Darshan Thoogudeep: ನಟ ದರ್ಶನ್ಗೆ 84 ಲಕ್ಷ ರೂಪಾಯಿ ಕಂಟಕ: ಯಾರೆಲ್ಲ ವಿಚಾರಣೆ ನಡೆಯಲಿದೆ?, ಇಲ್ಲಿದೆ ಮಾಹಿತಿ
Darshan Thoogudeep: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ಗೆ ಒಂದಾದ ಮೇಲೊಂದು ಸಂಕಷ್ಟಗಳು ಎದುರಾಗುತ್ತಲೇ ಇವೆ. ಜಾಮೀನು ಸಿಗದಿರುವುದು ಒಂದು ಕಡೆಯಾದರೆ, ಮತ್ತೊಂದೆಡೆ ಇದೀಗ ಐಟಿ ಅಧಿಕಾರಿಗಳು ಬೆನ್ನು ಬಿದ್ದಿದ್ದಾರೆ. ಇಂದು ಮತ್ತು ನಾಳೆ ದರ್ಶನ್ 84 ಲಕ್ಷ ರೂಪಾಯಿ ಹಣದ ಬಗ್ಗೆ ವಿಚಾರಣೆ ನಡೆಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ರೇಣುಕಾಸ್ವಾಮಿ ಪ್ರಕರಣದಲ್ಲಿ ಈಗಾಗಲೇ "ಡಿ" ಗ್ಯಾಂಗ್ನ ಮೂವರಿಗೆ ಜಾಮೀನು ಮಂಜೂರಾಗಿದೆ. ಇನ್ನು ಈ ಪ್ರಕರಣದ ಎ1 ಪವಿತ್ರಾಗೌಡ & ಎ2 ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 27ಕ್ಕೆ ನಡೆಯಲಿದೆ. ಇದರ ಬೆನ್ನಲ್ಲೇ ನಟ ದರ್ಶನ್ಗೆ ಐಟಿ ಸಂಕಷ್ಟ ಎದುರಾಗಿದೆ.

ಇನ್ನು ಕೊಲೆ ಬಳಿಕ ಹಣದ ಆಮಿಷವೊಡ್ಡಿ ಕೆಲವರನ್ನು ಸೆರೆಂಡರ್ ಮಾಡಿಸಿದ್ರೆ, ಇನ್ನೂ ಕೆಲವರನ್ನು, ಸಾಕ್ಷ್ಯ ನಾಶಕ್ಕೆ ಬಳಕೆ ಮಾಡಿಕೊಂಡಿದ್ದ. ಈ ಎಲ್ಲಾದಕ್ಕೂ ದರ್ಶನ್ ಹಣದ ಡೀಲ್ನಲ್ಲೇ ಮುಗಿಸಿದ್ದ ಎನ್ನುವ ಆರೋಪ ಕೇಳಿಬಂದಿತ್ತು. ಬಳಿಕ ಪೊಲೀಸರು ಬರೋಬ್ಬರಿ 84,00,000 ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದರು. ಇದೀಗ ಈ ಹಣದ ಮೂಲ ಪತ್ತೆ ಹಚ್ಚಲು ಐಟಿ ಅಧಿಕಾರಿಗಳು ನಟ ದರ್ಶನ್ ಹಾಗೂ ಸಹಚರರ ಬೆನ್ನು ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.
ಈಗಾಗಲೇ ಐಟಿ ಅಧಿಕಾರಿಗಳು ದರ್ಶನ್ ವಿಚಾರಣೆಗಾಗಿ 57 ಸಿಸಿಹೆಚ್ ಕೋರ್ಟ್ನುಂದ ಅನುಮತಿ ಪಡೆದಿದ್ದಾರೆ. ಬಳ್ಳಾರಿ ಜೈಲಿನಲೇ ಇಂದು & ನಾಳ 2 ದಿನ ವಿಚಾರಣೆ ನಡೆಸಲಿದ್ದಾರೆ. ಇದೇ ವೇಳೆ ಹಣ ಕೊಟ್ಟಿರುವ ಮೋಹನ್ ರಾಜ್, ಹಾಗೂ ಡೆವಿಲ್ ನಿರ್ದೇಶಕ ಸೇರಿದಂತೆ ಕೆಲ ನಿರ್ಮಾಪಕರ ವಿಚಾರಣೆ ನಡೆಸುವ ಸಾದ್ಯತೆಯಿದೆ. ಅಲ್ಲದೆ, ಆರ್ಆರ್ ನಗರದ ದರ್ಶನ್ ಮನೆ ಹಾಗೂ ಸಹಚರರ ಮನೆಗೂ ಭೇಟಿ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಪೊಲೀಸರ ತನಿಖೆ ವೇಳೆ ಆರೋಪಿಗಳಿಗೆ ದರ್ಶನ್ ನೀಡಿದ್ದ 30,00,000 ರೂಪಾಯಿ ಹಣ ಹಾಗೂ ದಾಳಿ ವೇಳೆ ಸಿಕ್ಕ ಹಣದ ಬಗ್ಗೆ ಮಾಹಿತಿ ಕೇಳಲಿದ್ದಾರೆ. ಬಳಿಕ ಯಾವ ಮೂಲದಿಂದ ಹಣ ಪಡೆದಿದ್ದೀರಾ ಅದು ಯಾರಿಗೆ ಸೇರಿದ ಹಣ? ಅಷ್ಟು ಹಣವನ್ನ ನೀವೂ ಬೇರೆಯವರಿಂದ ಪಡೆಯಲು ಕಾರಣವೇನು ಎಂದು ಪ್ರಶ್ನಿಸಿದ್ದಾರೆ.
ದಾಖಲಾತಿ ನೀಡದೆ ಹಣದ ಮೂಲ ತಿಳಿಸದಿದ್ದರೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ. ಇನ್ನು ಪ್ರಜರಣದ ಬಂಧಿಯಾಗಿರುವ ನಟ ದರ್ಶನ್ ಬೇಲ್ ಸಿಗದೆ ಕಂಗಲಾಗಿದ್ದಾರೆ. ಮತ್ತೊದೆಡೆ ಇದೀಗ ಜೈಲಲ್ಲೇ ವಿಚಾರಭೆ ನಡೆಸಲು ಐಟಿ ಅಧಿಕಾರಿಗಳು ತಯಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ನಟ ದರ್ಶನ್ ಅವರನ್ನು ಐಟಿ ಅಧಿಕಾರಿಗಳು ಎರಡು ದಿನಗಳ ಕಾಲ ವಿಚಾರಣೆ ನಡೆಸಲಿದ್ದಾರೆ. ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ಎ15, 16, ಎ17 ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಇನ್ನು ಪವಿತ್ರಾ ಗೌಡಳ ಜಾಮೀನು ಅರ್ಜಿ ವಿಚಾರಣೆ ನಿನ್ನೆ (ಸೆಪ್ಟೆಂಬರ್ 25) ನಡೆದಿದ್ದು, ವಿಚಾರಣೆಯನ್ನು ಸೆಪ್ಟೆಂಬರ್ 27ಕ್ಕೆ ಮುಂದೂಡಿಕೆ ಮಾಡಲಾಗಿದೆ. ಅಂದೇ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications