Darshan Attack: ಕೊಲೆ ಬಳಿಕ 'ನಿನ್ನಿಂದಲೇ ಇದೆಲ್ಲ ಆಯ್ತು': ಪವಿತ್ರಾ ಗೌಡ ಮೇಲೆ ದರ್ಶನ್ ಹಲ್ಲೆ, ಡಿಸ್ಚಾರ್ಜ್
ಬೆಂಗಳೂರು, ಜೂನ್ 11: ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಕೊಲೆ ಬಳಿಕ ನಟ ದರ್ಶನ್ ಹಲ್ಲೆ ತಮ್ಮ ಮೇಲೆ ಸಹ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ ಎಂದು ಪವಿತ್ರಾಗೌಡ ಅವರು ತಿಳಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಹೌದು, ದರ್ಶನ್ ಪ್ರೇಯಸಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೆಸೆಜ್ ಮಾಡಿದ್ದ ವ್ಯಕ್ತಿ ರೇಣುಕಾಸ್ವಾಮಿ ಅವರನ್ನು ಹತ್ಯೆ ಮಾಡಲಾಗಿದೆ. ಬಳಿಕ ಇದೆಲ್ಲವು ಆಗಿದ್ದ ನಿನ್ನಿಂದಲೇ ಎಂದು ನಟ ದರ್ಶನ್ ಪವಿತ್ರಾ ಗೌಡ ಮೇಲೆ ಹಲ್ಲೆ ಮಾಡಿದ್ದರು ಎನ್ನಲಾಗಿದೆ.

ದರ್ಶನ್ ನಿಂದ ಹಲ್ಲೆಗೆ ಒಳಗಾದ ಪವಿತ್ರಾ ಗೌಡ ಅವರು ನೆನ್ನೆ ಸೋಮವಾರ ವಷ್ಟೇ ಬೆಂಗಳೂರಿನ ರಾಜ ರಾಜೇಶ್ವರಿ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಚಿಕಿತ್ಸೆ ಬಳಿಕ ಅವರು ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದರು. ಇದೆಲ್ಲ ಅಂಶಗಳು ಇದೀಗ ನಟ ದರ್ಶನ್ ಗೆ ಸಂಬಂಧಿಸಿದ ಕೊಲೆ ಪ್ರಕರಣ ಮತ್ತಷ್ಟು ಉರುಳು ತರಲಿವೆ.
ನಟ ದರ್ಶನ್ ಒಂದು ಕಡೆ ನಾನು ಕೊಲೆ ಮಾಡಲು ಹೇಳಿಲ್ಲ ಎನ್ನುತ್ತಿದ್ದಾರೆ. ಕೊಲೆ ನಡೆದಿರುವುದು ನಟನಿಗೆ ಗೊತ್ತಾದ ಬಳಿಕವೇ 'ನಿನ್ನಿಂದ ಇದೆಲ್ಲ ಆಗಿದೆ' ಎಂದು ಮನಬಂದಂತೆ ಬೈದಿದ್ದಾರೆ. ನಂತರ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಇದೆಲ್ಲವನ್ನು ಅವರು ಪೊಲೀಸರ ಮುಂದೆ ತಿಳಿಸಿದ್ದಾರೆ ಎನ್ನಲಾಗಿದೆ.
ಸದ್ಯ ನಟ ದರ್ಶನ್ ಅನ್ನುಪೂರ್ಣೆಶ್ವರಿ ನಗರದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಅದರ ಬೆನ್ನಲ್ಲೆ ಅವರ ಪ್ರೇಯಸಿ ಪವಿತ್ರಾ ಗೌಡ ಅವರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಸದ್ಯ ಕೂಲಂಕುಷವಾಗಿ ದರ್ಶನ್ ಹಾಗೂ ಪವಿತ್ರಾ ರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ನಟ ದರ್ಶನ್ ಮೇಲೆ ಕೊಲೆ ಆರೋಪದ ಜೊತೆಗೆ ಹನಿಟ್ರ್ಯಾಪ್, ಕಿಡ್ನಾಪ್ ಆರೋಪಗಳು ಕೇಳಿ ಬಂದಿವೆ. ದರ್ಶನ್ ಹಾಗೂ ಪವಿತ್ರಾ ಗೌಡರ ವಿಚಾರಣೆ ಪೂರ್ಣಗೊಂಡಿದೆ. ಇವರಿಬ್ಬರು ಸೇರಿದಂತೆ ಎಲ್ಲ 13 ಬಂಧಿತ ಆರೋಪಿಗಳನ್ನು ಸಂಜೆ ನ್ಯಾಯಾಲಯದ ಮುಂದೆ ಪೊಲೀಸರ ಹಾಜರುಪಡಿಸಿದ್ಲಿದಾರೆ.
ದರ್ಶನ್ ಪ್ರೇಯಸಿ ಈ ಕೊಲೆ ಪ್ರಕರಣದಲ್ಲಿ A1ಆರೋಪಿಯನ್ನಾಗಿ ಮಾಡಲಾಗಿದೆ. ದರ್ಶನ್ A2 ಆರೋಪಿಯಾದರೆ, A3 ಆಗಿ ಚಿತ್ರದುರ್ಗ ದರ್ಶನ್ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ರಾಘವಂದ್ರ ಅಲಿಯಾಸ್ ರಘು ದರ್ಶನ್ನನ್ನು ಮಾಡಲಾಗಿದೆ. ಉಳಿದಂತೆ ಇಬ್ಬರು ಆಪ್ತರು ಹಾಗೂ ಕೊಲೆಗಾರರನ್ನು ನಂತರದ ಹತ್ತು ಆರೋಪಿಗಳ ಲಿಸ್ಟ್ ಗೆ ಸೇರಿಸಲಾಗಿದೆ.
ಸದ್ಯ ಪ್ರಕರಣದಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮುಂದಿನ ಆರು ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
-
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
‘ಲವ್ ಮಾಕ್ಟೇಲ್ 3’ ಕಥೆ ವಿವಾದ ಸುಖಾಂತ್ಯ: ಫಿಲ್ಮ್ ಚೇಂಬರ್ ಸಭೆಯಲ್ಲಿ ಡಾರ್ಲಿಂಗ್ ಕೃಷ್ಣ-ಗುರು ದೇಶಪಾಂಡೆ ಸಂಧಾನ ಯಶಸ್ವಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ.









Click it and Unblock the Notifications