Actor Sudeep: ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್, ವಿಡಿಯೋ ವೈರಲ್
Acotor Kiccha Sudeep: ಇಂದು (ಸೆಪ್ಟೆಂಬರ್ 02) ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ಇದ್ದಾರೆ. ಇನ್ನು ಅವರು ಇಂದೇ ತಮ್ಮ ಟ್ವೀಟ್ ಖಾತೆ ಮೂಲಕ ಪೋಸ್ಟ್ರ್ವೊಂದನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಗುಡ್ನ್ಯೂಸ್ವೊಂದನ್ನು ನೀಡಿದ್ದಾರೆ. ಹಾಗಾದರೆ ಆ ಶುಭಸುದ್ದಿ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ತಮ್ಮ ಹುಟ್ಟು ಹಬ್ಬದ ದಿನವೇ ನಟ ಕಿಚ್ಚ ಸುದೀಪ್ "ಬಿಲ್ಲಾ ರಂಗಾ ಭಾಷಾ" ಎಂಬ ಹೊಸ ಸಿನಿಮಾ ಘೋಷಣೆ ಮಾಡಿದ್ದು, ಇದು ಅಭಿಮಾನಿಗಳಲ್ಲಿ ಕುತೂಹಲ ಹುಟ್ಟುಹಾಕಿದೆ.
‘A Tale From The Future’ Presenting the Official Title Logo and Concept video of Billa Ranga Baasha - First Blood.@anupsbhandari @primeshowtweets @Niran_Reddy @chaitanyaniran @BRBmovie #BRBFirstBlood #BRBMovie pic.twitter.com/iRabUt6NlC
— Kichcha Sudeepa (@KicchaSudeep) September 2, 2024

ಇನ್ನು ಬಿಲ್ಲಾ ರಂಗ ಭಾಷಾ ಸಿನಿಮಾದ ಟೈಟಲ್ ಲೋಗೋ ಮತ್ತು ಪರಿಕಲ್ಪನೆಯ ವಿಡಿಯೋವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ನಟ ಸುದೀಪ್ ಹಂಚಿಕೊಂಡಿದ್ದು, ಇದು ಸಖತ್ ಸದ್ದು ಮಾಡುತ್ತಿದೆ. ವಿಕ್ರಾಂತ್ ರೋಣ ನಿರ್ದೇಶನದಲ್ಲಿ ಈ ಬಿಲ್ಲಾ ರಂಗ ಭಾಷಾ ಸಿನಿಮಾ ತಯಾರಾಗುತ್ತಿದೆ.
ಒಂದಾನೊಂದು ಕಾಲದಲ್ಲಿ ಕ್ರಿಸ್ತ ಶಕ 2209ರಲ್ಲಿ ಎಂದು ಆರಂಭವಾಗುವ ವಿಡಿಯೋದಲ್ಲಿ ಬಿಲ್ಲಾ ರಂಗ ಭಾಷಾ
ಎಂಬ ಮೂವರ ಕಥೆಯ ಬಗ್ಗೆ ವಿಡಿಯೋದಲ್ಲಿ ಮಾಹಿತಿ ನೀಡಲಾಗಿದೆ. ಈ ಸಿನಿಮಾಗೆ ಅನೂಪ್ ಬಂಡಾರಿ ಕಥೆ ಬರೆದಿದ್ದು, ನಿರ್ದೇಶನ ಮಾಡುತ್ತಿದ್ದಾರೆ.
ಈ ಸಿನಿಮಾ ಯಾವ ಮಟ್ಟದಲ್ಲಿ ಸದ್ದು ಮಾಡಲಿದೆ ಎಂದು ಕಾದು ನೋಡಬೇಕಾಗಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಹಿನ್ನೆಲೆ ಇಂದು ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಇನ್ನು ಮ್ಯಾಕ್ಸ್ ಸಿನಿಮಾದ ಬಳಿಕ ನಟ ಸುದೀಪ್ ಈ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ತಾರಾಗಣದ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ.
ಅಭಿಮಾನಿಗಳ ಬಗ್ಗೆ ಸುದೀಪ್ ಹೇಳಿದ್ದೇನು?: ಇಂದು (ಸೆಪ್ಟೆಂಬರ್ 02) ನಟ ಕಿಚ್ಚ ಸುದೀಪ್ ಅವರು 51ನೇ ಹುಟ್ಟುಹಬ್ಬದ ಸಂಭ್ರದಲ್ಲಿದ್ದಾರೆ. ಇನ್ನು ಅವರು ತುಂಬಾ ಅಭಿಮಾನಿಗಳು ಸೇರುತ್ತಾರೆಂಬ ಕಾರಣಕ್ಕೆ ಜೆಪಿ ನಗರದ ತಮ್ಮ ನಿವಾಸದ ಬಳಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿಲ್ಲ. ಬದಲಾಗಿ ಜಯನಗರದ ಎಂಇಎಸ್ ಮೈದಾನದಲ್ಲಿ ಕಾರ್ಯಕ್ರಮ ನಡೆಸಿ, ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದರು.
ಈ ವೇಳೆ ಅಭಿಮಾನಿಗಳ ಬಗ್ಗೆ ಮಾತನಾಡಿರುವ ಕಿಚ್ಚ ಸುದೀಪ್ ಅವರು, ಯಾವತ್ತೂ ನಾವು ಸಂಪಾದನೆ ಮಾಡಿರುವಂತಹ ನನ್ನ ಹೆಸರಿಗೆ ಕಳಂಕ ತರುವಂತಹ ಯಾವ ಕೆಲಸವನ್ನೂ ನನ್ನ ಅಭಿಮಾನಿಗಳು ಮಾಡಿಲ್ಲ, ಮುಂದುಯೋ ಮಾಡೋದಿಲ್ಲ. ಇದು ಸಮಾಜಕ್ಕೆ ತುಂಬಾನೇ ಮುಖ್ಯ ಆಗುತ್ತದೆ ಎಂದು ಹೇಳಿದರು.
ಸಿನಿಮಾ ಎಲ್ಲಾರೂ ಮಾಡುತ್ತೇವೆ. ದೊಡ್ಡ ದೊಡ್ಡ ಕಲಾವಿದರೂ ಇದ್ದಾರೆ, ಹೊಸಬರು ಇದ್ದಾರೆ. ಅವರು ಒಳ್ಳೊಳ್ಳೆ ಸಿನಿಮಾಗಳನ್ನು ಕೊಡುತ್ತಿದ್ದು, ಯಶಸ್ಸು ಕಾಣುತ್ತಾ. ದೊಡ್ಡ ಮಟ್ಟದಲ್ಲಿ ಬೆಳೆಯುತ್ತಾರೆ ಅಂತಲೂ ಇದೇ ವೇಳೆ ಹೇಳಿದ್ದಾರೆ.
ಇನ್ನು ವ್ಯಕ್ತಿತ್ವದಲ್ಲಿ ದೊಡ್ಡವರಾಗಬೇಕು ಅಂದರೆ ಬರೀ ಸಿನಿಮಾ ಮಾತ್ರ ಸಾಕಾಗುವುದಿಲ್ಲ. ನನ್ನ ಕುಟುಂಬ, ಸ್ನೇಹಿತರು, ಅಭಿಮಾನಿಗಳು ನನ್ನೊಂದಿಗೆ ಚೆನ್ನಾಗಿದ್ದಾರೆ. ಅಲ್ಲದೆ, ನಾನು ತಪ್ಪಿ ನಡೆಯುವಾಗ ಮಾಧ್ಯಮ ಮಿತ್ರರು ಹಲವು ಬಾರಿ ತಿದ್ದಿದ್ದಾರೆ. ಇವರೆಲ್ಲ ನನ್ನ ಜೀವನದಲ್ಲಿ ಚೆನ್ನಾಗಿದ್ದಾರೆ. ಆದ್ದರಿಂದ ಇವತ್ತು ನಾನು ಕೂಡ ಚೆನ್ನಾಗಿದ್ದೀನಿ ಎಂದು ನಟ ಕಿಚ್ಚ ಸುದೀಪ್ ಹೇಳಿದರು.












Click it and Unblock the Notifications