ಜೈಲು ಹತ್ರ ಬರಬೇಡ, ಹಣೆಬರಹದಲ್ಲಿ ಇದ್ದಂತೆ ಆಗುತ್ತೆ: ಪತ್ನಿ ಮುಂದೆ ದರ್ಶನ್ ಬೇಸರ
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ತೂಗುದೀಪ ಅವರನ್ನು ಪತ್ನಿ ವಿಜಯಲಕ್ಷ್ಮಿ ಭೇಟಿಯಾಗಿದ್ದಾರೆ. ಈ ವೇಳೆ ದರ್ಶನ್ ಅವರ ಸ್ಥಿತಿ ಕಂಡು ವಿಜಯಲಕ್ಷ್ಮಿ ಅವರು ಕಣ್ಣೀರಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೊದಲ ಬಾರಿಗೆ ದರ್ಶನ್ ಅವರು ಜೈಲಿಗೆ ಹೋಗಿದ್ದಾಗ ಕೆಲ ಸೌಲಭ್ಯಗಳು ಸಿಕ್ಕಿತ್ತು. ಆದರೆ ಸುಪ್ರೀಂಕೋರ್ಟ್ ಖಡಕ್ ಸೂಚನೆ ಬಳಿಕ ಎರಡನೇ ಸಲ ಜೈಲಿಗೆ ಮರಳಿರುವ ದರ್ಶನ್ಗೆ ಯಾವುದೇ ಹೆಚ್ಚುವರಿ ಸೌಲಭ್ಯಗಳು ಸಿಗುತ್ತಿಲ್ಲ. ಒಂದು ರೀತಿ ಜೈಲಿನಲ್ಲಿ ನರಕಯಾತನೆ ಎಂಬಂತಾಗಿದೆ. ಹೀಗಾಗಿ ನನ್ನ ನೋಡಲು ಜೈಲಿಗೆ ಬರಬೇಡ ಎಂದು ದರ್ಶನ್ ತನ್ನ ಪತ್ನಿಗೆ ಹೇಳಿದ್ದಾರಂತೆ.
ದರ್ಶನ್ ಅವರು ಮೊದಲ ಬಾರಿ ಈ ಕೇಸ್ನಲ್ಲಿ ಜೈಲು ಸೇರಿದ್ದಾಗ ತುಸು ಧೈರ್ಯವಾಗಿಯೇ ಇದ್ದರು. ವಿಜಯಲಕ್ಷ್ಮಿ ಅವರು ಕೂಡ ದಿಟ್ಟತನ ಪ್ರದರ್ಶಿಸಿದ್ದರು. ಆದರೆ ಈ ಬಾರಿ ದರ್ಶನ್ ಅವರೇ ಬೇಸರದ ಮಾತುಗಳನ್ನಾಡುತ್ತಿದ್ದಾರೆ ಎನ್ನಲಾಗಿದೆ. ಎರಡನೇ ಬಾರಿ ಜೈಲಿಗೆ ಹೋದಾಗಿನಿಂದಲೂ ದರ್ಶನ್ ಸಮಸ್ಯೆಗಳ ಸರಮಾಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದಾರೆ. ನಿದ್ರಿಸಲು ಹಾಸಿಗೆ, ದಿಂಬು ಇಲ್ಲದೇ ಪರದಾಡುವಂತಾಗಿದ್ದು, ಏನೇ ಬೇಡಿಕೆ ಇಟ್ಟರೂ ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ. ಒಟ್ಟಾರೆ ದರ್ಶನ್ ಅವರು ಜೈಲಿನ ಜೀವನದಿಂದ ಬೇಸತ್ತು ಪತ್ನಿ ವಿಜಯಲಕ್ಷ್ಮಿ ಅವರ ಮುಂದೆ ಸಂಕಷ್ಟಗಳನ್ನು ಬಿಚ್ಚಿಟ್ಟಿದ್ದಾರೆ.

ಮೊದಲಾದರೆ ದರ್ಶನ್ ಅವರನ್ನು ಭೇಟಿಯಾಗಲು ಕುಟುಂಬಸ್ಥರಿಗೆ ಅವಕಾಶ ಸುಲಭವಾಗಿ ಸಿಗುತ್ತಿತ್ತು. ಆದರೆ ಸುಪ್ರೀಂ ಕೋರ್ಟ್ ಆದೇಶದ ಬಳಿಕೆ ಎಲ್ಲವೂ ಬದಲಾಗಿದೆ. ಪತ್ನಿ ವಿಜಯಲಕ್ಷ್ಮಿ ಕೂಡ ದರ್ಶನ್ ಅವರನ್ನು ಭೇಟಿಯಾಗಲು ಜೈಲಿಗೆ ಬರಲು ಕಷ್ಟ ಎದುರಿಸುವಂತಾಗಿದೆ. ಜೈಲಿನ ಬಳಿ ಬಂದು ಗಂಟೆಗಟ್ಟಲೇ ಕಾಯಬೇಕಿದೆ. ಹೀಗಾಗಿ ಪತ್ನಿಯ ಪಾಡನ್ನು ನೋಡಿ, "ನನ್ನ ಹಣೆಬರಹದಲ್ಲಿ ಏನಿದೆಯೋ ಹಾಗೆ ಆಗುತ್ತೆ, ನೀನು ಇನ್ನು ಮುಂದೆ ಜೈಲಿಗೆ ಬರಬೇಡ ಎಂದು ದರ್ಶನ್ ಹೇಳಿದ್ದಾರಂತೆ. ಸದ್ಯ ಜೈಲಿನಲ್ಲಿ ದರ್ಶನ್ ಪಡುತ್ತಿರುವ ಪಾಡನ್ನು ಕಂಡು ವಿಜಯಲಕ್ಷ್ಮಿ ಕಣ್ಣೀರಿಟ್ಟಿದ್ದಾರೆ.
ಮೊದಲಿನಂತೆ ರಾಜಾತಿಥ್ಯ ಇಲ್ಲ
ದರ್ಶನ್ ಮೊದಲ ಬಾರಿ ಜೈಲು ಸೇರಿದಾಗ ಕೈದಿಯಂತೆ ಇರಲಿಲ್ಲ. ಅಲ್ಲಿ ದರ್ಶನ್ ಅವರಿಗೆ ರಾಜಾತಿಥ್ಯ ನೀಡಿದ್ದ ಆರೋಪ ಕೇಳಿಬಂದಿತ್ತು. ಅಲ್ಲದೆ ಇದಕ್ಕೆ ಸಂಬಂಧಿಸಿದ ಫೋಟೋ ಕೂಡ ರಿಲೀಸ್ ಆಗಿ, ಕೊನೆಗೆ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವವರೆಗೆ ಅವಾಂತರ ಸೃಷ್ಟಿಸಿತ್ತು. ಕೊನೆಗೆ ಜಾಮೀನು ಸಿಕ್ಕಿ ನೆಮ್ಮದಿಯಾಗಿದ್ದ ದರ್ಶನ್ ಅವರಿಗೆ ಸುಪ್ರೀಂಕೋರ್ಟ್ ಶಾಕ್ ನೀಡಿತ್ತು. ದರ್ಶನ್ ಹಾಗೂ ಇತರ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಮಾಡಿ ಆದೇಶಿಸಿತ್ತು. ಹೀಗಾಗಿ ದರ್ಶನ್ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ಮರಳಬೇಕಾಯಿತು.
ದರ್ಶನ್ ಅವರ ಪಾಡು ಈಗ ಸಾಮಾನ್ಯ ಕೈದಿಗಿಂತಲೂ ಕಡೆಯಾಗಿದೆ. ಬೆನ್ನುನೋವಿನಿಂದಾಗಿ ಚಿಕಿತ್ಸೆಗೆಂದು ದರ್ಶನ್ ಜಾಮೀನು ಕೇಳಿದ್ದರು. ಜಾಮೀನು ಸಿಕ್ಕ ನಂತರ ಕೆಲ ಕಾಲ ಆಸ್ಪತ್ರೆಯಲ್ಲೇ ಇದ್ದು, ಸಿನಿಮಾ ಶೂಟಿಂಗ್ಗಳಲ್ಲಿ ಭಾಗಿಯಾಗಿದ್ದರು. ಇನ್ನೇನು ಡೆವಿಲ್ ಸಿನಿಮಾ ರಿಲೀಸ್ ಆಗಬೇಕು ಎನ್ನುವಷ್ಟರಲ್ಲಿ ಜಾಮೀನು ರದ್ದಾಗಿ ಮತ್ತೆ ಜೈಲು ಸೇರಿದರು. ಸದ್ಯ ಜೈಲು ಜೀವನ ನಡೆಸಲಾರದೆ ದರ್ಶನ್ ಒದ್ದಾಡುತ್ತಿರುವುದಂತೂ ಸತ್ಯ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications