ.ಜಿ ರಸ್ತೆಯ ನರ್ತಕಿ ಚಿತ್ರಮಂದಿರದಲ್ಲಿ ಅಭಿಮಾನಿಗಳ ಜೊತೆ ಕುಳಿತು ಸಿನಿಮಾ ವೀಕ್ಷಿಸುವ ಮೂಲಕ ರಮ್ಯಾ ಸರ್ಪ್ರೈಸ್ ನೀಡಿದ್ದಾರೆ.
ಪುನೀತ್ ರಾಜ್ಕುಮಾರ್ ಅವರ ಜನ್ಮದಿನದ ಪ್ರಯುಕ್ತ ಪ್ರತಿ ವರ್ಷ ಅವರ ಜನಪ್ರಿಯ ಚಿತ್ರಗಳನ್ನು ಮರುಬಿಡುಗಡೆ ಮಾಡುವುದು ವಾಡಿಕೆ. ಈ ಬಾರಿ 2005ರಲ್ಲಿ ತೆರೆಕಂಡು ಸಾರ್ವಕಾಲಿಕ ದಾಖಲೆ ಬರೆದಿದ್ದ "ಆಕಾಶ್" ಚಿತ್ರವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಚಿತ್ರಮಂದಿರಗಳ ಮುಂದೆ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಕಟೌಟ್ಗಳಿಗೆ ಹೂವಿನ ಹಾರ ಹಾಕಿ, ಪಟಾಕಿ ಸಿಡಿಸಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

ಥಿಯೇಟರ್ನಲ್ಲಿ ರಮ್ಯಾ ಸಂಭ್ರಮ
ಬೆಂಗಳೂರಿನ ನರ್ತಕಿ ಚಿತ್ರಮಂದಿರಕ್ಕೆ ಸರ್ಪ್ರೈಸ್ ಭೇಟಿ ನೀಡಿದ ನಟಿ ರಮ್ಯಾ, ಸಾಮಾನ್ಯ ಪ್ರೇಕ್ಷಕರಂತೆ ಅಭಿಮಾನಿಗಳ ಜೊತೆ ಕುಳಿತು ಸಿನಿಮಾ ವೀಕ್ಷಿಸಿದರು. ಚಿತ್ರದಲ್ಲಿ ಅಪ್ಪು ಅವರ ಎಂಟ್ರಿ ದೃಶ್ಯ ಬರುತ್ತಿದ್ದಂತೆ ಇಡೀ ಚಿತ್ರಮಂದಿರ 'ಅಪ್ಪು.. ಅಪ್ಪು..' ಎಂಬ ಘೋಷಣೆಗಳಿಂದ ಮೊಳಗಿತು. ರಮ್ಯಾ ಕೂಡ ಅಭಿಮಾನಿಗಳ ಜೊತೆಗೂಡಿ ಚಪ್ಪಾಳೆ ತಟ್ಟಿ ಸಂಭ್ರಮಿಸಿದರು. ಈ ಚಿತ್ರದ ಎವರ್ಗ್ರೀನ್ ಮೆಲೋಡಿ ಸಾಂಗ್ "ನೀನೇ ನೀನೇ ನನಗೆಲ್ಲಾ ನೀನೇ" ಹಾಡು ತೆರೆಯ ಮೇಲೆ ಬರುತ್ತಿದ್ದಂತೆ, ರಮ್ಯಾ ಅವರು ಅಭಿಮಾನಿಗಳ ಜೊತೆ ಸೇರಿ ಹಾಡನ್ನು ಎಂಜಾಯ್ ಮಾಡಿದ್ದಾರೆ.
Cutie @divyaspandana ❤️😍#AkashReRelease #Ramya
— ⋆𝒜𝒷𝒽𝒾 ⋆ (@NimmaAbhiii) March 13, 2026
pic.twitter.com/nzNLUnncVX
ತಮ್ಮ ಈ ಅನುಭವದ ವಿಡಿಯೋಗಳನ್ನು ರಮ್ಯಾ ಅವರು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. "ಅಪ್ಪು ಅವರನ್ನು ಮತ್ತೆ ತೆರೆಯ ಮೇಲೆ ನೋಡುವುದು ಭಾವುಕ ಕ್ಷಣ" ಎಂಬರ್ಥದ ಶೀರ್ಷಿಕೆಯೊಂದಿಗೆ ಅವರು ವಿಡಿಯೋ ಪೋಸ್ಟ್ ಮಾಡಿದ್ದು, ಅಪ್ಪು ಅಭಿಮಾನಿಗಳು ಇದಕ್ಕೆ ಭಾರಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಪ್ಪು ಅವರ ಅನುಪಸ್ಥಿತಿಯಲ್ಲೂ ಅವರ ಮೇಲಿರುವ ಪ್ರೀತಿ ಕಿಂಚಿತ್ತೂ ಕಡಿಮೆಯಾಗಿಲ್ಲ ಎಂಬುದಕ್ಕೆ ಹೌಸ್ಫುಲ್ ಪ್ರದರ್ಶನ ಕಾಣುತ್ತಿರುವ ಈ ಚಿತ್ರಮಂದಿರಗಳೇ ಸಾಕ್ಷಿ.
ಕನ್ನಡ ಚಿತ್ರರಂಗದ ಇತಿಹಾಸದಲ್ಲಿ 'ಆಕಾಶ್' (2005) ಒಂದು ಮೈಲಿಗಲ್ಲು. ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಮತ್ತು 'ಸ್ಯಾಂಡಲ್ವುಡ್ ಕ್ವೀನ್' ರಮ್ಯಾ ಅಭಿನಯದ ಈ ಚಿತ್ರವು ಇಂದಿಗೂ ಕನ್ನಡಿಗರ ನೆಚ್ಚಿನ ಫ್ಯಾಮಿಲಿ ಎಂಟರ್ಟೈನರ್. ಆಕಾಶ್ (ಪುನೀತ್) ಒಬ್ಬ ಜವಾಬ್ದಾರಿಯುತ ಯುವಕ. ತನ್ನ ತಂಗಿಯ ಮದುವೆಯ ಜವಾಬ್ದಾರಿಯನ್ನು ಹೊತ್ತಿರುವವನು. ಇನ್ನೊಂದೆಡೆ ನಂದಿನಿ (ರಮ್ಯಾ) ಶ್ರೀಮಂತ ಮನೆತನದ ಹುಡುಗಿ. ಪರಿಸ್ಥಿತಿಯ ಒತ್ತಡದಿಂದ ಇವರಿಬ್ಬರೂ ಮದುವೆಯಾಗಬೇಕಾಗುತ್ತದೆ. ಆರಂಭದಲ್ಲಿ ಮನಸ್ತಾಪಗಳಿದ್ದರೂ, ನಂತರ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳುವ ಪರಿಯನ್ನು ನಿರ್ದೇಶಕ ಮಹೇಶ್ ಬಾಬು ಅತ್ಯಂತ ಸುಂದರವಾಗಿ ತೆರೆಯ ಮೇಲೆ ತಂದಿದ್ದರು.
ಪುನೀತ್ ಮತ್ತು ರಮ್ಯಾ ಜೋಡಿಯನ್ನು ಕನ್ನಡಿಗರು ಅಪ್ಪಿ ಒಪ್ಪಿಕೊಂಡಿದ್ದರು. ಈ ಚಿತ್ರದ ಯಶಸ್ಸಿನಲ್ಲಿ ಈ ಜೋಡಿಯ ಕೆಮಿಸ್ಟ್ರಿ ಪ್ರಮುಖ ಪಾತ್ರ ವಹಿಸಿತ್ತು. ಅಪ್ಪು ಅವರ ಎನರ್ಜಿ ಮತ್ತು ರಮ್ಯಾ ಅವರ ಮುಗ್ಧತೆ ಚಿತ್ರಕ್ಕೆ ಕಳೆ ನೀಡಿತ್ತು. ಆಕಾಶ್ ಚಿತ್ರದ ಹಾಡುಗಳು ಇಂದಿಗೂ ಎವರ್ಗ್ರೀನ್. 'ನೀನೇ ನೀನೇ ನನಗೆಲ್ಲಾ ನೀನೇ': ಈ ಹಾಡು ಪ್ರೇಮಿಗಳ ಫೇವರೆಟ್. ಇನ್ನು 'ಹಬ್ಬ ಹಬ್ಬ' ಅಪ್ಪು ಅವರ ಅದ್ಭುತ ಡ್ಯಾನ್ಸ್ನಿಂದಾಗಿ ಈ ಹಾಡು ದೊಡ್ಡ ಹಿಟ್ ಆಯ್ತು. ಚಿತ್ರದಲ್ಲಿ ಅವಿನಾಶ್, ಆಶಿಶ್ ವಿದ್ಯಾರ್ಥಿ, ಪವಿತ್ರಾ ಲೋಕೇಶ್, ನಟ ಕಿಶೋರ್ ಮುಂತಾದ ಘಟಾನುಘಟಿ ಕಲಾವಿದರು ನಟಿಸಿದ್ದರು. ಈ ಚಿತ್ರ ಬೆಂಗಳೂರಿನ ಪ್ರಮುಖ ಚಿತ್ರಮಂದಿರಗಳಲ್ಲಿ 25 ವಾರಗಳಿಗೂ ಹೆಚ್ಚು ಕಾಲ ಪ್ರದರ್ಶನ ಕಂಡು ದಾಖಲೆ ಬರೆದಿತ್ತು. ಪುನೀತ್ ರಾಜ್ಕುಮಾರ್ ಅವರ ಕೆರಿಯರ್ನಲ್ಲಿ 'ಆಕಾಶ್' ಅತ್ಯಂತ ಯಶಸ್ವಿ ಕಮರ್ಷಿಯಲ್ ಚಿತ್ರಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ.
Cutie @divyaspandana ❤️😍#AkashReRelease #Ramya
— ⋆𝒜𝒷𝒽𝒾 ⋆ (@NimmaAbhiii) March 13, 2026
pic.twitter.com/nzNLUnncVX
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ













Click it and Unblock the Notifications