ಶಿವಣ್ಣ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಐಶ್ವರ್ಯಾ ರೈ ಪುತ್ರಿ: ಆರಾಧ್ಯಾ ಸಂಸ್ಕಾರಕ್ಕೆ ಭಾರೀ ಮೆಚ್ಚುಗೆ
ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈ ಅವರ ಮಗಳು ಆರಾಧ್ಯಾ ಯಾರಿಗೆ ತಾನೇ ಗೊತ್ತಿಲ್ಲ. ತಾಯಂತೆ ಮುದ್ದಾದ ಮುಖ, ಸದಾ ನಗುವಿನಿಂದಲೇ ಎಲ್ಲರ ಮೆಚ್ಚುಗೆ ಗಳಿಸಿರುವ ಆರಾಧ್ಯ ಇದೀಗ ತಮಗಿರುವ ಸಂಸ್ಕಾರದಿಂದ ಮತ್ತೆ ಎಲ್ಲರ ಹೃದಯ ಗೆದ್ದಿದ್ದಾರೆ. ಆರಾಧ್ಯಾ ಯಾವಾಗಲೂ ತಮ್ಮ ತಾಯಿ ಐಶ್ವರ್ಯಾ ರೈ ಅವರ ಜೊತೆಯಲ್ಲಿ ಕಾಣಿಸಿಕೊಳ್ಳುತ್ತಾರೆ. ಸಾಮಾನ್ಯವಾಗಿ ಸಿನಿಮಾ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ಭಾಗಿಯಾಗುತ್ತಿದ್ದು, ಇತ್ತೀಚಿಗೆ ನಡೆದ ಸೈಮಾ ಅವಾರ್ಡ್ಸ್ಗೂ ಆರಾಧ್ಯಾ ಆಗಮಿಸಿದ್ದರು.
ಸೈಮಾ ಅವಾರ್ಡ್ಸನಲ್ಲಿ ಮಿಂಚಿದ ಆರಾಧ್ಯಾಳ ಅನೇಕ ಫೋಟೋಗಳು ವಿಡಿಯೋಗಳು ಎಲ್ಲೆಡೆ ವೈರಲ್ ಆಗುತ್ತಿದೆ. ಅದರಲ್ಲಿ ಆರಾಧ್ಯಾ ಕಲಿತಿರುವ ಸಂಸ್ಕಾರ ಎಂತಹದ್ದು ಎನ್ನುವ ವಿಡಿಯೋವೊಂದು ವೈರಲ್ ಆಗುತ್ತಿದ್ದು, ನೋಡುಗರು ಅದರಲ್ಲೂ ಆರಾಧ್ಯಾ ಕನ್ನಡಿಗರ ಮನಸ್ಸನ್ನು ಮತ್ತಷ್ಟು ಗೆದ್ದಿದ್ದಾರೆ.

ಇತ್ತೀಚಿಗಷ್ಟೇ ದುಬೈನಲ್ಲಿ ಸೈಮಾ ಪ್ರಶಸ್ತಿ ಪ್ರಧಾನ ಸಮಾರಂಭ ನಡೆದಿದೆ. ಭಾರತೀಯ ಎಲ್ಲಾ ಚಿತ್ರರಂಗದ ಗಣ್ಯರು ಭಾಗಿಯಾಗಿದ್ದರು. ಅನೇಕ ತಾರೆಯರು ಸೈಮಾದಲ್ಲಿ ಪ್ರಶಸ್ತಿ ಗಳಿಸಿ ಮಿಂಚಿದರು. ಬಾಲಿವುಡ್ ಎವೆರ್ಗ್ರೀನ್ ಬ್ಯೂಟಿ ಐಶ್ವರ್ಯ ರೈ ಕೂಡ . ಪೊನ್ನಿಯನ್ ಸೆಲ್ವನ್ ಚಿತ್ರದಲ್ಲಿನ ಅಭಿನಯಕ್ಕೆ ಅತ್ಯುತ್ತಮ ನಾಯಕಿ ಪ್ರಶಸ್ತಿ ಪಡೆದುಕೊಂಡರು. ಈ ವೇಳೆ ಮಗಳು ಆರಾಧ್ಯಾ ಜೊತೆಯಲ್ಲಿದ್ದರು.
ಸೈಮಾ ವೇದಿಕೆಯಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದ ಐಶ್ವರ್ಯ ರೈ, ಚಿಯಾನ್ ವಿಕ್ರಮ್ ಜೊತೆ ವೇದಿಕೆಯಿಂದ ಕೆಳಗಿಳಿದು ಬಂದರು. ಈ ವೇಳೆ ವೇದಿಕೆ ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಎದುರಿಗೆ ಬರುತ್ತಿದ್ದರು. ವೇದಿಕೆಯ ಮುಂಭಾಗದಲ್ಲಿ ಎದುರಾದ ವಿಕ್ರಮ್ ಅವರನ್ನು ಶಿವಣ್ಣ ಮಾತನಾಡಿಸಿದರು.

ಈ ವೇಳೆ ಐಶ್ವರ್ಯ ರೈ ಬಚ್ಚನ್ ಸ್ವಲ್ಪ ಮುಂದೆ ಹೋಗಿ ನಂತರ ಹಿಂದೆ ತಿರುಗಿ ನೋಡಿದ ಐಶ್ವರ್ಯ ರೈ, ಡಾ.ಶಿವರಾಜ್ ಕುಮಾರ್ ಅವರನ್ನು ಕಂಡು ಮರಳಿ ಹಿಂದೆ ಬಂದು ಮಾತನಾಡಿಸಿದ್ದಾರೆ. ಇಬ್ಬರು ಭಯ ಕುಶಲೋಪರಿ ವಿಚಾರಿಸಿದ್ದು, ಈ ವೇಳೆ ಐಶ್ವರ್ಯ ರೈ ತಮ್ಮ ಪುತ್ರಿ ಆರಾಧ್ಯಳನ್ನೂ ಡಾ.ಶಿವರಾಜ್ ಕುಮಾರ್ ಅವರಿಗೆ ಪರಿಚಯಿಸಿದ್ದಾರೆ. ಈ ಸಂದರ್ಭದಲ್ಲಿ ಆರಾಧ್ಯಾ ಅಲ್ಲಿಯೇ ಶಿವಣ್ಣನ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ಶಿವಣ್ಣ ಆರಾಧ್ಯಾಗೆ ಒಳ್ಳೆಯದಾಗಲಿ ಎಂದು ಹಾರೈಸಿದರು.
ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಆರಾಧ್ಯಾಳ ಸಂಸ್ಕಾರ ಕಂಡು ನೋಡುಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಮಗಳನ್ನು ಮುದ್ದಾಗಿ ಅಲ್ಲದೇ ಸಂಸ್ಕಾರವಂತಳಾಗಿ ಬೆಳೆಸಿದ್ದೀರಿ ಎಂದು ಐಶ್ವರ್ಯ ರೈ ಅವರನ್ನು ಕೂಡ ಶ್ಲಾಘೀಸಿದ್ದಾರೆ.
-
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications