ಸಿನಿಮಾ ಟ್ರೆಂಡಿಂಗ್.. ಮದುವೆ ಪೆಂಡಿಂಗ್: ಮದುವೆ ಬಗ್ಗೆ ಮೌನ ಮುರಿದ ಡಾಲಿ ಧನಂಜಯ್
ನಟ ರಾಕ್ಷಸ ಡಾಲಿ ಧನಂಜಯ್ ಅಭಿನಯ ಕೋಟಿ ಚಿತ್ರ ಜೂನ್ 14ರಂದು ಬಿಡುಗಡೆಯಾಗಲಿದೆ. ಹಲವು ದಿನಗಳ ಬಳಿಕ ಕನ್ನಡ ಚಿತ್ರರಂಗದಲ್ಲಿ ಬಹು ನಿರೀಕ್ಷಿತ ಸಿನಿಮಾವೊಂದು ತೆರೆ ಕಾಣುತ್ತಿದ್ದು, ಸಿನಿ ಪ್ರಿಯರು ಕಾತುರರಾಗಿದ್ದಾರೆ. ಈಗಾಗಲೇ ಕೋಟಿ ಚಿತ್ರದ ಟ್ರೇಲರ್ ಬಿಡುಗಡೆ ಮಾಡಲಾಗಿದ್ದು, ಡಾಲಿ ಧನಂಜಯ್ ಅಭಿಮಾನಿಗಳಂತೂ ಫುಲ್ ಖುಷಿಯಾಗಿದ್ದಾರೆ.
ಕೋಟಿ ಟ್ರೇಲರ್ ಸಖತ್ ವೈರಲ್ ಆಗುತ್ತಿದ್ದು, ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಇನ್ನು ಟ್ರೇಲರ್ ರಿಲೀಸ್ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದ್ದು, ಈ ವೇಳೆ ಡಾಲಿ ಧನಂಜಯ್ ತಮ್ಮ ಖಾಸಗಿ ಜೀವನದ ಬಗ್ಗೆ ಮಾತನಾಡಿದ್ದಾರೆ. ಡಾಲಿ ಮದುವೆ ಯಾವಾಗ ಎನ್ನುವ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ.

ಕೋಟಿ ಟ್ರೇಲರ್ ರಿಲೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಧನಂಜಯ್ 'ವರ್ಷಗಳು ಹೋಗುತ್ತಾ ಇರುತ್ತದೆ. ಅದು ಗೊತ್ತಾಗುವುದೇ ಇಲ್ಲ. ಸಿನಿಮಾದವರಿಗೆ ವಯಸ್ಸಾಗುವುದು ಗೊತ್ತಾಗಲ್ಲ, ಸತ್ತು ಹೋಗುವುದೂ ಗೊತ್ತಾಗಲ್ಲ. ಒಂದು ಸಿನಿಮಾ ಮಾಡುವುದರೊಳಗೆ ಎರಡು ವರ್ಷ ಕಳೆದು ಹೋಗಿರುತ್ತದೆ. ತಿರುಗಿ ನೋಡಿದಾಗ ಇಷ್ಟೋಂದು ಆಗೋಯ್ತಾ ಅನಿಸುತ್ತದೆ. ಇದು ಯಾವಾಗಲೂ ಅನಿಸುತ್ತದೆ.
ರೋಡಲ್ಲಿ ಫೋಟೋ ತೆಗೆಸಿಕೊಳ್ಳುವವರು ಕೂಡ ಮದುವೆ ಯಾವಾಗ ಅಂತ ಕೇಳುವ ಹಾಗೆ ಆಗಿದೆ. ನಮಗೆ ಗೊತ್ತಾಗಿಲ್ಲ.. ನಮಗಿನ್ನು 27 ವರ್ಷ ಆದರೆ ನೋಡುವವರಿಗೆ ಇಷ್ಟು ವರ್ಷ ಆಯ್ತು ಅನಿಸುತ್ತದೆ. ಏನು ಮಾಡೋಕೆ ಆಗಲ್ಲ' ಎಂದರು.

ಮಾಡೋ ಸಿನಿಮಾಗಳೆಲ್ಲಾ ಟ್ರೆಂಡಿಂಗ್ ಮದುವೆ ಮಾತ್ರ ಪೆಡ್ಡಿಂಗ್ ಎನ್ನುವ ಪ್ರಶ್ನೆಗೆ ಉತ್ತರಿಸಿದ ಡಾಲಿ ಧನಂಜಯ್ 'ಮದುವೆ ಬಗ್ಗೆ ಎಲ್ಲಾ ವೇದಿಕೆಯಲ್ಲೂ ಕೇಳುತ್ತಾರೆ. ಅದೇ ಹೇಳಿದನ್ನಲ್ಲಾ ರೋಡಲ್ಲಿ ಫೋಟೋ ತೆಗೆಸಿಕೊಳ್ಳುವವರು ಕೂಡ ಕೇಳುತ್ತಾರೆ. ಪ್ರಮಾಣ ಮಾಡಿದ್ದೀನಿ. ಕೋಟಿ ಚೆನ್ನಾಗಿ ಹಿಟ್ ಆಗಲಿ. ಪಕ್ಕಾ ಮದುವೆ ಆಗುತ್ತೇನೆ' ಎಂದಿದ್ದಾರೆ.
ಚೆನ್ನಾಗಿ ಆಗಿಲ್ಲ ಅಂದರೂ ಬಿಡಲ್ಲ, ತಾರಮ್ಮನೇ ಮದುವೆ ಮಾಡಿಸಿಬಿಡುತ್ತಾರೆ. ಇನ್ನೊಂದು ನಂದು ತಾರಮ್ಮ ಹಾಗೂ ರಂಗಾಯಣ ರಘು ಅವರದು ಹ್ಯಾಟ್ರಿಕ್ ಕಾಂಬಿನೇಶನ್. ಬಡವ ರಾಸ್ಕಲ್ ಸೂಪರ್ ಹಿಟ್, ಟಗರು ಪಲ್ಯ ನಾನು ಬರೀ ನಿರ್ಮಾಪಕ ಆದರೆ ಕಾಂಬಿನೇಶನ್ ಸೂಪರ್ ಹಿಟ್, ಕೋಟಿಲೂ ಅದು ರಿಪೀಟ್ ಆಗುತ್ತದೆ. ಕೋಟಿ ಸಿನಿಮಾ ಕೂಡ ಹಿಟ್ ಆಗುತ್ತದೆ. ಯಾಕೆಂದರೆ ಈ ಸಿನಿಮಾ ತುಂಬ ಚೆನ್ನಾಗಿದೆ' ಎಂದಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications