Vijayalakshmi Darshan: ದಿನ ದಿನಕ್ಕೂ ಜನಪ್ರಿಯತೆ ಪಡೆಯುತ್ತಿದ್ದಾರೆ ವಿಜಯಲಕ್ಷ್ಮಿ ದರ್ಶನ್: ಹೇಗೆ ತಿಳಿಯಿರಿ
ಬೆಂಗಳೂರು, ಜೂನ್. 27: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಆತನ ಸ್ನೇಹಿತೆ ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಮಂದಿ ಆರೋಪಿಗಳಾಗಿದ್ದಾರೆ. ಪವಿತ್ರಾ ಗೌಡ ಅವರಿಗೆ ಜನ ಸಕತ್ ಶಾಪ ಹಾಕುತಿದ್ದಾರೆ. ಇದರ ಜೊತೆಗೆ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೆ ಹೆಚ್ಚು ಪ್ರೀತಿ ಮತ್ತು ಖ್ಯಾತಿ ಸಿಗುತ್ತಿದೆ.
ನಟ ದರ್ಶನ್ ಬಂಧನದ ಜೊತೆಗೆ ಪವಿತ್ರಾ ಗೌಡ ಅವರನ್ನು ಬಂಧಿಸಲಾಗಿದೆ. ಎರಡು ದಿನ ಯಾವುದೇ ಪ್ರತಿಕ್ರಿಯೆ ನೀಡಿದ ದರ್ಶನ್ ಪತ್ನಿ ವಿಜಯಲಕ್ಷ್ಮಿ ನಿಧಾನವಾಗಿ ಗಂಡನ ಮೇಲಿನ ಕೋಪವನ್ನು ಹತೋಟಿಗೆ ತಂದುಕೊಂಡರು. ಡಿಆಕ್ಟಿವೆಟ್ ಮಾಡಿದ್ದ ಇನ್ಸ್ಟಾಗ್ರಾಮ್ ಖಾತೆಯನ್ನು ಮತ್ತೆ ಆಕ್ಟಿವ್ ಮಾಡಿಕೊಂಡರು. ಗಂಡನನ್ನು ಜೈಲಿನ ಕಂಬಿಗಳ ಹಿಂದಿನಿಂದ ಹೊರತರಲು ಕಾನೂನಿನ ಸಮರಕ್ಕೆ ಮುಂದಾದರು. ಇದು ಅವರನ್ನು ಜನ ಪ್ರೀತಿಸುವಂತೆ ಮಾಡಿದೆ.

ಜನಪ್ರಿಯತೆಯಲ್ಲಿ ಮುಳುಗುತ್ತಿದ್ದಾರೆ ವಿಜಯಲಕ್ಷ್ಮಿ
ನಟ ದರ್ಶನ್ ಈ ಹಿಂದೆ ವಿಜಯಲಕ್ಷ್ಮಿ ಅವರ ಮೇಲೆ ಹಲ್ಲೆ ಮಾಡಿ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲು ಸೇರಿದ್ದರು. ಆಗಲೂ ಕೂಡ ಕೋಪ ಮರೆತು ಗಂಡನನ್ನು ಜೈಲಿನಿಂದ ಬಿಡುಗಡೆ ಮಾಡಿಸಿಕೊಂಡು ಬಂದಿದ್ದರು. ಈಗ ಮತ್ತೆ ಗಂಡನನ್ನು ಜೈಲಿನಿಂದ ಬಿಡಿಸಲು ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಇದು ದರ್ಶನ್ ಅವರ ಕೋಟ್ಯಾಂತರ ಅಭಿಮಾನಿಗಳ ಮೆಚ್ಚುಗೆಗೆ ಕಾರಣವಾಗಿದೆ. ಅತ್ತಿಗೆಯಿಂದ ಈಗ ಅವರನ್ನು ದೇವತೆ ಎಂದು ಹೇಳುತ್ತಿದ್ದಾರೆ.
ದರ್ಶನ್ ಬಂಧನದ ಮೊದಲು ವಿಜಯಲಕ್ಷ್ಮಿ ಅವರ ಇನ್ಸ್ಟಾಗ್ರಾಮ್ ಅಕೌಂಟ್ ಫಾಲೋ ಮಾಡುವವರ ಸಂಖ್ಯೆ 171 ಸಾವಿರವಿತ್ತು. ಆದರೆ ದರ್ಶನ್ ಪ್ರಕರಣದ ಬಳಿಕ ವಿಜಯಲಕ್ಷ್ಮಿ ಇನ್ಸ್ಟಾಗ್ರಾಮ್ ಪ್ರೋಫೈಲ್ ಡಿ ಆಕ್ಟಿವೆಟ್ ಮಾಡುವ ಮುನ್ನ ಈ ಸಂಖ್ಯೆ 188 ಸಾವಿರಕ್ಕೆ ಏರಿಕೆಯಾಗಿತ್ತು. ಇದಾದ ಕೆಲವೇ ದಿನಗಳಲ್ಲಿ ಅವರ ಅಕೌಂಟ್ ಆಕ್ಟಿವ್ ಆಯಿತು. ಆಗ ಎರಡು ಲಕ್ಷ ಫಾಲೋವರ್ಸ್ ಅದರು. ಈಗ ಆ ಸಂಖ್ಯೆ ಗಂಟೆ ಗಂಟೆಗೂ ಹೆಚ್ಚಾಗುತ್ತಿದ್ದು, 219ಕ್ಕೆ ಏರಿಕೆಯಾಗಿದೆ.

ವಿಜಯಲಕ್ಷ್ಮಿ ಅವರು ದರ್ಶನ್ ಚಾಲೆಂಜಿಂಗ್ ಸ್ಟಾರ್ ಆಗುವ ಮುಂಚೆಯಿಂದಲೂ ಅವರ ಜೊತೆಗಿದ್ದವರು. ಗಂಡನನ್ನು ಕಣ್ಣಲ್ಲಿ ಕಣ್ಣಿಟ್ಟು ಕಾಪಾಡುತ್ತಾ ತಾನು ಕೆಲಸಕ್ಕೆ ಹೋಗಿ ತಮ್ಮ ಸಂಸಾರ ತೂಗಿಸಿದವರು. ಹೀಗಾಗಿಯೇ ಅವರ ಬಗ್ಗೆ ಇಂದಿಗೂ ಚಿತ್ರರಂಗದಲ್ಲಿ ಮತ್ತು ಅಭಿಮಾನಿಗಳಲ್ಲಿ ವಿಶೇಷ ಸ್ಥಾನ ಪಡೆದಿದ್ದಾರೆ. ಇಷ್ಟು ದಿನ ಅತ್ತಿಗೆ ಅತ್ತಿಗೆ ಎನ್ನುತ್ತಿದ್ದ ಅಭಿಮಾನಿಗಳು ಈಗ ದೇವತೆ ದೇವತೆ ಎನ್ನುತ್ತಿದ್ದಾರೆ.
ನಿಮ್ಮ ಆತಂಕವನ್ನು ನಾನು, ದರ್ಶನರಿಗೆ ತಲುಪಿಸಿದ್ದೇನೆ!
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ತನ್ನ ಮಗನ ಜೊತೆಗೆ ಹೋಗಿ ಭೇಟಿಯಾಗಿರುವ ಅವರು ಕಾನೂನು ಸಮರ ನಡೆಸಿ ಗಂಡನನ್ನು ಕಂಬಿಹಿಂದೆಯಿಂದ ಹೊರ ತರುವುದಾಗಿ ಹೇಳಿದ್ದಾರೆ. ದರ್ಶನ್ ಅವರು ತಮ್ಮ ಸೆಲಬ್ರಿಟಿಗಳಿಗೆ ಕೊಟ್ಟಿರುವ ವಿಶೇಷ ಸಂದೇಶವನ್ನು ಕೂಡ ಸಾಮಾಜಿಕ ಜಾಲತಾಣಗಳ ಮೂಲಕ ಅಭಿಮಾನಿಗಳಿಗೆ ಹಂಚಿಕೊಂಡಿದ್ದಾರೆ.
"ನನ್ನ ಪ್ರೀತಿಯ ಸಹೋದರರೇ, ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ "ಸೆಲೆಬ್ರಿಟಿಗಳನ್ನು" ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ. ಇದೊಂದು ಪರೀಕ್ಷೆಯ ಸಮಯ. ನನಗೆ,ನಿಮಗೆ, ನಮ್ಮೆಲ್ಲರಿಗೆ. ನಾವು ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ. ಆದ್ದರಿಂದ ತಾಳ್ಮೆ, ಶಾಂತಿಯಿಂದಿರೋಣ. ನಿಮ್ಮ ಆತಂಕವನ್ನು ನಾನು, ದರ್ಶನರಿಗೆ ತಲುಪಿಸಿದ್ದೇನೆ. ಅವರೂ ನಿಮ್ಮ ಪ್ರತಿ ಕಾಳಜಿ ವ್ಯಕ್ತಪಡಿಸಿದ್ದಾರೆ. ನಾವು ನಮ್ಮ ನ್ಯಾಯಾಲಯಗಳ ಮೇಲೆ ವಿಶ್ವಾಸವಿಡೋಣ. ನಮಗೆ ನ್ಯಾಯ ಸಿಗುವ ಸಂಪೂರ್ಣ ಭರವಸೆ ನನಗಿದೆ" ಎಂದು ತಿಳಿಸಿದ್ದಾರೆ.
-
ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ವಿಶೇಷ: ಬೆಟ್ಟದ ಹೂವಿನಿಂದ ಗಂಧದ ಗುಡಿಯವರೆಗೆ, ಅಪ್ಪು ಎಂಬ ಅಳಿಸಲಾಗದ ನಗು -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ












Click it and Unblock the Notifications