ನಟ ದರ್ಶನ್ ನಿಮಗೆ ಡಿ ಬಾಸ್ ಆದ್ರೆ, ನನಗೆ ಮಗ, ಇನ್ನೆರಡು ತಿಂಗಳಲ್ಲಿ ಜೈಲಿನಿಂದ ಬಿಡುಗಡೆ ಪಕ್ಕಾ: ರವಿಚಂದ್ರನ್ ಭವಿಷ್ಯ
Actor Darshan Thoogudeepa: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಕು ಸೇರಿದ್ದಾರೆ. ಇನ್ನೂ ಫೆಬ್ರವರಿ 16ರಂದು ಅವರ ಹುಟ್ಟುಹಬ್ಬವನ್ನು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಭಿಮಾನಿಗಳು ಅದ್ಧೂರಿಯಾಗಿ ಆಚರಣೆ ಮಾಡಿದ್ಧಾರೆ. ಮತ್ತೊಂದೆಡೆ, ಹಿರಿಯ ನಟ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ದರ್ಶನ್ ಜೈಲಿನಿಂದ ಬಿಡುಗಡೆಯಾಗುವ ಕುರಿತು ಭವಿಷ್ಯವನ್ನು ನುಡಿದಿದ್ದಾರೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಫೆಬ್ರವರಿ 16ರಂದು ನಟ ದರ್ಶನ್ ಅವರ 49ನೇ ಜನ್ಮದಿನವಾಗಿದ್ದು, ಈ ಸಂದರ್ಭದಲ್ಲಿ ಅಭಿಮಾನಿಗಳು ತಮ್ಮ ನೆಚ್ಚಿನ ನಟ ಯಾವಾಗ ಹೊರಬರುತ್ತಾರೆ ಎಂದು ಬೇಡಿಕೊಂಡಿದ್ದಾರೆ. ಇಂತಹ ಸಮಯದಲ್ಲೇ ಹಿರಿಯ ನಟ ರವಿಚಂದ್ರನ್ ಅವರು ದರ್ಶನ್ ಬಿಡುಗಡೆ ಕುರಿತು ಭವಷ್ಯ ನುಡಿದಿದ್ದು, ಇದರಿಂದ ಅಭಿಮಾನಿಗಳು ಸಂತಸಗೊಂಡಿದ್ದಾರೆ.

'ಇನ್ನೆರಡು ತಿಂಗಳಿನಲ್ಲಿ ಹೊರಗಡೆ ಬರುತ್ತಾರೆ'
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಹಿರಿಯ ನಟ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ವೇದಿಕೆ ಮುಂದೆ ಅಭಿಮಾನಿಗಳು ಡಿ ಬಾಸ್.. ಡಿ ಬಾಸ್ ಅಂತಾ ಕೂಗಿದಾಗ ಇದಕ್ಕೆ ಪ್ರತಿಕ್ರಿಯಿಸಿ, "ಡಿ ಬಾಸ್ ಬರ್ತಾರೆ ಬಿಡ್ರೋ. ಇನ್ನೆರಡು ತಿಂಗಳಿನಲ್ಲಿ ಹೊರಗಡೆ ಬರುತ್ತಾರೆ. ನನ್ನ ಬಾಯಲ್ಲಿ ಹೇಳಿದ್ದೇನೆ ಅಂದ್ರೆ ಪಕ್ಕಾ ಬರ್ತಾರೆ ನೆನಪಿಟ್ಟುಕೊಳ್ಳಿ," ಎಂದು ಹೇಳಿದರು.
ಹೃದಯದಲ್ಲಿಟ್ಟು ಪೂಜೆ ಮಾಡಿ
"ಅವರು ನಿಮಗೆಲ್ಲಾ ಡಿ ಬಾಸ್.. ಆ ಡಿ ಬಾಸ್ ನನಗೆ ಮಗ ನೆನಪಿಟ್ಟುಕೊಳ್ಳಿ. ಒಂದು ಕೆಟ್ಟ ಗಳಿಗೆ ಮನುಷ್ಯನನ್ನು ಕುಗ್ಗಿಸುತ್ತದೆ ಅಂದ್ರೆ, ಯಾವತ್ತೊಂದು ಒಂದು ದಿನ ಮೇಲಕ್ಕೆ ಎಬ್ಬಿಸಲೇಬೇಕಾಗುತ್ತದೆ. ಆ ದಿನಕ್ಕೆ ಎಲ್ಲಾರೂ ಕಾಯೋಣ. ಆದರೆ, ಒಂದೇ ಪ್ರೀತಿ ಹಾಗೂ ಮನಸ್ಸಿನಿಂದ ಹೃದಯದಲ್ಲಿಟ್ಟು ಪೂಜೆ ಮಾಡಿ. ಆಗ ಅದಕ್ಕೆ ಪ್ರತಿಫಲ ಸಿಕ್ಕೇ ಸಿಗುತ್ತದೆ," ಎಂದು ಹೇಳಿದರು. ಇದರಿಂದ ಅಭಿಮಾನಿಗಳಿಗೆ ಹೊಸ ಉತ್ಸಾಹ ಬಂದಂತಾಗಿದೆ.
ಕ್ರಾಂತಿ ಚಿತ್ರದಲ್ಲಿ ದರ್ಶನ್ ಜೊತೆ 'ಕ್ರೇಜಿ' ನಟನೆ
ದರ್ಶನ್ ಹಾಗೂ ಕ್ರೇಜಿ ಸ್ಟಾರ್ ರವಿಚಂದ್ರನ್ ನಡುವೆ ಉತ್ತಮ ಬಾಂಧವ್ಯ ಇದ್ದು, 2023ರಲ್ಲಿ ಬಿಡುಗಡೆಯಾದ ಕ್ರಾಂತಿ ಸಿನಿಮಾದಲ್ಲಿ ಭಾರ್ಗವ ರಾಯಣ್ಣ ಎಂಬ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ದರ್ಶನ್ ಸಹ ರವಿಚಂದ್ರನ್ ಅವರನ್ನು ಗೌರವದಿಂದ ನೋಡುತ್ತಾರೆ ಎಂಬುದು ಚಿತ್ರರಂಗದಲ್ಲಿ ಎಲ್ಲರಿಗೂ ತಿಳಿದ ವಿಚಾರವೇ ಆಗಿದೆ. ಇದೀಗ ದರ್ಶನ್ ಬಿಡುಗೆ ಬಗ್ಗೆ ಅವರು ನುಡಿದ ಭವಿಷ್ಯ ಇದೀಗ ಎಲ್ಲೆಡೆ ಗಮನ ಸೆಳೆದಿದೆ.
ಮತ್ತೊಂದೆಡೆ, ನಟ ದರ್ಶನ್ ಅವರ ಜಾಮೀನು ಅರ್ಜಿ ಸುಪ್ರೀಂಕೋರ್ಟ್ ಹಂತದಲ್ಲೇ ರದ್ದಾಗಿದೆ. ಈ ಹಿನ್ನೆಲೆ ಸದ್ಯ ಅವರಿಗೆ ಜಾಮೀನು ಸಿಗುವುದು ತುಂಬಾ ಕಷ್ಟ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ, ಈ ನಡುವೆಯೇ ರವಿಚಂದ್ರನ್ ಅವರ ಬಿಡುಗಡೆ ಹೇಳಿಕೆ ಅಭಿಮಾನಿಗಳ ಮನದಲ್ಲಿ ಹೊಸ ಭರವಸೆಯನ್ನು ಮೂಡಿಸಿದೆ. ಒಟ್ಟಾರೆ, ಅಭಿಮಾನಿಗಳು ದರ್ಶನ್ ಶೀಘ್ರದಲ್ಲೇ ಆರೋಪ ಮುಕ್ತರಾಗುವ ನಿರೀಕ್ಷೆಯೊಂದಿಗೆ ಕಾಯುತ್ತಿದ್ದಾರೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications