Get Updates
Get notified of breaking news, exclusive insights, and must-see stories!

Actor Darshan: ನಟ ದರ್ಶನ್‌ಗೆ ಮತ್ತೆ ಶಾಕ್‌ ನೀಡಿದ ಹೈಕೋರ್ಟ್‌

Actor Darshan: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಮತ್ತೆ ಮುಂದೂಡಿದೆ. ಹಾಗಾದರೆ ಎಷ್ಟಕ್ಕೆ ಮೂಡಿಕೆ ಮಾಡಿದೆ ಹಾಗೂ ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಈಗಾಗಲೇ ನಿನ್ನೆ (ನವೆಂಬರ್ 28) ಹೈಕೋರ್ಟ್‌ನಲ್ಲಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ವಿಚಾರಣೆಯನ್ನು ನವೆಂಬರ್ 29ಕ್ಕೆ ಮುಂಡಿತ್ತು. ಇಂದು (ನವೆಂಬರ್ 29) ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ವಿಚಾರಣೆಯನ್ನು ಮತ್ತೆ ಡಿಸೆಂಬರ್ 3ಕ್ಕೆ ಮುಂದೂಡಿ ಆದೇಶ ಹೊರಡಿಸಿದರು.

Actor Darshan s Bail application Hearing Postponed to December 3

ವಿಚಾರಣೆ ವೇಳೆ ಈಗಾಗಲೇ ನಟ ದರ್ಶನ್ ಪರ ವಕೀಲ ಸಿವಿ ನಾಗೇಶ್ ಅವರು ನಿನ್ನೆ ಸುದೀರ್ಘವಾಗಿ ಸುಮಾರು 2 ಗಂಟೆಗಳ ಕಾಲ ವಾದ ಮಂಡನೆ ಮಾಡಿದ್ದರು. ಬಳಿಕ ನ್ಯಾಯಾಧೀಶರಾದಂತಹ ವಿಶ್ವಜಿತ್ ಶೆಟ್ಟಿ ಅವರು ವಿಚಾರಣೆಯನ್ನು ನವೆಂಬರ್‌ 29ಕ್ಕೆ ಮುಂದೂಡಿ ಆದೇಶಿಸಿದ್ದರು. ಇನ್ನು ಇಂದು ಕೂಡ ವಿಚಾರಣೆ ನಡೆಸಿದ ಅವರು ಡಿಸೆಂಬರ್ 3ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿ ಆದೇಶಿಸಿದರು.

ಈ ವೇಳೆ ಆರೋಪಿ ನಾಗರಾಜು ಪರ ವಕೀಲರ ವಾದ ಮಂಡನೆ ಅಂತ್ಯವಾಯಿತು. ಆದ್ದರಿಂದ ವಿಚಾರಣೆ ಡಿಸೆಂಬರ್ 3ಕ್ಕೆ ಹೈಕೋರ್ಟ್ ಮುಂದೂಡಿತು. ಇನ್ನು ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಸೇರಿದಂತೆ ಉಳಿದವರ ಪರ ವಾದ ಮಂಡನೆ ಬಾಕಿಯಿದ್ದು, ಡಿಸೆಂಬರ್ 3ರಂದು ಸರ್ಕಾರಿ ಪರ ವಕೀಲ ಎಸ್‌ಪಿಪಿ ಪ್ರಸನ್ನ ಕುಮಾರ್ ವಾದ ಮಂಡನೆ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಸಿ.ವಿ. ನಾಗೇಶ್ ವಾದ ಏನು?: ಪೊಲೀಸರು ತುಂಬಾ ತಡವಾಗಿ ಸಾಕ್ಷಿಗಳ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ. ಪ್ರತ್ಯಕ್ಷ ಸಾಕ್ಷಿಯ ಹೇಳಿಕೆಗಳಲ್ಲಿ ಗೊಂದಲಗಳಿವೆ. ಮರ್ಮಾಂಗಕ್ಕೆ ಹೊಡೆದ ಬಗ್ಗೆ ಮತ್ತೊಂದು ಹೇಳಿಕೆಯಲ್ಲಿ ಉಲ್ಲೇಖವಿಲ್ಲ. 161 ಹೇಳಿಕೆಗೂ, 164 ಹೇಳಿಕೆಗೂ ವ್ಯತ್ಯಾಸಗಳಿವೆ. 161 ಹೇಳಿಕೆ ಪಡೆದಾಗ ಪ್ರಕರಣದ ಡೈರಿಯಲ್ಲಿ ನಮೂದಿಸಬೇಕು. ಅದರ ಪ್ರತಿಯನ್ನು ಮ್ಯಾಜಿಸ್ಟ್ರೇಟ್‌ಗೆ ನೀಡಬೇಕು. ಈ ಪ್ರಕ್ರಿಯೆಗಳನ್ನು ತನಿಖಾಧಿಕಾರಿಗಳು ಪಾಲಿಸಿಲ್ಲ. ಮೊದಲ ರಿಮ್ಯಾಡ್ ಅರ್ಜಿಗಳಲ್ಲಿ ಸಾಕ್ಷಿಗಳ ಹೇಳಿಕೆ ಉಲ್ಲೇಖವಿಲ್ಲ.

ಜೂನ್ 22ರ ರಿಮ್ಯಾಂಡ್ ಅರ್ಜಿಯಲ್ಲಿ ಮಾತ್ರ ಉಲ್ಲೇಖವಿದೆ. ಪ್ರಕರಣದಲ್ಲಿ ಪ್ರತ್ಯಕ್ಷ, ಪರೋಕ್ಷ ಸಾಕ್ಷಿದಾರರ ಹೆಸರುಗಳನ್ನು ನಮೂದಿಸಿಲ್ಲ ಎಂದು ಸಿ.ವಿ.ನಾಗೇಶ್ ವಾದ ಮಂಡಿಸಿದ್ದಾರೆ. ಬಳ್ಳಾರಿ ಜೈಲಿನಲ್ಲಿದ್ದಾಗ ದರ್ಶನ್‌ಗೆ ಬೆನ್ನು ನೋವು ಕಾಣಿಸಿಕೊಂಡಿದ್ದರಿಂದ ತುರ್ತಾಗಿ ಶಸ್ತ್ರ ಚಿಕಿತ್ಸೆ ಮಾಡಬೇಕೆಂದು ಹೇಳಲಾಗಿತ್ತು. ಈ ಹಿನ್ನೆಲೆ ದರ್ಶನ್‌ಗೆ ಮಧ್ಯಂತ ಜಾಮೀನು ನೀಡಲಾಗಿತ್ತು.

ಆದರೆ ಜಾಮೀನು ಪಡೆದ ತಿಂಗಳು ಕಳೆಯುತ್ತಾ ಬಂದರೂ ಸಹ ಅವರಿಗೆ ಶಸ್ತ್ರ ಚಿಕಿತ್ಸೆ ಆಗಿಲ್ಲ. ಈ ಬಗ್ಗೆ ಹೈಕೋರ್ಟ್‌ಗೆ ಸಿ.ವಿ. ನಾಗೇಶ್ ಮಾಹಿತಿ ನೀಡಿದ್ದು, ಎಂಆರ್‌ಐ ಸ್ಕ್ಯಾನ್ ಆಗಿದೆ. ಬಿ.ಪಿ. ವ್ಯತ್ಯಾಸವಾಗುತ್ತಿದೆ. ಅದು ಸರಿ ಹೋಗದೇ ಯಾವುದೇ ಟ್ರೀಟ್‌ಮೆಂಟ್ ಕೊಡಲಾಗುವುದಿಲ್ಲ. ಸರ್ಜರಿ ಬಗ್ಗೆ ವೈದ್ಯರು ತೀರ್ಮಾನಿಸುತ್ತಾರೆ ಎಂದು ಹೇಳಿದರು.

ನಟ ದರ್ಶನ್ ಪರ ವಕೀಲರಾದ ಸಿ.ವಿ.ನಾಗೇಶ್ ಅವರು ರೇಣುಕಾಸ್ವಾಮಿ ಪ್ರಕರಣದ ಹೈ-ವಿಟ್ನೆಸ್‌ಗಳ ಸ್ವಇಚ್ಚಾ ಹೇಳಿಕೆಗಳನ್ನು ಓದಿದರು. ಇಬ್ಬರು ಸಾಕ್ಷಿಗಳ ಹೇಳಿಕೆ ನೋಡಿದರೆ, ಅವರು ಘಟನಾ ಸ್ಥಳದಲ್ಲೇ ಇರಲಿಲ್ಲ ಎನ್ನುವ ಅನುಮಾನ ಮೂಡಿದೆ ಎಂದು ಹೇಳಿದ್ದಾರೆ.

ಕೆಲ ಸಾಕ್ಷಿಗಳ ಹೇಳಿಕೆಗಳು ಸರಿಯಾಗಿ ಹೊಂದಾಣಿಕೆ ಆಗುತ್ತಿಲ್ಲ. ಕಾರು ಬಂತು-ಹೋಯ್ತು ಎನ್ನುವ ರೀತಿ ಇದೆ. ಯಾವಾಗ, ಯಾರು ಬಂದರು? ಯಾರು ಇದ್ದರೂ ಎಂದು ಹೇಳಿಲ್ಲ. ಸಾಕ್ಷಿಯಾಗಿರುವ ಮಲ್ಲಿಕಾರ್ಜುನ ಅವರು ಮಂಗಳವಾರ ಕೆಲಸಕ್ಕೆ ಬಂದಾಗ ರೇಣುಕಾಸ್ವಾಮಿ ಕೊಲೆ ಆಗಿರುವ ಬಗ್ಗೆ ಗೊತ್ತಾಗಿದೆ ಎಂದು ಹೇಳುತ್ತಾರೆ. ಯಾರು ಕೊಲೆ ಮಾಡಿದರು ಎನ್ನುವುದು ಮಾಧ್ಯಮಗಳ ಮೂಲಕ ಗೊತ್ತಾಯಿತು ಎಂದು ಹೇಳಿದ್ದಾರೆ. ಆದ್ದರಿಂದ ಸಾಕ್ಷಿಗಳು ಸರಿಯಾಗಿಲ್ಲ ಎಂದು ವಾದ ಮಂಡನೆ ಮಾಡಿದ್ದಾರೆ.

ಅಲ್ಲದೆ, ಪ್ರತ್ಯಕ್ಷದರ್ಶಿ ಮಧುಸೂದನ್ ಹೇಳಿಕೆ ಆಧರಿಸಿ ಸಿ.ವಿ.ನಾಗೇಶ್ ವಾದ ಮಂಡಿಸಿದರು. ಜೂನ್ 15ರಂದು ಹೇಳಿಕೆ ದಾಖಲಿಸಲಾಗಿದ್ದು, ಕೆಲ ಕಾರು ಬರುತ್ತವೆ. ಅದರಲ್ಲಿ ದರ್ಶನ್ ಸರ್ ಇರುತ್ತಾರೆ. ಅಲ್ಲಿಗೆ ಹೋಗಬೇಡಿ ಎಂದಿದ್ದೆ. ನಂತರ ಸಂಜೆ‌ ಮನೆಗೆ ಹೋಗಿದ್ದೆ ಎಂದು ಮಧುಸೂದನ್ ಹೇಳಿಕೆ ನೀಡಿದ್ದಾರೆ. ಆದರೆ ಆತ ದಿನಾಂಕ 10ರಂದು ಕೊಲೆ ಬಗ್ಗೆ ಮೊಬೈಲ್‌ನಲ್ಲಿ ನೋಡಿ ತಿಳಿದುಕೊಂಡೆ ಎಂದು ಹೇಳಿದ್ದಾರೆ ಅಂತಾ ನಾಗೇಶ್​ ವಾದ ಮಂಡನೆ ವೇಳೆ ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+