60ನೇ ಹುಟ್ಟುಹಬ್ಬಕ್ಕೆ 3ನೇ ಗರ್ಲ್ ಫ್ರೆಂಡ್ ಪರಿಚಯಿಸಿದ ನಟ ಆಮಿರ್ ಖಾನ್
ಬಾಲಿವುಡ್ ನಟ ಆಮಿರ್ ಖಾನ್ ಇಂದು ತಮ್ಮ 60ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈಗಾಗಲೇ ತಮ್ಮ ಹುಟ್ಟುಹಬ್ಬದ ಆಚರಣೆಯನ್ನು ಅಭಿಮಾನಿಗಳು ಹಾಗೂ ಆಪ್ತರ ಜೊತೆ ಆರಂಭಿಸಿರುವ ಆಮಿರ್ ಖಾನ್, ಈ ವಿಶೇಷ ದಿನದಂದೇ ಒಬ್ಬ ವಿಶೇಷ ವ್ಯಕ್ತಿಯನ್ನು ಜನರಿಗೆ ಪರಿಚಯಿಸಿದ್ದಾರೆ.
60ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿ ಆಮಿರ್ ಖಾನ್ ತಮ್ಮ ಮೂರನೇ ಗರ್ಲ್ ಫ್ರೆಂಡ್ ಗೌರಿ ಎನ್ನುವವರನ್ನು ಅಭಿಮಾನಿಗಳಿಗೆ ಪರಿಚಯಿಸಿದ್ದು, ತಮ್ಮ ಪ್ರೀತಿ ಬಗ್ಗೆ ಒಪ್ಪಿಕೊಂಡಿದ್ದಾರೆ. ನಿನ್ನೆ ಆಮಿರ್ ಖಾನ್ ಅಭಿಮಾನಿಗಳ ಜೊತೆ ಹುಟ್ಟುಹಬ್ಬವನ್ನು ಆಚರಿಸಿದ್ದು, ಈ ವೇಳೆ ತಮ್ಮ ಜೊತೆಯಲ್ಲಿದ್ದ ಗೌರಿ ಅವರನ್ನು ಪರಿಚಯಿಸಿ ಇವರೇ ತಮ್ಮ ಪ್ರೀತಿ ಎಂದು ಹೇಳಿಕೊಂಡಿದ್ದಾರೆ.

ಆಮಿರ್ ಖಾನ್ 1986ರಲ್ಲಿ ರೀನಾ ದತ್ತ ಅವರನ್ನು ಮದುವೆಯಾಗಿದ್ದರು, ಬಳಿಕ ಅವರಿಂದ ದೂರಾಗಿ 2005ರಲ್ಲಿ ಕಿರಣ್ ರಾವ್ ಎನ್ನುವವರನ್ನು ಮದುವೆಯಾದರು. 2021ರಲ್ಲಿ ಕಿರಣ್ ರಾವ್ ಜೊತೆಗಿನ ಸಂಬಂಧಕ್ಕೆ ಅಂತ್ಯ ಹಾಡಿ ವಿಚ್ಛೇದನ ಪಡೆದಿದ್ದರು. ಈಗಾಗಲೇ ಎರಡು ಮದುವೆಯಾಗಿ ವಿಚ್ಛೇದನ ಪಡೆದುಕೊಂಡು ಒಂಟಿಯಾಗಿದ್ದ ಆಮಿರ್ ಖಾನ್ ಇದೀಗ ಮೂರನೇ ಮದುವೆಗೆ ಸಜ್ಜಾಗಿದ್ದಾರೆ.
ತಮ್ಮ ಪ್ರೋಡಕ್ಷನ್ ಹೌಸ್ನಲ್ಲಿ ಕೆಲಸ ಮಾಡುವ ಗೌರಿ ಎನ್ನುವ ಮಹಿಳೆಯನ್ನೇ ಆಮಿರ್ ಖಾನ್ ಪ್ರೀತಿಸುತ್ತಿದ್ದಾರೆ. 25 ವರ್ಷಗಳಿಂದ ಆಮಿರ್ ಖಾನ್ ಹಾಗೂ ಗೌರಿ ಪರಿಚಯಸ್ಥರಾಗಿದ್ದು, ಕಳೆದ 18 ತಿಂಗಳುಗಳಿಂದ ಇಬ್ಬರೂ ಪ್ರೀತಿಯಲ್ಲಿ ಬಿದ್ದಿದ್ದಾರೆ. ಈ ಬಗ್ಗೆ ಸ್ವತಃ ಹೇಳಿಕೊಂಡಿರುವ ಆಮಿರ್ ಖಾನ್, ಗೌರಿ ಅವರ ಫೋಟೋವನ್ನು ಎಲ್ಲಿಯೂ ವೈರಲ್ ಮಾಡದಂತೆ ಹುಟ್ಟುಹಬ್ಬದ ಆಚರಣೆಗೆ ಬಂದವರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಕರ್ನಾಟಕ ಮೂಲದ ಗೌರಿ ಪರಿಚಯ
ಕಳೆದ 25 ವರ್ಷಗಳಿಂದ ಆಮಿರ್ ಖಾನ್ ಪ್ರೋಡಕ್ಷನ್ ಹೌಸ್ನಲ್ಲಿ ಕೆಲಸ ಮಾಡುತ್ತಿರುವ ಗೌರಿ ಕರ್ನಾಟಕ ರಾಜ್ಯದ ಬೆಂಗಳೂರು ಮೂಲದವರು. ಹಲವು ವರ್ಷಗಳಿಂದ ಮುಂಬೈನಲ್ಲಿ ವಾಸವಿದ್ದು, ಬಾಲಿವುಡ್ ಚಿತ್ರರಂಗದ ತೆರೆ ಹಿಂದಿನ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಇನ್ನು ಗೌರಿ ಅವರಿಗೆ ಕೂಡ ಈಗಾಗಲೇ ಮದುವೆಯಾಗಿದ್ದು, ಆರು ವರ್ಷದ ಮಗನಿದ್ದಾನೆ ಎನ್ನಲಾಗಿದೆ. ಆಮಿರ್ ಖಾನ್ ಹುಟ್ಟುಹಬ್ಬದಲ್ಲಿ ಒಂದು ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಅದು ಗೌರಿ ಫೋಟೋ ಎನ್ನಲಾಗುತ್ತಿದೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications