ನಟ ಮಡೆನೂರು ಮನು ಪೊಲೀಸ್ ಕಸ್ಡಡಿಗೆ
ಕಿರುತೆರೆ ನಟಿಯೊಬ್ಬರು ತಮ್ಮ ಮಾಡಿರುವ ಅತ್ಯಾಚಾರ ಆರೋಪ ಕೇಸ್ನಲ್ಲಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಮಡೆನೂರು ಮನು ಅವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಸಹನಟಿ ನೀಡಿದ ದೂರಿನ ಮೇರೆಗೆ ಮನು ಅವರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ನಿನ್ನೆ ಬಂಧಿಸಿದ್ದರು. ಇಂದು ಕೋರ್ಟ್ ಮುಂದೆ ಅವರನ್ನು ಹಾಜರುಪಡಿಸಲಾಯಿತು. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಮನು ಅವರನ್ನು ಐದು ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.
ಸಹನಟಿಯೊಬ್ಬರು ಮನು ಮೇಲೆ ಗಂಭೀರ ಆರೋಪಗಳನ್ನು ಮಾಡಿದ್ದರು. ಕೇಸ್ ದಾಖಲಿಸಿಕೊಂಡಿದ್ದ ಪೊಲೀಸರು ಮನು ಅವರನ್ನು ಬಂಧಿಸಿ, ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ನೀಡುವಂತೆ ಕೋರ್ಟ್ಗೆ ಕೇಳಿದ್ದರು. ಅದರಂತೆ ಮೇ 27ರವರೆಗೂ ಮನು ಅವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇಂದಿನಿಂದಲೇ ಪೊಲೀಸರು ಮನು ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಲಿದ್ದಾರೆ.

ಈ ಆರೋಪದಲ್ಲಿ ವಿಡಿಯೋ ಆಡಿಯೋ ಸಾಕ್ಷ್ಯಾಧಾರಗಳು ಎನಿಸುವುದಿಲ್ಲ. ಇದು ನ್ಯಾಯಾಲಯದಲ್ಲಿ ನಿಲ್ಲಲ್ಲ ಎಂದು ಮನು ಪರ ವಕೀಲರು ಹೇಳಿದ್ದಾರೆ. ಮನು ಅವರು ನಟಿಸಿರುವ ಕುಲದಲ್ಲಿ ಕೀಳ್ಯಾವುದೋ ಸಿನಿಮಾ ಇಂದು ಬಿಡುಗಡೆಯಾಗಿದೆ. ಇದಕ್ಕೆ ತೊಂದರೆ ಕೊಡಬೇಕು ಎಂಬ ಉದ್ದೇಶದಿಂದ ಈ ಆರೋಪಗಳನ್ನು ಮಾಡಲಾಗಿದೆ ಎಂದು ಮನು ಪರ ವಕೀಲರು ಹೇಳಿದ್ದಾರೆ.
ʼಅಪ್ಪಣ್ಣ ಬಗ್ಗೆ ವಿಡಿಯೋ ಮಾಡಿಸಿದ್ದೇ ಮನುʼ
ವೈರಲ್ ಆಡಿಯೋದಲ್ಲಿ ಮತ್ತೊಬ್ಬ ನಟ ಅಪ್ಪಣ್ಣ ಹೆಸರು ಕೂಡ ಕೇಳಿಬಂದಿತ್ತು. ಈ ಬಗ್ಗೆಯೂ ಸ್ಪಷ್ಟನೆ ನೀಡಿರುವ ಸಂತ್ರಸ್ತೆ, ನಟ ಅಪ್ಪಣ್ಣ ಅವರ ವಿಚಾರವಾಗಿ ಮನು ಒತ್ತಾಯ ಮಾಡಿ ಆಡಿಯೋ ರೆಕಾರ್ಡ್ ಮಾಡಿಸಿದ್ದ. ಕಳೆದ ಏಪ್ರಿಲ್ನಲ್ಲಿ ಬ್ಲಾಕ್ಮೇಲ್ ಮಾಡಿ ಅವನೇ ವಿಡಿಯೋ ಮಾಡಿಸಿದ್ದ ಎಂದು ಹೇಳಿದ್ದಾರೆ. ಅಲ್ಲದೆ ಅಪ್ಪಣ್ಣ ಜೊತೆ ಕಾರ್ಯಕ್ರಮಗಳಿಗೆ ಹೋಗಬಾರದು ಎಂದು ಮನು ಬೆದರಿಸಿದ್ದ. ಈ ವಿಡಿಯೋ ಮಾಡಿದ್ರೆ ನಾನು ನಿನ್ನ ಕೈಬಿಡೋದಿಲ್ಲ ಎಂದು ನಂಬಿಸಿದ್ದ. ಇದಕ್ಕೆ ನಾನು ಅಪ್ಪಣ್ಣ ಅವರ ಬಳಿ ಕ್ಷಮೆ ಕೂಡ ಕೇಳಿದ್ದೇನೆ ಎಂದಿದ್ದಾರೆ.

ಇದೇ ಕೇಸ್ನಲ್ಲಿ ಅಲೋಕ್ ಎಂಬುವವರ ಹೆಸರು ಕೂಡ ಕೇಳಿಬಂದಿದೆ. ಅವರು ಸಮಾಜ ಸೇವಕರು, ನನ್ನ ಹಾಗೂ ಆತನ ಮಧ್ಯೆ ಯಾವುದೇ ಲವ್ ಇರಲಿಲ್ಲ. ಆ ವ್ಯಕ್ತಿಯೇ ನನ್ನ ಮತ್ತು ಮನು ವಿಚಾರದಲ್ಲಿ ಸಂಧಾನ ಮಾಡುತ್ತಿದ್ದರು. ಮನು ನನಗೆ ಬ್ಲ್ಯಾಕ್ಮೇಲ್ ಮಾಡಿದ್ದಾನೆ. ನನಗೆ ಚೆನ್ನಾಗಿ ಕುಡಿಸಿ ಸಾಕಷ್ಟು ಆಡಿಯೋ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾನೆ ಎಂದು ಸಂತ್ರಸ್ತೆ ದೂರಿದ್ದಾರೆ.
ಆದರೂ ಇದನ್ನೆಲ್ಲ ಸಹಿಸಿಕೊಂಡು ಈಗ ದೂರು ಕೊಡಲು ಕಾರಣ ಏನಂದ್ರೆ, ಕಳೆದ ಮನು ನನಗೆ ಕುಡಿಸಿ, ಖಾಸಗಿ ವಿಡಿಯೋ ಮಾಡಿ ಬೆದರಿಕೆ ಹಾಕಿದ್ದ. ಈಗ ವೈರಲ್ ಆಗಿರುವ ಆಡಿಯೋ ಹಾಗೂ ವಿಡಿಯೋಗಳನ್ನು ಮನು ನನ್ನಿಂದ ಬಲವಂತವಾಗಿ ಮಾಡಿಸಿದ್ದ. ಶನಿವಾರ ಅವನು ನನ್ನೊಂದಿಗೆ ಕ್ರೂರವಾಗಿ ನಡೆದುಕೊಂಡ ಕಾರಣಕ್ಕೆ ದೂರು ಕೊಟ್ಟೆ. ಮನು ಸಿನಿಮಾ ವಿಚಾರಕ್ಕೂ ನಾನು ದೂರು ಕೊಟ್ಟಿದ್ದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಮನು ನನಗೆ ಮುಂದೆ ಏನು ಮಾಡುತ್ತಾನೋ ಎಂಬ ಭಯದಿಂದ ದೂರು ಕೊಟ್ಟೆ ಎಂದಿದ್ದಾರೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications