Darshan Thoogudeepa: ಬಳ್ಳಾರಿ ಜೈಲಿನಲ್ಲಿ ಜಾಮೀನು ಅರ್ಜಿಗೆ ನಟ ದರ್ಶನ್ ಸಹಿ
Darshan Thoogudeepa: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ಪತಿ ದರ್ಶನ್ ನೋಡಲು ಚಾರ್ಜ್ ಶೀಟ್ ಸಲ್ಲಿಕೆಯಾದ ಬಳಿಕ ಮೊದಲ ಬಾರಿಗೆ ಪತ್ನಿ ವಿಜಯಲಕ್ಷ್ಮಿ ಬಳ್ಳಾರಿ ಜೈಲಿನಲ್ಲಿ ಭೇಟಿಯಾಗಿದ್ದಾರೆ. ಈ ವೇಳೆ ಕೈಯಲ್ಲಿ ಪೇಪರ್ಗಳನ್ನು ಹಿಡಿದುಕೊಂಡು ಬಂದಿದ್ದರು. ಹಾಗಾದರೆ ಏನು ತಂದಿದ್ದರು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಇಂದು (ಸೆಪ್ಟೆಂಬರ್ 05) ನೋಡಲು ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರ ದಿನಕರ್ ತೂಗದೀಪ ಬಳ್ಳಾರಿ ಜಾಮೀನು ಅರ್ಜಿ ಜೊತೆ ಜೈಲಿಗೆ ಬಂದಿದ್ದರು. ಈ ವೇಳೆ ಜಾರ್ಜ್ ಶೀಟ್ ಬಗ್ಗೆ ಕೆಲ ಕಾಲ ಚರ್ಚೆ ನಡೆಸಿದ್ದರಲ್ಲದೆ, ವಿಜಯಲಕ್ಷ್ಮಿ ತಂದಿದ್ದ ಜಾಮೀನು ಅರ್ಜಿಗೆ ನಟ ದರ್ಶನ್ ಸಹಿ ಹಾಕಿದ್ದಾರೆ ಎಂದು ತಿಳಿದುಬಂದಿದೆ.

ರೇಣುಕಾಸ್ವಾಮಿ ನಕಲಿ ಸೋಶಿಯಲ್ ಮೀಡಿಯಾ ಖಾತೆಗಳ ಮೂಲಕ ಪವಿತ್ರಾ ಗೌಡಗೆ ಮಸೇಜ್, ಫೋಟೋಗಳನ್ನು ಕಳುಹಿಸುತ್ತಿದ್ದ ಎಂದು ಚಾರ್ಜ್ಶೀಟ್ನಲ್ಲಿ ಉಲ್ಲೇಖವಾಗಿದೆ. ಇನ್ಸ್ಟಾಗ್ರಾಂನಲ್ಲಿ 4 ಖಾತೆ ಹೊಂದಿದ್ದ ಪವಿತ್ರಾ ಗೌಡ ಹೆಚ್ಚು ಬಳಸುತ್ತಿದ್ದ pavithragowda777_official ಖಾತೆಗೆ ರೇಣುಕಾಸ್ವಾಮಿ ಮೆಸೇಜ್ ಮಾಡಿದ್ದ. ನಟ ದರ್ಶನ್ ಹಾಗೂ ಪವಿತ್ರಾ ಗೌಡ ಲಿವಿಂಗ್ ರಿಲೇಶನ್ಶಿಪ್ನಲ್ಲಿದ್ದರು ಅನ್ನೋದನ್ನು ಚಾರ್ಜ್ಶೀಟ್ ಉಲ್ಲೇಖಿಸಿದೆ.
ಇನ್ನು ನಕಲಿ ಖಾತೆಗಳ ಮೂಲಕ ಅಶ್ಲೀಲ ಫೋಟೋ, ಮೆಸೇಜ್ ಮಾಡುತ್ತಿದ್ದ ರೇಣುಕಾಸ್ವಾಮಿ ಕುರಿತು ಪವಿತ್ರಾ ಗೌಡ ಮನೆಯಲ್ಲಿ ಕೆಲಸಕ್ಕಿದ್ದ ಪವನ್ ಹಾಗೂ ವಿನಯ್ಗೆ ಮಾಹಿತಿ ನೀಡಿದ್ದರು. ಇವರಿಬ್ಬರು ನಟ ದರ್ಶನ್ಗೆ ಈ ಮಾಹಿತಿ ನೀಡಿದ್ದಾರೆ. ತಕ್ಷಣವೇ ಆತನ ಪತ್ತೆ ಹಚ್ಚಿ ಬೆಂಗಳೂರಿಗೆ ಕಿಡ್ನಾಪ್ ಮಾಡಿಕೊಂಡು ಬರಲು ದರ್ಶನ್ ಸೂಚಿಸಿದ್ದನಂತೆ ಎಂದು ತಿಳಿದುಬಂದಿದೆ.
ಫೆಬ್ರವರಿ 24ರಂದು ಪವಿತ್ರಾ, ಪವನ್ ಹಾಗೂ ವಿನಯ್ ಸೇರಿ ಪ್ಲಾನ್ ಮಾಡಿದ್ದಾರೆ. ಬಳಿಕ ಪವಿತ್ರಾ ಗೌಡ, ರೇಣುಕಾಸ್ವಾಮಿ ಜೊತೆ ಚಾಟ್ ಮಾಡಲು ಆರಂಭಿಸಿದ್ದಾರೆ. ಜೂನ್ 3ರಂದು ರೇಣುಕಾಸ್ವಾಮಿ ಮೆಸೇಜ್ಗೆ ತಕ್ಷಣವೇ ಪವಿತ್ರಾ ಗೌಡ ರಿಪ್ಲೇ ಮಾಡಿದ್ದಾಳೆ. ನಕಲಿ ಖಾತೆಯಲ್ಲಿದ್ದ ರೇಣುಕಾಸ್ವಾಮಿ ಪತ್ತೆ ಹಚ್ಚಲು ಪ್ಲಾನ್ ಮಾಡಲಾಗಿತ್ತು.
ಬಳಿಕ ನಂಬರ್ ಪಡೆದ ಪವಿತ್ರಾ ಗೌಡ, ಪವನ್ಗೆ ಕಳುಹಿಸಿದ್ದಾಳೆ. ಇತ್ತ ಪವನ್ ತಾನೆ ಪವಿತ್ರಾ ಗೌಡ ಎಂದು ರೇಣುಕಾಸ್ವಾಮಿ ಜೊತೆ ಚಾಟಿಂಗ್ ಆರಂಭಿಸಿದ್ದಾನೆ. ಚಾಟಿಂಗ್ ವೇಳೆ ರೇಣುಕಾಸ್ವಾಮಿ ತನ್ನ ವಿಳಾಸ, ಕೆಲಸ ಸೇರಿದಂತೆ ಎಲ್ಲವನ್ನೂ ತಿಳಿಸಿದ್ದ. ಇಲ್ಲಿಂದ ಕಾರ್ಯಾಚರಣೆ ಶುರು ಆಗಿದೆ ಎಂದು ತಿಳಿದುಬಂದಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications