Kishore Kumar: ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಕಿಶೋರ್ ನೇಮಕ
ಬೆಂಗಳೂರು, ಜನವರಿ09: ದಕ್ಷಿಣ ಭಾರತ ಹಾಗೂ ಕನ್ನಡದ ಹೆಸರಾಂತ ಚಲನಚಿತ್ರ ನಟ ಕಿಶೋರ್ ಕುಮಾರ್ ಜಿ ಅವರು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ.
ಈ ಕುರಿತು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು 2024-2025ನೇ ಸಾಲಿನಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು 2025ರ ಮಾರ್ಚ್ 1 ರಿಂದ 8ರ ವರೆಗೆ ಬೆಂಗಳೂರಿನಲ್ಲಿ ಆಯೋಜಿಸಿದ್ದು, ಚಿತ್ರೋತ್ಸವದ ಕುರಿತು ಹೆಚ್ಚಿನ ಪ್ರಚಾರ ಸಲುವಾಗಿ ಹಿಂದಿ ಹಾಗೂ ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ನಟಿಸಿ ಜನ ಮನ್ನಣೆ ಪಡೆದಿರುವ ಕನ್ನಡದ ಖ್ಯಾತ ನಟಿ ಶ್ರೀ ಕಿಶೋರ್ ಕುಮಾರ್ ಜಿ ಇವರನ್ನು ಚಿತ್ರೋತ್ಸವದ 16ನೇ ಆವೃತ್ತಿಗೆ ರಾಯಭಾರಿಯಾಗಿ ನೇಮಿಸಿರುವುದಾಗಿ ಆದೇಶದಲ್ಲಿ ತಿಳಿಸಿದೆ.

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಬೆಳ್ಳಿಯಂ ನ FIAPF ಅಂತಾರಾಷ್ಟ್ರೀಯ ಮನ್ನಣೆ ಪಡೆದಿರುವ ಚಿತ್ರೋತ್ಸವವಾಗಿದ್ದು ಸುಮಾರು 8 ದಿನಗಳ ಕಾಲ ಬೆಂಗಳೂರಿನ 13 ಚಿತ್ರಮಂದಿರಗಳಲ್ಲಿ ದೇಶ-ವಿದೇಶಗಳ ಅತ್ಯುನ್ನತ ಚಿತ್ರಗಳ ಪ್ರದರ್ಶನ ಹಾಗೂ ಚಲನಚಿತ್ರಗಳಿಗೆ ಸಂಬಂಧಿಸಿದಂತೆ ಕಾರ್ಯಾಗಾರಗಳು, ವಿಚಾರ ಸಂಕಿರಣ ಇನ್ನಿತರ ಚಿತ್ರರಂಗಕ್ಕೆ ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿಯ ಅಧ್ಯಕ್ಷರೂ ಆಗಿರುವ ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಇತ್ತೀಚೆಗಷ್ಟೆ ಸಭೆ ನಡೆಸಿ, ಚಿತ್ರೋತ್ಸವದ ದಿನಾಂಕ ಘೋಷಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ "ಸರ್ವ ಜನಾಂಗದ ಶಾಂತಿಯ ತೋಟ" ಶೀರ್ಷಿಕೆಯಡಿ ಪ್ರಸಕ್ತ ಸಾಲಿನಲ್ಲಿ ನಡೆಯುತ್ತಿದ್ದು ಚಿತ್ರೋತ್ಸವಕ್ಕೆ ದೇಶ-ವಿದೇಶಗಳಿಂದ ಅತ್ಯುನ್ನತ ಚಿತ್ರಗಳನ್ನು ತರುವ ಕುರಿತು ಹಾಗೂ ದೇಶ-ವಿದೇಶಗಳ ಸಿನಿಮಾ ರಂಗದ ಗಣ್ಯಾಧಿ ಗಣ್ಯರನ್ನು ಚಿತ್ರೋತ್ಸವದಲ್ಲಿ ಭಾಗವಹಿಸಲು ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದರು.
ಅಭಿನಂದನೆ ಸಲ್ಲಿಸಿದ ಸಿದ್ದರಾಮಯ್ಯ
ಇನ್ನೂ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭಕೋರಿದ್ದು, 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿರುವ ಖ್ಯಾತ ನಟ ಕಿಶೋರ್ ಕುಮಾರ್. ಜಿ ಅವರಿಗೆ ಅಭಿನಂದನೆಗಳು. ಸರ್ವ ಜನಾಂಗದ ಶಾಂತಿಯ ತೋಟ" ಎಂಬ ಘೋಷವಾಕ್ಯದಡಿ ಈ ಬಾರಿಯ ಚಲನಚಿತ್ರೋತ್ಸವವನ್ನು ಆಯೋಜಿಸಲಾಗುತ್ತಿದ್ದು, ಈ ಸಾಲುಗಳಿಗೆ ಬದ್ಧವಾಗಿರುವ ಕಿಶೋರ್ ಅವರ ಮುಂದಾಳತ್ವದಲ್ಲಿ ಬೆಂಗಳೂರು ಚಲನಚಿತ್ರೋತ್ಸವ ಅತ್ಯಂತ ಯಶಸ್ವಿಯಾಗಲಿದೆ ಎಂಬ ಪೂರ್ಣ ವಿಶ್ವಾಸವಿದೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
-
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications