Video Viral: ಮ್ಯಾನ್ ಹೋಲ್ಗಿಳಿದ ಗೋಲ್ಡನ್ ಸ್ಟಾರ್ ಗಣೇಶ್, ರಮೇಶ್ ಅರವಿಂದ್, ವಿಡಿಯೋ ಭಾರೀ ವೈರಲ್
ಬೆಂಗಳೂರು, ಡಿಸೆಂಬರ್, 05: ನಟ ರಮೇಶ್ ಅರವಿಂದ್ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಇರಿಬ್ಬರೂ ಮ್ಯಾನ್ ಹೋಲ್ಗೆ ಇಳಿದಿದ್ದಾರೆ. ಈ ವೇಳೆ ಅವರ ಸುತ್ತಲೂ ಜನ ನೆರೆದಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಬಾರೀ ವೈರಲ್ ಆಗುತ್ತಿದೆ. ಇದನ್ನು ನಟ ದರ್ಶನ್ ರಮೇಶ್ ಅರವಿಂದ್ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ನೆಟ್ಟಿಗರು ಹಲವು ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.
ಸಾಮಾನ್ಯವಾಗಿ ಸಿನಿಮಾಗಳ ಶೂಟಿಂಗ್ ವೇಳೆ ನಡೆದ ಕೆಲವು ಸೀನ್ಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿರುವ ಉದಾಹರಣೆಗಳಿವೆ. ಇದೀಗ ಅಂತಹದ್ದೇ ಒಂದು ಘಟನೆ ನಡೆದಿದ್ದು, ನಟ ರಮೇಶ್ ಅವರವಿಂದ್ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಮ್ಯಾನ್ ಹೋಲ್ಗೆ ಇಳಿದಿರುವ ವಿಡಿಯೋ ಭಾರೀ ವೈರಲ್ ಆಗುತ್ತಿದೆ.

ವಿಖ್ಯಾತ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಯುವರ್ಸ್ ಸಿನ್ಸಿಯರ್ಲಿ ರಾಮ್ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ಈ ಸಿನಿಮಾದಲ್ಲಿ ರಮೇಶ್ ಅರವಿಂದ್ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಇಬ್ಬರು ಜೊತೆಗೆ ನಟಿಸುತ್ತಿದ್ದಾರೆ. ಹೀಗೆ ಒಂದು ಸೀನ್ ಶೂಟಿಂಗ್ ವೇಳೆ ಇವರಿಬ್ಬರನ್ನು ಮ್ಯಾನ್ ಹೋಲ್ಗೆ ಇಳಿಸಲಾಗಿದೆ. ಆದರೆ ಭಯ ಪಡುವಂತಹ ವಿಚಾರವೇನಲ್ಲ. ಇನ್ನೂ ಈ ವಿಡಿಯೋಗೆ ಇದೀಗ ನೆಟ್ಟಿಗರು ಹಲವು ರೀತಿಯಲ್ಲಿ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ.
ಮುಂಗಾರು ಮಳೆ ಸಿನಿಮಾದಲ್ಲಿ ಪೂಜಾ ಗಾಂಧಿ ಅವರ ಕೈ ಗಡಿಯಾರ ಮ್ಯಾನ್ ಹೋಲ್ ಬಿದ್ದಿರುತ್ತದೆ. ಆಗ ನಟ ಗೋಲ್ಡನ್ ಸ್ಟಾರ್ ಮ್ಯಾನ್ ಹೋಲ್ಗೆ ಇಳಿದು ಆ ವಾಚ್ ಹೊರತೆಗೆಯುತ್ತಾರೆ. ಇದೀಗ ನಡೆದಿರುವ ಮತ್ತೊಂದು ಸಿನಿಮಾ ಶೂಟಿಂಗ್ ವೇಳೆ ಇದೇ ಸೀನ್ ಕಣ್ಣ ಮುಂದೆ ಬಂದತಾಗಿದೆ ಎಂದು ನೆಟ್ಟಿಗರು ಹೇಳುತ್ತಿದ್ದಾರೆ.
ಯುವರ್ಸ್ ಸಿನ್ಸಿಯರ್ಲಿ ರಾಮ್ ಸಿನಿಮಾನ ಶೂಟಿಂಗ್ಗಾಗಿ ಮ್ಯಾನ್ ಹೋಲ್ಗಿಳಿದ ನಟ ಅರವಿಂದ್ ಬ್ಲೇಸರ್ನಲ್ಲಿದ್ದು, ನಟ ಗೋಲ್ಡನ್ ಸ್ಟಾರ್ ಗಣೇಶ್ ಆಫ್ ಶರ್ಟ್ ಹಾಕಿಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನೆಟ್ಟಿಗರೊಬ್ಬರು ಅಲ್ಲೇನು ಮಾಡುತ್ತಿದ್ದೀರಿ ಇಬ್ಬರು ಎಂದು ಕೇಳುವ ಮೂಲಕ ತಮಾಷೆ ಮಾಡಿದ್ದಾರೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications