Darshan Thoogudeep: ನಟ ದರ್ಶನ್ಗೆ 84 ಲಕ್ಷ ರೂಪಾಯಿ ಕಂಟಕ: ಯಾರೆಲ್ಲ ವಿಚಾರಣೆ ನಡೆಯಲಿದೆ?, ಇಲ್ಲಿದೆ ಮಾಹಿತಿ
Darshan Thoogudeep: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ಗೆ ಒಂದಾದ ಮೇಲೊಂದು ಸಂಕಷ್ಟಗಳು ಎದುರಾಗುತ್ತಲೇ ಇವೆ. ಜಾಮೀನು ಸಿಗದಿರುವುದು ಒಂದು ಕಡೆಯಾದರೆ, ಮತ್ತೊಂದೆಡೆ ಇದೀಗ ಐಟಿ ಅಧಿಕಾರಿಗಳು ಬೆನ್ನು ಬಿದ್ದಿದ್ದಾರೆ. ಇಂದು ಮತ್ತು ನಾಳೆ ದರ್ಶನ್ 84 ಲಕ್ಷ ರೂಪಾಯಿ ಹಣದ ಬಗ್ಗೆ ವಿಚಾರಣೆ ನಡೆಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ರೇಣುಕಾಸ್ವಾಮಿ ಪ್ರಕರಣದಲ್ಲಿ ಈಗಾಗಲೇ "ಡಿ" ಗ್ಯಾಂಗ್ನ ಮೂವರಿಗೆ ಜಾಮೀನು ಮಂಜೂರಾಗಿದೆ. ಇನ್ನು ಈ ಪ್ರಕರಣದ ಎ1 ಪವಿತ್ರಾಗೌಡ & ಎ2 ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 27ಕ್ಕೆ ನಡೆಯಲಿದೆ. ಇದರ ಬೆನ್ನಲ್ಲೇ ನಟ ದರ್ಶನ್ಗೆ ಐಟಿ ಸಂಕಷ್ಟ ಎದುರಾಗಿದೆ.

ಇನ್ನು ಕೊಲೆ ಬಳಿಕ ಹಣದ ಆಮಿಷವೊಡ್ಡಿ ಕೆಲವರನ್ನು ಸೆರೆಂಡರ್ ಮಾಡಿಸಿದ್ರೆ, ಇನ್ನೂ ಕೆಲವರನ್ನು, ಸಾಕ್ಷ್ಯ ನಾಶಕ್ಕೆ ಬಳಕೆ ಮಾಡಿಕೊಂಡಿದ್ದ. ಈ ಎಲ್ಲಾದಕ್ಕೂ ದರ್ಶನ್ ಹಣದ ಡೀಲ್ನಲ್ಲೇ ಮುಗಿಸಿದ್ದ ಎನ್ನುವ ಆರೋಪ ಕೇಳಿಬಂದಿತ್ತು. ಬಳಿಕ ಪೊಲೀಸರು ಬರೋಬ್ಬರಿ 84,00,000 ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದರು. ಇದೀಗ ಈ ಹಣದ ಮೂಲ ಪತ್ತೆ ಹಚ್ಚಲು ಐಟಿ ಅಧಿಕಾರಿಗಳು ನಟ ದರ್ಶನ್ ಹಾಗೂ ಸಹಚರರ ಬೆನ್ನು ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.
ಈಗಾಗಲೇ ಐಟಿ ಅಧಿಕಾರಿಗಳು ದರ್ಶನ್ ವಿಚಾರಣೆಗಾಗಿ 57 ಸಿಸಿಹೆಚ್ ಕೋರ್ಟ್ನುಂದ ಅನುಮತಿ ಪಡೆದಿದ್ದಾರೆ. ಬಳ್ಳಾರಿ ಜೈಲಿನಲೇ ಇಂದು & ನಾಳ 2 ದಿನ ವಿಚಾರಣೆ ನಡೆಸಲಿದ್ದಾರೆ. ಇದೇ ವೇಳೆ ಹಣ ಕೊಟ್ಟಿರುವ ಮೋಹನ್ ರಾಜ್, ಹಾಗೂ ಡೆವಿಲ್ ನಿರ್ದೇಶಕ ಸೇರಿದಂತೆ ಕೆಲ ನಿರ್ಮಾಪಕರ ವಿಚಾರಣೆ ನಡೆಸುವ ಸಾದ್ಯತೆಯಿದೆ. ಅಲ್ಲದೆ, ಆರ್ಆರ್ ನಗರದ ದರ್ಶನ್ ಮನೆ ಹಾಗೂ ಸಹಚರರ ಮನೆಗೂ ಭೇಟಿ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಪೊಲೀಸರ ತನಿಖೆ ವೇಳೆ ಆರೋಪಿಗಳಿಗೆ ದರ್ಶನ್ ನೀಡಿದ್ದ 30,00,000 ರೂಪಾಯಿ ಹಣ ಹಾಗೂ ದಾಳಿ ವೇಳೆ ಸಿಕ್ಕ ಹಣದ ಬಗ್ಗೆ ಮಾಹಿತಿ ಕೇಳಲಿದ್ದಾರೆ. ಬಳಿಕ ಯಾವ ಮೂಲದಿಂದ ಹಣ ಪಡೆದಿದ್ದೀರಾ ಅದು ಯಾರಿಗೆ ಸೇರಿದ ಹಣ? ಅಷ್ಟು ಹಣವನ್ನ ನೀವೂ ಬೇರೆಯವರಿಂದ ಪಡೆಯಲು ಕಾರಣವೇನು ಎಂದು ಪ್ರಶ್ನಿಸಿದ್ದಾರೆ.
ದಾಖಲಾತಿ ನೀಡದೆ ಹಣದ ಮೂಲ ತಿಳಿಸದಿದ್ದರೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ. ಇನ್ನು ಪ್ರಜರಣದ ಬಂಧಿಯಾಗಿರುವ ನಟ ದರ್ಶನ್ ಬೇಲ್ ಸಿಗದೆ ಕಂಗಲಾಗಿದ್ದಾರೆ. ಮತ್ತೊದೆಡೆ ಇದೀಗ ಜೈಲಲ್ಲೇ ವಿಚಾರಭೆ ನಡೆಸಲು ಐಟಿ ಅಧಿಕಾರಿಗಳು ತಯಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ನಟ ದರ್ಶನ್ ಅವರನ್ನು ಐಟಿ ಅಧಿಕಾರಿಗಳು ಎರಡು ದಿನಗಳ ಕಾಲ ವಿಚಾರಣೆ ನಡೆಸಲಿದ್ದಾರೆ. ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ಎ15, 16, ಎ17 ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಇನ್ನು ಪವಿತ್ರಾ ಗೌಡಳ ಜಾಮೀನು ಅರ್ಜಿ ವಿಚಾರಣೆ ನಿನ್ನೆ (ಸೆಪ್ಟೆಂಬರ್ 25) ನಡೆದಿದ್ದು, ವಿಚಾರಣೆಯನ್ನು ಸೆಪ್ಟೆಂಬರ್ 27ಕ್ಕೆ ಮುಂದೂಡಿಕೆ ಮಾಡಲಾಗಿದೆ. ಅಂದೇ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications