Devil Movie Release: "ಡೆವಿಲ್" ಸಿನಿಮಾ ರಿಲೀಸ್ ಡೇಟ್ ಮತ್ತೆ ಚೇಂಜ್, ಯಾವಾಗ?
ನಟ ದರ್ಶನ್ ತೂಗುದೀಪ ಅವರ ಬಹುನಿರೀಕ್ಷಿತ "ಡೆವಿಲ್" ಸಿನಿಮಾ ರಿಲೀಸ್ ಆಗುವ ಖುಷಿಯಲ್ಲಿದ್ದ ಡಿಬಾಸ್ ಅಭಿಮಾನಿಗಳಿಗೆ ಚಿತ್ರತಂಡ ಮಹತ್ವದ ಅಪ್ಡೇಟ್ ನೀಡಿದೆ. ಈ ಸಿನಿಮಾ ನಟ ದರ್ಶನ್ ಅವರು ಜೈಲಿನಲ್ಲಿದ್ದರೂ ಡಿಸೆಂಬರ್ 12ರಂದು ಡೆವಿಲ್ ಸಿನಿಮಾ ರಿಲೀಸ್ ಆಗುವುದಾಗಿ ಚಿತ್ರತಂಡವು ದಿನಾಂಕ ಘೋಷಿಸಿತ್ತು. ಹೀಗಾಗಿ ಇನ್ನು ಎರಡೇ ವಾರಗಳಲ್ಲಿ ಸಿನಿಮಾ ತೆರೆಗೆ ಬರಲಿದೆ ಎಂದು ಫ್ಯಾನ್ಸ್ ಕೂಡ ಕಾಯುತ್ತಿದ್ದರು. ಆದರೆ ಚಿತ್ರತಂಡವು ಕೆಲವೇ ದಿನಗಳು ಬಾಕಿ ಇರುವಾಗಲೇ ಬಿಡುಗಡೆ ದಿನಾಂಕವನ್ನು ಮತ್ತೆ ಬದಲಾಯಿಸಿದೆ.
ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಬಂಧನವಾಗಿದ್ದರಿಂದ ಡೆವಿಲ್ ಸಿನಿಮಾ ಅಂದುಕೊಂಡ ಸಮಯಕ್ಕೆ ಶೂಟಿಂಗ್ ಮುಗಿಸಲಿಲ್ಲ. ಸಿನಿಮಾ ರಿಲೀಸ್ ಕೂಡ ಆಗಲಿಲ್ಲ. ಬಳಿಕ ದರ್ಶನ್ ಅವರು ಹಲವು ತಿಂಗಳ ಬಳಿಕ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದರು. ಹೀಗಾಗಿ ಡೆವಿಲ್ ಸಿನಿಮಾದ ಬಾಕಿ ಶೂಟಿಂಗ್ ವೇಗವಾಗಿ ಮುಗಿಸಿದ್ದರು. ಇನ್ನೇನು ಸಿನಿಮಾ ರಿಲೀಸ್ ದಿನಾಂಕ ಘೋಷಣೆ ಮಾಡಬೇಕು ಎನ್ನುವಷ್ಟರಲ್ಲಿ ದರ್ಶನ್ ಅವರ ಜಾಮೀನು ರದ್ದಾಗಿ ಮತ್ತೆ ಜೈಲು ಸೇರಿದ್ದರು. ಇದು ದರ್ಶನ್ ಅಭಿಮಾನಿಗಳಿಗೆ ಹಾಗೂ ಡೆವಿಲ್ ಚಿತ್ರತಂಡಕ್ಕೆ ಬಿಗ್ಶಾಕ್ ನೀಡಿತ್ತು.

ದರ್ಶನ್ ಅವರು ಜೈಲಿನಿಂದ ಯಾವಾಗ ಬರ್ತಾರೋ ಗೊತ್ತಿಲ್ಲ. ಇತ್ತ ಡೆವಿಲ್ ಸಿನಿಮಾ ಕೂಡ ಶೂಟಿಂಗ್ ಮುಗಿದು ರಿಲೀಸ್ಗೆ ರೆಡಿಯಾಗಿದ್ದರಿಂದ ಚಿತ್ರತಂಡವು ಡೇಟ್ ಅನೌನ್ಸ್ ಮಾಡಿತ್ತು. ಅದರಂತೆ ಡಿಸೆಂಬರ್ 12ರಂದು ಡೆವಿಲ್ ಸಿನಿಮಾ ರಾಜ್ಯಾದ್ಯಂತ ತೆರೆ ಕಾಣಲಿದೆ ಎಂದು ಘೋಷಿಸಿತ್ತು. ಇದೀಗ ಮತ್ತೆ ಡೆವಿಲ್ ಟೀಂ ಸಿನಿಮಾ ಬಿಡುಗಡೆ ದಿನಾಂಕವನ್ನು ಬದಲಾಯಿಸಿದೆ.
ಸಿನಿಮಾ ರಿಲೀಸ್ ಯಾವಾಗ?
ಪ್ರತಿ ಬಾರಿ ಡೆವಿಲ್ ಸಿನಿಮಾ ರಿಲೀಸ್ ದಿನಾಂಕ ಮುಂದೂಡಲಾಗುತ್ತಿತ್ತು. ಆದರೆ ಈ ಬಾರಿ ಅಚ್ಚರಿ ಎನ್ನುವಂತೆ ಘೋಷಿಸಿದ ದಿನಾಂಕಕ್ಕೂ ಮೊದಲೇ ಡೆವಿಲ್ ಸಿನಿಮಾ ತೆರೆಕಾಣಲಿದೆ. ಅಂದರೆ ಡಿಸೆಂಬರ್ 11ರಂದೇ ಒಂದು ದಿನ ಮುನ್ನವೇ ಸಿನಿಮಾ ರಿಲೀಸ್ ಮಾಡುವುದಾಗಿ ಶ್ರೀಜೈಮಾತಾ ಕಂಬೈನ್ಸ್ ಅಧಿಕೃತವಾಗಿ ಘೋಷಣೆ ಮಾಡಿದೆ. ಅದರಂತೆ ಡಿಸೆಂಬರ್ 12ರ ಬದಲಿಗೆ ಡಿಸೆಂಬರ್ 11ರಂದೇ ಡೆವಿಲ್ ಸಿನಿಮಾ ವೀಕ್ಷಿಸಬಹುದು ಎಂದು ಫ್ಯಾನ್ಸ್ಗೆ ಗುಡ್ನ್ಯೂಸ್ ನೀಡಿದೆ.
ಪ್ರೀತಿಯ ಜನರಿಗೆ, ಸೆಲೆಬ್ರಿಟಿಗಳು ಮತ್ತು ಕನ್ನಡ ಪ್ರಿಯ ಜನರ ನಿರಂತರ ವಿನಂತಿಗಳಿಂದಾಗಿ. ನಿಮ್ಮ "ದಿ ಡೆವಿಲ್" ಚಿತ್ರವು ನಿಗದಿತ ದಿನಾಂಕಕ್ಕಿಂತ ಒಂದು ದಿನ ಮುಂಚಿತವಾಗಿ ಬೆಳ್ಳಿ ಪರದೆಯ ಮೇಲೆ ಬಿಡುಗಡೆಯಾಗಲಿದೆ. ನಿಮ್ಮ ಪ್ರೀತಿ ಮತ್ತು ಅಭಿಮಾನವೇ ನಮ್ಮ ಶ್ರೀರಕ್ಷೆ ಎಂದು ಸೋಷಿಯಲ್ ಮೀಡಿಯಾದಲ್ಲಿ ತಿಳಿಸಿದೆ.
ದರ್ಶನ್ ಅವರ ಅನುಪಸ್ಥಿತಿಯಲ್ಲೇ ಡೆವಿಲ್ ಸಿನಿಮಾ ರಿಲೀಸ್ಗೆ ರೆಡಿಯಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ನಿಂದಾಗಿ ಡೆವಿಲ್ ಸಿನಿಮಾ ವಿಳಂಬವಾಗಿತ್ತು. ಚಿತ್ರತಂಡ ಭಾರೀ ಬಂಡವಾಳ ಹಾಕಿರುವುದರಿಂದ ದರ್ಶನ್ ಅವರು ಬೇಗನೆ ಶೂಟಿಂಗ್ ಮುಗಿಸಿಕೊಟ್ಟಿದ್ದರು. ಈಗ ಅವರು ಜೈಲಿನಲ್ಲಿದ್ದರೂ ಸಿನಿಮಾ ರಿಲೀಸ್ ಆಗಲು ಸಜ್ಜಾಗಿದೆ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ












Click it and Unblock the Notifications