ಖ್ಯಾತ ಹಾಸ್ಯನಟ ಮದನ್ ಬಾಬ್ ನಿಧನ
Actor Madhan Bob passes away: ತಮಿಳು ಚಿತ್ರರಂಗದ ಖ್ಯಾತ ಹಾಸ್ಯನಟ ಮದನ್ ಬಾಬ್ (71) ಆಗಸ್ಟ್ 2ರ ಶನಿವಾರ ಸಂಜೆ ನಿಧನರಾಗಿದ್ದಾರೆ.
ಕ್ಯಾನ್ಸರ್ನಿಂದ ಬಳಲುತ್ತಿದ್ದ ನಟ ಶನಿವಾರ ಸಂಜೆ ಅಡ್ಯಾರ್ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಹಾಗಾದ್ರೆ ಇವರು ಚಿತ್ರರಂಗಕ್ಕೆ ಪಾದರ್ಪಣೆ ಮಾಡಿದ್ದು ಯಾವಾಗ ಹಾಗೂ ಯಾರೆಲ್ಲಾ ಪ್ರಮುಖ ನಟರ ಜೊತೆ ಸಿನಿಮಾ ಮಾಡಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

1984ರಲ್ಲಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ನಟ ಮಧನ್ ಬಾಬ್ ಅವರು ಸ್ಟಾರ್ ನಟರಾದ ಕಮಲ್ ಹಾಸನ್, ರಜನಿಕಾಂತ್, ಅಜಿತ್ ಕುಮಾರ್, ಸೂರ್ಯ ಮತ್ತು ವಿಜಯ್ ಅವರೊಂದಿಗೆ ಸಿನಿಮಾಗಳನ್ನು ಮಾಡಿದ್ದಾರೆ. ಹಾಸ್ಯ, ಖಳನಾಯಕ ಸೇರಿದಂತೆ ಪ್ರಮುಖ ಪಾತ್ರಗಳಲ್ಲಿ ನಟಿಸಿ ಜನರನ್ನ ರಂಜಿಸುವ ಮೂಲಕ ಪ್ರಸಿದ್ಧಿ ಪಡೆದವರಾಗಿದ್ದರು.
ಸಿನಿರಂಗದಲ್ಲಿ ಸುದೀರ್ಘ ವೃತ್ತಿ ಜೀವನದಲ್ಲಿ, ಅವರು 150ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಬಣ್ಣಹಚ್ಚಿದ್ದಾರೆ. ತಮಿಳು ಅಷ್ಟೇ ಅಲ್ಲದೆ, ಮಲಯಾಳಂ, ಹಿಂದಿ, ತೆಲುಗು ಸಿನಿಮಾಗಳಲ್ಲಿ ನಟನೆ ಮಾಡಿದ್ದಾರೆ. ತಮಿಳಿನ ತೆನಾಲಿ ಚಿತ್ರದಲ್ಲಿ ಡೈಮಂಡ್ ಬಾಬು, ಫ್ರೆಂಡ್ಸ್ ಚಿತ್ರದಲ್ಲಿ ಮ್ಯಾನೇಜರ್ ಸುಂದರೇಶನ್ ಪಾತ್ರಗಳಂತೂ ಈಗಲೂ ಅಚ್ಚಳಿಯದೇ ಪ್ರೇಕ್ಷಕರ ಮನಸಿನಲ್ಲಿ ಉಳಿದುಬಿಟ್ಟಿವೆ. ಅಷ್ಟರ ಮಟ್ಟಿಗೆ ಈ ಚಿತ್ರಗಳಲ್ಲಿ ನಟನೆ ಮಾಡಿ ರಂಜಿಸಿದ್ದಾರೆ. ಅವರು ಕಳೆದ ಕೆಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿರಲಿಲ್ಲ.
ಮದನ್ ಬಾಬ್ ಕೇವಲ ನಟರಾಗಿರಲಿಲ್ಲ. ಇದರ ಹೊರತಾಗಿಯೂ ಅವರು ಸಂಗೀತ ಸಂಯೋಜಕರೂ ಆಗಿ ಗುರುತಿಸಿಕೊಂಡಿದ್ದಾರೆ. ಅವರ ನಿಜವಾದ ಹೆಸರು ಮದನ್ ಆಗಿದ್ದು, ಅವರು ತಮ್ಮ ಸಹೋದರನ ಹೆಸರಾದ ಬಾಬುವನ್ನು ಸೇರಿಸಿ ಮದನ್ ಬಾಬ್ ಎಂಬ ಹೆಸರನ್ನು ಪಡೆದರು.
ಕೆ.ಬಾಲಚಂದರ್ ಅವರ ಚಿತ್ರದ ಮೂಲಕ ಚಿಂತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಅವರು 150ಕ್ಕೂ ಅಧಿಕ ಸಿನಿಮಾಗಳಲ್ಲಿ ನಟನೆ ಮಾಡಿದ್ದಾರೆ ಹಾಗೂ ಉತ್ತಮ ಕಥೆಗಾರರೂ ಕೂಡ ಆಗಿದ್ದಾರೆ. ತಮ್ಮ ಮಾತು ಮತ್ತು ನಡೆಗಳಿಂದ ಪ್ರೇಕ್ಷಕರನ್ನು ರಂಜಿಸಿದವರಾಗಿದ್ದಾರೆ.
-
Thalapathy Vijay: 400 ಕೋಟಿ ಆಸ್ತಿಗೆ ಒಡತಿ, ಲಂಡನ್ ಬೆಡಗಿ: ಯಾವ ಸಿನಿಮಾಗೂ ಕಡಿಮೆ ಇಲ್ಲ ದಳಪತಿ ವಿಜಯ್-ಸಂಗೀತಾ ಲವ್ ಸ್ಟೋರಿ -
Gold Price: ಇಂದು ಚಿನ್ನದ ಬೆಲೆಯಲ್ಲಿ ದಾಖಲೆಯ ಕುಸಿತ, ಯುದ್ಧದ ಎಫೆಕ್ಟ್ನಿಂದ ಬಂಗಾರ-ಬೆಳ್ಳಿ ಮತ್ತಷ್ಟು ದುಬಾರಿ! ಮುನ್ಸೂಚನೆ -
ವೆಸ್ಟ್ ಇಂಡೀಸ್ ವಿರುದ್ಧ ಭಾರತ ಗೆಲುವು: ಎರಡು ಬೌಂಡರಿಗಳ ಬಗ್ಗೆ ಯಾರೂ ಮಾತನಾಡಲಿಲ್ಲ ಎಂದು ಬೂಮ್ರಾ ಬೇಸರ -
ಇರಾನ್ ಸುಪ್ರೀಂ ಯತೊಲ್ಲಾ ಅಲಿ ಖಮೇನಿ ಅಂತ್ಯ: ವಿಶ್ವದ ಮೇಲೆ 5 ಪರಿಣಾಮ ಸಾಧ್ಯತೆ: ಆಶಿಶ್ ಸಾರಡ್ಕ ಬರಹ -
ಬೆಂಗಳೂರಿನ ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ಹೇಗಿದ್ರು ನೋಡಿ ರಶ್ಮಿಕಾ ಮಂದಣ್ಣ, ವಿಡಿಯೋ ವೈರಲ್ -
PV Sindhu: ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಪತಿ ಸ್ವಿಮ್ಮಿಂಗ್ ಪೂಲ್ನಲ್ಲಿ ಈಜು ಸಾಹಸ: ಫಿಟ್ನೆಸ್ ತಜ್ಞರು ಹೇಳಿದ್ದೇನು? -
Viral : ರ್ಯಾಪಿಡೋ ಬುಕ್ ಮಾಡಿದವನಿಗೆ ಕಾದಿತ್ತು ಬಿಗ್ ಶಾಕ್: ತನ್ನ ಶಾಲೆಯ 'ಕ್ಲಾಸ್ ಟಾಪರ್' ಈಗ ರ್ಯಾಪಿಡೋ ರೈಡರ್ -
High Speed Rail: ಬೆಂಗಳೂರು-ಹೈದರಾಬಾದ್ ತಲುಪಲು 2 ಗಂಟೆ ಸಾಕು, 3 ಕಡೆ ಎಂಟ್ರಿ, ಮಹತ್ವದ ಅಪ್ಡೇಟ್ -
Sanju Samson: ವೆಸ್ಟ್ ಇಂಡೀಸ್ ವಿರುದ್ಧ ಅಬ್ಬರ: ತೆಗಳಿದ ಬಾಯಲ್ಲೇ ಸಂಜು ಸ್ಯಾಮ್ಸನ್ಗೆ ಗೌತಮ್ ಗಂಭೀರ್ ಶಹಭಾಸ್ಗಿರಿ -
Gold Rate: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ? -
ಒಂದೇ ವರ್ಷದಲ್ಲಿ 800 ಕೋಟಿ ರೂ ಮೌಲ್ಯದ ಕಂಪನಿ ಕಟ್ಟಿದ 23ರ ಹರೆಯದ ಅಂಜಲಿ ಸರ್ದಾನಾ -
Lunar Eclipse 2026:ನಾಳೆ ಕೇತುಗ್ರಸ್ತ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ದರ್ಶನದ ಸಮಯ ಬದಲು, ಗ್ರಹಣ ಶಾಂತಿ ಹೋಮ












Click it and Unblock the Notifications