Duniya Vijay: ಫ್ಯಾನ್ಸ್ಗೆ ಶಾಕ್ ಕೊಟ್ಟ ದುನಿಯಾ ವಿಜಯ್: ಸೋಶಿಯಲ್ ಮೀಡಿಯಾದಲ್ಲಿ ವಿಜಿ ಏನಂದ್ರು?
ನಟ ದುನಿಯಾ ವಿಜಯ್ ಅವರು ಕನ್ನಡದ ಜನಪ್ರಿಯ ಮಾಸ್ ಹೀರೋಗಳಲ್ಲಿ ಒಬ್ಬರು. ನಟ ದುನಿಯಾ ವಿಜಯ್ ಅವರು ತಮ್ಮ ಅಭಿಮಾನಿ ಬೇಸರದ ಸುದ್ದಿಯನ್ನ ನೀಡಿದ್ದಾರೆ. ದುನಿಯಾ ವಿಜಯ್ ಅವರು ತಮ್ಮ ಅಭಿಮಾನಿಗಳಿಗಾಗಿ ಪತ್ರವೊಂದು ಬರೆದು ಮನವಿ ಮಾಡಿಕೊಂಡಿದ್ದಾರೆ.
ದೊಡ್ಡ ಸಂಖ್ಯೆಯ ಅಭಿಮಾನಿ ಬಳಗವನ್ನ ಹೊಂದಿರುವ ಇವರು ಕಳೆದ ಕೆಲ ವರ್ಷಗಳಲ್ಲಿ ನಿರ್ದೇಶಕರಾಗಿಯೂ ದುನಿಯಾ ವಿಜಯ್ ಯಶಸ್ಸು ಗಳಿಸಿದ್ದಾರೆ. ಸಾಮಾಜಿಕ ಕಾರ್ಯದಲ್ಲಿಯೂ ತೊಡಗಿಕೊಂಡಿರುವ ದುನಿಯಾ ವಿಜಯ್, ಕಳೆದ ಕೆಲ ವರ್ಷದಿಂದ ತಮ್ಮ ಹುಟ್ಟುಹಬ್ಬವನ್ನು ಹುಟ್ಟೂರಿನಲ್ಲಿ ತಂದೆ-ತಾಯಿಯ ಸಮಾಧಿ ಬಳಿ ಆಚರಿಸಿಕೊಳ್ಳುತ್ತಾರೆ. ಆದರೆ ಈ ಬಾರಿ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದು ಅಭಿಮಾನಿಗಳಿಗೆ ಬೇಸರ ವಿಷಯವನ್ನ ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪತ್ರವೊಂದನ್ನು ದುನಿಯಾ ವಿಜಯ್ ಬರೆದಿದ್ದಾರೆ. 'ನನ್ನ ಪ್ರೀತಿಯ ಅಭಿಮಾನಿಗಳೇ, ಪ್ರತಿ ವರ್ಷವೂ ನನ್ನ ಹುಟ್ಟು ಹಬ್ಬವನ್ನು ನಿಮ್ಮ ಮನೆಯ, ಊರಿನ ಹಬ್ಬವನ್ನಾಗಿ ನೀವುಗಳು ಅಂದರೆ ನನ್ನ ಅಭಿಮಾನಿಗಳು ಆಚರಣೆ ಮಾಡ್ತಾ ಇದ್ರಿ. ಈ ಬಾರಿಯೂ ನಿಮ್ಮ ಜತೆ ನಾನು ಹುಟ್ಟು ಹಬ್ಬವನ್ನು ಆಚರಿಸಬೇಕು ಎಂಬ ಆಸೆ ಇತ್ತು ಆದರೆ ಕೆಲಸ ಎಂಬ ಜವಬ್ದಾರಿ ನನ್ನ ಬೆನ್ನೆರಿದೆ. ತಾವೆಲ್ಲರೂ ನಾನು ಮಾಡುವ ಕೆಲಸಕ್ಕೆ ನನ್ನ ಜತೆ ನಿಂತು ನನ್ನನ್ನು ಈ ಮಟ್ಟಕ್ಕೆ ಬೆಳೆಸಿದ್ದೀರ.
ಪ್ರತಿ ಬಾರಿಯಂತೆ ಈ ಬಾರಿ ನಾನು ಹುಟ್ಟುಹಬ್ಬದ ದಿನ ನನ್ನ ತಾಯಿ, ತಂದೆ ಸಮಾಧಿ ಬಳಿ ಸಿಗುವುದಿಲ್ಲ.ಅಂದು ಜಡೇಶ್ ಕೆ ಹಂಪಿ ನಿರ್ದೇಶನ ಮಾಡುತ್ತಿರುವ VK29 ಚಿತ್ರೀಕರಣದಲ್ಲಿರುತ್ತೇನೆ. ನಿಮ್ಮ ಪ್ರೀತಿ ಅಭಿಮಾನದ ನಿರೀಕ್ಷೆಯಂತೆ ಅಂದೇ VK 29 ಚಿತ್ರದ ಫಸ್ಟ್ ಲುಕ್ ನಿಮಗಾಗಿ ಬಿಡುಗಡೆ ಮಾಡ್ತಿದ್ದೇವೆ. ವಿಶೇಷ ಮನವಿ: ಶನಿವಾರ ಭಾನುವಾರ ನಾನೂ ಊರಲ್ಲಿ ಇರುವುದಿಲ್ಲ.. ದಯವಿಟ್ಟು ಯಾರೂ ಕೂಡ ಮನೆ ಬಳಿ ಬಂದು ಕಾಯಬೇಡಿ' ಎಂದಿದ್ದಾರೆ ವಿಜಯ್.
ದುನಿಯಾ ವಿಜಯ್ ಪೋಸ್ಟ್
ನನ್ನ ಪ್ರೀತಿಯ ಅಭಿಮಾನಿಗಳೇ.... ಪ್ರತಿ ವರ್ಷವೂ ನನ್ನ ಹುಟ್ಟು ಹಬ್ಬವನ್ನು ನಿಮ್ಮ ಮನೆಯ ,ಊರಿನ ಹಬ್ಬವನ್ನಾಗಿ ನೀವುಗಳು ಅಂದರೆ ನನ್ನ ಅಭಿಮಾನಿಗಳು ಆಚರಣೆ ಮಾಡ್ತಾ ಇದ್ರಿ. ಈ ಬಾರಿಯೂ ನಿಮ್ಮ ಜತೆ ನಾನು ಹುಟ್ಟು ಹಬ್ಬವನ್ನು ಆಚರಿಸಬೇಕು ಎಂಬ ಆಸೆ ಇತ್ತು ಆದರೆ ಕೆಲಸ ಎಂಬ ಜವಬ್ದಾರಿ ನನ್ನ ಬೆನ್ನೆರಿದೆ.
ತಾವೆಲ್ಲರೂ ನಾನು ಮಾಡುವ ಕೆಲಸಕ್ಕೆ ನನ್ನ ಜತೆ ನಿಂತು ನನ್ನನ್ನು ಈ ಮಟ್ಟಕ್ಕೆ ಬೆಳೆಸಿದ್ದೀರ. ಪ್ರತಿ ಬಾರಿಯಂತೆ ಈ ಬಾರಿ ನಾನು ಹುಟ್ಟುಹಬ್ಬದ ದಿನ ನನ್ನ ತಾಯಿ, ತಂದೆ ಸಮಾಧಿ ಬಳಿ ಸಿಗುವುದಿಲ್ಲ.ಅಂದು ಜಡೇಶ್ ಕೆ ಹಂಪಿ ನಿರ್ದೇಶನ ಮಾಡುತ್ತಿರುವ VK29 ಚಿತ್ರೀಕರಣದಲ್ಲಿರುತ್ತೇನೆ. ನಿಮ್ಮ ಪ್ರೀತಿ ಅಭಿಮಾನದ ನಿರೀಕ್ಷೆಯಂತೆ ಅಂದೇ VK 29 ಚಿತ್ರದ ಫಸ್ಟ್ ಲುಕ್ ನಿಮಗಾಗಿ ಬಿಡುಗಡೆ ಮಾಡ್ತಿದ್ದೇವೆ. ವಿಶೇಷ ಮನವಿ: ಶನಿವಾರ ಭಾನುವಾರ ನಾನೂ ಊರಲ್ಲಿ ಇರುವುದಿಲ್ಲ.. ದಯವಿಟ್ಟು ಯಾರೂ ಕೂಡ ಮನೆ ಬಳಿ ಬಂದು ಕಾಯಬೇಡಿ ಎಂದು ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ












Click it and Unblock the Notifications