ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಮಿಲನಾ ನಾಗರಾಜ್, ಡಾರ್ಲಿಂಗ್ ಕೃಷ್ಣ ದಂಪತಿ
ಬೆಂಗಳೂರು, ಮಾರ್ಚ್ 08: ನಟಿ ಮಿಲನಾ ನಾಗರಾಜ್ ಹಾಗೂ ನಟ ಡಾರ್ಲಿಂಗ್ ಕೃಷ್ಣ ಶಿವರಾತ್ರಿ ಹಬ್ಬದಂದು ತಮ್ಮ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. 'ಲವ್ ಮಾಕ್ಟೆಲ್' ಸಿನಿಮಾ ಮೂಲಕ ಖ್ಯಾತಿ ಗಳಿಸಿದ ಈ ಜೋಡಿ ಮದುವೆಯಾದ ಮೂರು ವರ್ಷಗಳ ನಂತರ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.
ಸಿನಿಮಾಗಳಲ್ಲಿ ಮತ್ತು ತೆರೆಯ ಹಿಂದೆಯೂ ಕೂಡ ಜನರ ನೆಚ್ಚಿನ ಜೋಡಿ ಎನಿಸಿಕೊಂಡಿರುವ ಮಿಲನಾ ಹಾಗೂ ಕೃಷ್ಣ 2021ರ ಫೆಬ್ರವರಿ 14 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಮೂರನೇ ವರ್ಷಕ್ಕೆ ಅಭಿಮಾನಿಗಳ ಜೊತೆಗೆ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ. ಸ್ಯಾಂಡಲ್ವುಡ್ ಸೆಲಬ್ರಿಟಿಗಳು ಸೇರಿದಂತೆ ಫ್ಯಾನ್ಸ್ ಈ ಜೋಡಿಗೆ ಶುಭ ಹಾರೈಸುತ್ತಿದ್ದಾರೆ.

ಕಳೆದ ತಿಂಗಳಷ್ಟೇ ಮೂರನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದ ಮಿಲನಾ ನಾಗರಾಜ್, ಡಾರ್ಲಿಂಗ್ ತಮ್ಮ ನ್ಸ್ಟಾಗ್ರಾಂ ಖಾತೆಯಲ್ಲಿ ಶುಭ ಸುದ್ದಿ ಹಂಚಿಕೊಂಡಿದ್ದಾರೆ. ಬ್ಲೆಸ್ ಅಸ್ (ಆಶೀರ್ವದಿಸಿ) ಎಂದು ಶೀರ್ಷಿಕೆ ಕೊಟ್ಟು, ಪುಟ್ಟ ಮಗುವಿನ ಬಟ್ಟೆಯ ಫೋಟೋ ಶೇರ್ ಮಾಡಿದ್ದಾರೆ. ಬಟ್ಟೆಯ ಮೇಲೆ 'KrissMi'... ಡ್ಯೂ ಸೆಪ್ಟೆಂಬರ್ 2024 ಎಂದು ಬರೆಯಲಾಗಿದೆ.
ಮಗುವಿನ ನಿರೀಕ್ಷೆಯಲ್ಲಿರುವ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದಿದೆ. ನಟಿ ಅಮೃತಾ ಅಯ್ಯಂಗರ್ "ನಾನು ಅತ್ತೆಯಾಗುತ್ತಿದ್ದೇನೆ....ಅಭಿನಂದನೆಗಳು ಇಬ್ಬರಿಗೂ" ಎಂದಿದ್ದಾರೆ. ನಟಿ ರುಕ್ಮಿಣಿ ವಸಂತ್, ದಿವ್ಯ ಉರುಡುಗ, ಸುನಯನ, ಸಪ್ತಮಿ ಗೌಡ, ಸಂಯುಕ್ತ ಹೊರನಾಡು, ಖುಷಿ ರವಿ, ಹಿತ ಚಂದ್ರಶೇಖರ್, ಸಾನ್ವಿ ಶ್ರೀವತ್ಸವ್, ರಂಜನಿ ರಾಘವನ್, ದಿಶಾ ಮದನ್, ಅಮೂಲ್ಯ, ಶರಣ್ಯ ಶೆಟ್ಟಿ, ನಿಧಿ ಸುಬ್ಬಯ್ಯ ಸೇರಿದಂತೆ ಅನೇಕರು ಶುಭಾಶಯ ಹೇಳಿದ್ದಾರೆ.

2015ರಲ್ಲಿ ತೆರೆಗೆ ಬಂದ ಡಾರ್ಲಿಂಗ್ ಕೃಷ್ಣ ಅಭಿನಯದ 'ಚಾರ್ಲಿ' ಸಿನಿಮಾದಲ್ಲಿ ಮಿಲನಾ ನಾಗರಾಜ್ ಕೂಡ ನಟಿಸಿದ್ದರು. ಇಲ್ಲಿಂದ ಇವರ ಸಹ್ನೇಹ ಪ್ರೇಮವಾಗಿ ಹೆಮ್ಮರವಾಗಿ ಬೆಳೆದಿತ್ತು. ಮತ್ತೆ 'ಲವ್ ಮಾಕ್ಟೆಲ್' ಮೂಲಕ ಸಿನಿರಂಗದಲ್ಲಿ ಒಟ್ಟಾಗಿ ಭರ್ಜರಿ ಸಕ್ಸಸ್ ಕಂಡವರು. ತಮ್ಮ ಪ್ರೀತಿಗೆ 2021ರಲ್ಲಿ ದಾಂಪತ್ಯದ ಮುದ್ರೆ ಒತ್ತಿದ್ದರು. ಈಗ ಇವರ ಮನೆಗೆ ಪುಟ್ಟ ಮಗುವಿನ ಆಗಮನವಾಗುತ್ತಿದೆ.
ಇನ್ನು, ಇತ್ತೀಚೆಗೆ ಬಾಲಿವುಡ್ ಸೆಲಬ್ರಿಟಿ ಕಪಲ್ ರಣವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ಕೂಡ ತಮ್ಮ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿರುವ ಬಗ್ಗೆ ಅಭಿಮಾನಿಗಳ ಜೊತೆಗೆ ಸಿಹಿಸುದ್ದಿ ಹಂಚಿಕೊಂಡಿದ್ದರು. ಸೆಪ್ಟೆಂಬರ್ ತಿಂಗಳಲ್ಲಿ ಮಗು ಜನಿಸಲಿದೆ ಎಂದು ಸೂಚಿಸಿ ಪೋಸ್ಟ್ ಶೇರ್ ಮಾಡಿಕೊಂಡಿದ್ದರು.
-
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ -
‘ಲವ್ ಮಾಕ್ಟೇಲ್ 3’ ಕಥೆ ವಿವಾದ ಸುಖಾಂತ್ಯ: ಫಿಲ್ಮ್ ಚೇಂಬರ್ ಸಭೆಯಲ್ಲಿ ಡಾರ್ಲಿಂಗ್ ಕೃಷ್ಣ-ಗುರು ದೇಶಪಾಂಡೆ ಸಂಧಾನ ಯಶಸ್ವಿ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು











Click it and Unblock the Notifications