Actor Darshan Bail: ಪವಿತ್ರಾ ಗೌಡ ಜೈಲಿಂದ ಹೊರಬರೋದು ಯಾವಾಗ? ಎಷ್ಟು ಜನರಿಂದ ಶ್ಯೂರಿಟಿ ಬೇಕು?
Actor Darshan Case: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಮಂದಿಗೆ ಇಂದು (ಡಿಸೆಂಬರ್ 13) ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಹಾಗಾದರೆ ಇವೆರೆಲ್ಲರು ಜೈಲಿನಿಂದ ಯಾವತ್ತು ಹೊರಗಡೆ ಬರಲಿದ್ದಾರೆ ಹಾಗೂ ಎಷ್ಟು ಜನ ಶ್ಯೂರಿಟಿ ಹಾಕಬೇಕು ಎನ್ನುವ ಮಾಹಿತಿಯನ್ನು ಇಲ್ಲಿ ಗತಿಳಿಯಿರಿ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ಧ ನಟ ದರ್ಶನ್ ಇತ್ತೀಚೆಗಷ್ಟೇ ಬೆನ್ನು ನೋವು ಹಿನ್ನೆಲೆ ಸರ್ಜರಿಗೆಂದು ಹೈಕೋರ್ಟ್ ಮಧ್ಯಂತರ ಜಾಮೀನಿನ ಮೇಲೆ ಹೊರಗಡೆ ಬಂದಿದ್ದರು. ಇದರ ನಡುವೆಯೇ ಜಾಮೀನಿಗಾಗಿ ದರ್ಶನ್ ಹೋರಾಟ ನಡೆಸಿದ್ದು, ಇಂದು ಕೊನೆಗೂ ದರ್ಶನ್ ಪವಿತ್ರಾ ಗೌಡ ಸೇರಿ 7 ಮಂದಿಗೆ ಜಾಮೀನು ಮಂಜೂರು ಮಾಡಿದೆ. ಇವರು ಹೊರಗಡೆ ಬರಬೇಕೆಂದರೆ ತಲಾ ಇಬ್ಬರು ಶ್ಯೂರಿಟಿ ನೀಡಬೇಕಾಗುತ್ತದೆ ಎಂದು ಕೋರ್ಟ್ ತಿಳಿಸಿದೆ.

ಒಂದು ವೇಳೆ ಇಂದು ಶ್ಯೂರಿಟಿ ನೀಡದಿದ್ದರೆ, ಸೋಮವಾರವೇ ಪವಿತ್ರಾ ಗೌಡ ಹಾಗೂ ಇನ್ನುಳಿದ ಆರೋಪಿಗಳು ಸೋಮವಾರದವರೆಗೂ ಕಾಯಬೇಕಾಗುತ್ತದೆ. ಯಾಕೆಂದರೆ, ಶನಿವಾರ ಹಾಗೂ ಭಾನುವಾರ ರಜೆ ಇರುವ ಕಾರಣ ಸೋಮವಾರದವರೆಗೂ ಕಾಯಬೇಕಾಗುತ್ತದೆ.
ನಟ ದರ್ಶನ್ ಈಗಾಗಲೇ ಸರ್ಜರಿಗೆಂದು ಮಧ್ಯಂತರ ಜಾಮೀನಿನ ಮೇಲೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿದ್ದಾರೆ. ಆದರೆ, ಪವಿತ್ರಾ ಗೌಡ ಇನ್ನೂ ಪರಪ್ಪನ ಅಗ್ರಹಾರದಲ್ಲಿದ್ದು, ಇಂದು ಹೈಕೋರ್ಟ್ ಜಾಮೀನು ಮಂಜೂರು ಆಗಿದೆ. ಈ ವಿಚಾರ ತಿಳಿದ ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಸಂತಸಪಟ್ಟಿದ್ದಾರೆ.
ಪವಿತ್ರಾ ಗೌಡಗೆ ಜಾಮೀನು ದೊರೆತಿದೆ. ಆದರೆ, ಬಿಡುಗಡೆ ಭಾಗ್ಯ ಮಾತ್ರ ಇನ್ನೂ ಇಲ್ಲ. ನಾಳೆ ಶನಿವಾರ ಇನ್ನು ಡಿಸೆಂಬರ್ 15ರಂದು ಭಾನುವಾರ ಆಗಿದೆ. ಆದ್ದರಿಂದ ಈ ರಜೆ ದಿನಗಳಲ್ಲಿ ಕೋರ್ಟ್ ಪ್ರೋಸಿಜರ್ ಆಗುವುದಿಲ್ಲ. ಈ ಹಿನ್ನೆಲೆ ಪವಿತ್ರಾ ಗೌಡ ಸೋಮವಾರವೇ ಜೈಲಿನಿಂದಲೇ ಬಿಡುಗಡೆಯಾಗಲಿದ್ದಾರೆ ಎನ್ನಲಾಗುತ್ತಿದೆ.
ಪವಿತ್ರಾ ಗೌಡ ಸೇರಿ ಇತರ ಆರೋಪಿಗಳಿಗಳು ಸಹ ಸೋಮವಾರವೇ ಬಿಡುಗಡೆಯಾಗಲಿದ್ದಾರೆ. ಪವಿತ್ರಾ ಗೌಡ ಕಳೆದ 7 ತಿಂಗಳಿನಿಂದಲೂ ಜೈಲಿನಲ್ಲಿಯೇ ಇದ್ದಾರೆ. ಅಲ್ಲದೆ, ಜಾಮೀನಿಗಾಗಿ ತುಂಬಾ ಪರದಾಡಿಯೂ ಇದ್ದಾರೆ. ಆದರೆ, ವಕೀಲರ ವಾದಗಳು ಆಗ ಕೆಲಸ ಮಾಡಿರಲಿಲ್ಲ. ಇದರ ಬೆನ್ನಲ್ಲೇ ಸಿಂಗಲ್ ಪೇರೆಂಟ್ ಎಂಬ ವಿಷಯವನ್ನಿಟ್ಟುಕೊಂಡು ಪವಿತ್ರಾ ಗೌಡ ಪರ ವಕೀಲರು ವಾದ ಮಂಡಿಸಿದ್ದರು. ಆಗಲೂ ಯಾವುದೇ ಪ್ರಯೋಜನೆ ಇಲ್ಲದಂತಾಗಿತ್ತು.
ಇದೀಗ ಇಂದು ಪವಿತ್ರಾ ಗೌಡಗೆ ಜಾಮೀನು ದೊರೆತಿದ್ದು, ಈ ಮೂಲಕ ಪವಿತ್ರಾ ಗೌಡ ಸಂತಸದಲ್ಲಿ ತೇಲಾಡುತ್ತಿದ್ದಾರೆ. ಇನ್ನುಳಿದಂತೆ ರೇಣುಕಾಸ್ವಾಮಿ ಪ್ರಕರಣದಲ್ಲಿ ಎ1 ಆರೋಪಿ ಆಗಿರುವ ಪವಿತ್ರಾ ಗೌಡ ಜಾಮೀನಿನ ಮೇಲೆ ಸೋಮವಾರವೇ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
-
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications