Actor Darshan Bail: ಅಪ್ಪನ ಜೊತೆಗಿನ ಫೋಟೋ ಹಾಕಿ ಖುಷಿ ವ್ಯಕ್ತಪಡಿಸಿದ ದರ್ಶನ್ ತೂಗುದೀಪ್ ಪುತ್ರ ವಿನೀಶ್!
Actor Darshan Bail: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ಗೆ ಇಂದು (ಡಿಸೆಂಬರ್ 13) ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇದರ ಬೆನ್ನಲ್ಲೇ ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಇನ್ನು ಈ ವಿಚಾರ ತಿಳಿಯುತ್ತಿದ್ದಂತೆ ವಿಜಯಲಕ್ಷ್ಮಿ ದರ್ಶನ್ ಇನ್ಸ್ಟಾಗ್ರಾಂನಲ್ಲಿ ಭಾವನಾತ್ಮಕ ಪೋಸ್ಟರ್ವೊಂದನ್ನು ಹಂಚಿಕೊಂಡಿದ್ದರು. ಇದೀಗ ಪುತ್ರ ವಿನೀಶ್ ಕೂಡ ಪೋಸ್ಟರ್ವೊಂದನ್ನು ಹಂಚಿಕೊಂಡಿದ್ದು, ಭಾರೀ ವೈರಲ್ ಆಗುತ್ತಿದೆ.
ಇತ್ತೀಚೆಗಷ್ಟೇ ಬೆನ್ನು ನೋವು ಹಿನ್ನೆಲೆ ಹೈಕೋರ್ಟ್ ಮಧ್ಯಂತರ ಜಾಮೀನಿನ ಮೇಲೆ ನಟ ದರ್ಶನ್ ಬಳ್ಳಾರಿ ಜೈಲಿನಿಂದ ಸರ್ಜರಿಗೆಂದು ಹೊರಗಡೆ ಬಂದಿದ್ದರು. ಇದೀಗ ಇಂದು ಕೊನೆಗೂ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಮಂದಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಈ ವಿಚಾರ ತಿಳಿಯುತ್ತಿದ್ದಂತೆ ರಾಜ್ಯಾಂದ್ಯಂತ ಅಭಿಮಾನಿ ಸಂಭ್ರಾಮಾಚರಣೆ ಮಾಡಲು ಶುರು ಮಾಡಿದ್ದಾರೆ. ಮತ್ತೊಂದೆಡೆ ಕೆಲವು ಸ್ಟಾರ್ಗಳು ಈ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.

ಇನ್ನು ನಟ ದರ್ಶನ್ ದೀಪಾವಳಿ ಹಬ್ಬದ ಸಮಯದಲ್ಲೇ ಬೆನ್ನು ನೋವು ಹಿನ್ನೆಲೆ ಸರ್ಜರಿಗೆಂದು ಬಳ್ಳಾರಿ ಜೈಲಿನಿಂದ ಹೊರಬಂದಿದ್ದರು. ಅದರಲ್ಲೂ ವಿಶೇಷವಾಗಿ ಮಗ ವಿನೀಶ್ ಅವರ ಹುಟ್ಟುಹಬ್ಬದಂದೇ ನಟ ದರ್ಶನ್ ಬಿಡುಗಡೆಯಾಗಿ ಪತ್ನಿ ಜೊತೆ ಮನೆಗೆ ಆಗಮಿಸಿದ್ದರು.
ಈ ವೇಳೆ ಅಭಿಮಾನಿಗಳು ನಿವಾಸದ ಬಳಿ ಜಮಾಯಿಸಿದ್ದು, ಅವರನ್ನು ನಿಯಂತ್ರಿಸಲು ಸೆಕ್ಯೂರಿಟಿ ಗಾರ್ಡ್ ಹರಸಾಹಸವನ್ನೇ ಪಟ್ಟರೂ ನಿಯಂತ್ರಣ ಮಾಡಲು ಸಾಧ್ಯ ಆಗಲಿಲ್ಲ. ಬಳಿಕ ಮನೆಯಿಂದ ಹೊರಡೆ ಬಂದತಹ ನಟ ದರ್ಶನ್ ಮಗ ವಿನೀಶ್ ಅವರು, ಅಭಿಮಾನಿಗಳಿಗೆ ಕೈ ಮುಗಿದು, "ದಯವಿಟ್ಟು ಎಲ್ಲರೂ ಹೋಗಿ, ಕೋರ್ಟ್ನಿಂದ ಆದೇಶವಿದೆ, ನಾವೇನು ಮಾತನಾಡುವಂತಿಲ್ಲ. ದಯವಿಟ್ಟು ಎಲ್ಲರೂ ಹೋಗಿ ಅಣ್ಣ, ಯಾರೂ ಗಲಾಟೆ ಮಾಡಬೇಡಿ. ನಾವೆಲ್ಲಾರೂ ಚೆನ್ನಾಗಿದ್ದೀವಿ," ಎಂದು ಕೈಮುಗಿದು ಕೇಳಿಕೊಂಡಿದ್ದರು. ಇದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು.
-
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
Karnataka Budget 2026: 100 ಹೊಸ ಸ್ಕೈವಾಕ್, ಟನಲ್ ರಸ್ತೆ ಸೇರಿ ಕರ್ನಾಟಕ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? -
ರೈತರಿಗೆ ಮಾಲ್, ಮಂಡ್ಯ ಸಾವಯ ಕೃಷಿ: ಅಡಿಕೆ - ತೆಂಗು ಬೆಳಗಾರರಿಗೂ ಬಂಪರ್, ಮೇಕೆದಾಟು ಯೋಜನೆಗೆ ಅಸ್ತು -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ -
Karnataka Budget 2026: ಕರ್ನಾಟಕ ಬಜೆಟ್ 2026: ಬಜೆಟ್ ಗ್ರಾತ ಕಳೆದ ಬಾರಿಗಿಂತ 40 ಸಾವಿರ ಕೋಟಿ ರೂ. ಹೆಚ್ಚಳ -
ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ, ವಿಶೇಷವೇನು












Click it and Unblock the Notifications