ರಾಕೇಶ್ ಪೂಜಾರಿ ಸಾಯುವುದಕ್ಕೂ ಮೊದಲು ಏನೆಲ್ಲ ಆಯ್ತು? ಇದ್ದ ಆರೋಗ್ಯ ಸಮಸ್ಯೆ ಏನು?
ರಾಕೇಶ್ ಪೂಜಾರಿ ಅವರು ಮೇ 11ರ ಬೆಳಿಗ್ಗೆ 'ಕಾಂತಾರ: ಚಾಪ್ಟರ್ 1' ಶೂಟ್ನಲ್ಲಿ ಇದ್ದರು. ಆ ಬಳಿಕ ಸಂಜೆ ಆಪ್ತರೊಬ್ಬರ ಮೆಹಂದಿ ಶಾಸ್ತ್ರಕ್ಕೆ ಹೋಗಿದ್ದಾರೆ. ಮಧ್ಯ ರಾತ್ರಿ ವೇಳೆಗೆ ಹೃದಯಾಘಾತ ಸಂಭವಿಸಿದೆ. ರಾಕೇಶ್ ಪೂಜಾರಿ ಅವರ ಸಾವಿನ ವಿಚಾರ ಅನೇಕರಿಗೆ ಶಾಕಿಂಗ್ ಎನಿಸಿದೆ. ಸಾವು ಸಂಭವಿಸುವುದಕ್ಕೂ ಮೊದಲು ಏನಾಗಿತ್ತು ಎಂದು ಅವರ ಆಪ್ತ ಹಾಗೂ ನಟ ಗೋವಿಂದೇ ಗೌಡ (ಜಿಜಿ) ವಿವರಿಸಿದ್ದಾರೆ.
'ಕಾಮಿಡಿ ಕಿಲಾಡಿಗಳು ಸೀಸನ್ 3' ವಿನ್ನರ್ ರಾಕೇಶ್ ಪೂಜಾರಿ ಅವರು ನಿನ್ನೆ (ಮೇ 11) ಬೆಳಿಗ್ಗೆ 'ಕಾಂತಾರ ಚಾಪ್ಟರ್ 1' ಶೂಟ್ನಲ್ಲಿ ಇದ್ದರು. ಆ ಬಳಿಕ ಸಂಜೆ ಆಪ್ತರೊಬ್ಬರ ಮೆಹಂದಿ ಶಾಸ್ತ್ರಕ್ಕೆ ಹೋಗಿದ್ದಾರೆ. ಮಧ್ಯ ರಾತ್ರಿ ವೇಳೆಗೆ ಹೃದಯಾಘಾತ ಸಂಭವಿಸಿದೆ. ರಾಕೇಶ್ಗೆ ಇತ್ತೀಚೆಗೆ ಅಪಘಾತ ಸಂಭವಿಸಿತ್ತು. ಆದರೆ, ಯಾವುದೇ ಹೆಚ್ಚಿನ ತೊಂದರೆ ಆಗಿರಲಿಲ್ಲ. ಅವರಿಗೆ ಯಾವುದೇ ಆರೋಗ್ಯ ಸಮಸ್ಯೆಯೂ ಇರಲಿಲ್ಲ ಎಂಬುದಾಗಿ ಗೋವಿಂದೇ ಗೌಡ ಅವರು ಹೇಳಿದ್ದಾರೆ.

ಈ ಕುರಿತು ಖಾಸಗಿ ವಾಹಿನಿಯಲ್ಲಿ ಗೋವಿಂದೆ ಗೌಡ ಅವರು ಮಾತನಾಡಿ, ರಾಕೇಶ್ ಪೂಜಾರಿ ಒಳ್ಳೆಯ ಕಲಾವಿದ ಎನ್ನುವುದಕ್ಕಿಂತ ಒಳ್ಳೆಯ ಮನುಷ್ಯನಾಗಿದ್ದ. ನನಗೂ ಆತ ತುಂಬಾನೇ ಆಪ್ತ. ಎಲ್ಲರ ಪ್ರೀತಿ ಪಾತ್ರ ವ್ಯಕ್ತಿ ಆಗಿದ್ದ. ಪ್ಲೇಟ್ಲೆಟ್ಸ್ ಕಡಿಮೆ ಇತ್ತು. ಆ ಬಳಿ ಹಾರ್ಟ್ ಅಟ್ಯಾಕ್ ಆಗಿದೆ. ವಿಷಯ ಕೇಳಿ ತುಂಬಾನೇ ನೋವಾಗುತ್ತಿದೆ. ಇದನ್ನು ನಂಬೋಕೆ ಆಗುತ್ತಿಲ್ಲ. ಈ ವಿಚಾರವನ್ನು ಅರಗಿಸಿಕೊಳ್ಳೋಕೆ ಸಾಧ್ಯವೇ ಆಗುತ್ತಿಲ್ಲ ಎಂದು ಭಾವುಕರಾಗಿ ಮಾತನಾಡಿದ್ದಾರೆ.
ಬೆಳಿಗ್ಗೆ ಕಾಂತಾರ ಸಿನಿಮಾ ಶೂಟ್ನಲ್ಲಿ ಇದ್ದ. ಶೂಟ್ ಮುಗಿಸಿ ಸಂಜೆ ಗೆಳೆಯರ ಮದುವೆ ಫಂಕ್ಷನ್ಗೆ ಹೋಗಿದ್ದಾನೆ. ಸುಸ್ತು ಎನ್ನುತ್ತಿದ್ದ. ಮಧ್ಯರಾತ್ರಿ ಹಾರ್ಟ್ ಅಟ್ಯಾಕ್ ಆಯ್ತು. ಎಲ್ಲರೂ ನನಗೆ ಕಾಲ್ ಮಾಡಿದ್ದರು. ಆದರೆ ಮೊಬೈಲ್ ಸೈಲೆಂಟ್ನಲ್ಲಿ ಇದ್ದಿದ್ದರಿಂದ ವಿಷಯ ಗೊತ್ತಾಗಿರಲಿಲ್ಲ. ಬೆಳಿಗ್ಗೆ ಎದ್ದು ನೋಡಿದಾಗ ವಿಷಯ ತಿಳಿಯಿತು. ನನಗೆ ನಂಬುದಕ್ಕೆ ಆಗಲಿಲ್ಲ. ಇತ್ತೀಚೆಗೆ ರಾಕೇಶ್ಗೆ ಬೈಕ್ ಸ್ಕಿಡ್ ಆಗಿ ಅಪಘಾತ ಆಗಿತ್ತು. ಆದರೆ, ಬೇಗ ರಿಕವರಿ ಆದ. ಅದನ್ನು ಹೊರತುಪಡಿಸಿ ಅವನಿಗೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ. ಆತ ತುಂಬಾನೇ ಆ್ಯಕ್ಟೀವ್ ಆಗಿದ್ದ. ಎಲ್ಲರಿಗೂ ಬೇಕಾಗಿದ್ದ ವ್ಯಕ್ತಿ. ತುಂಬಾನೇ ನೋವಾಗುತ್ತಿದೆ. ಮಾನವೀಯ ವ್ಯಕ್ತಿ. ಅದು ನನಗೆ ಅನುಭವಕ್ಕೆ ಬಂದಿತ್ತು. ನನ್ನ ಪಾಪು ಯಾರ ಜೊತೆಯೂ ಹೋಗುತ್ತಿರಲಿಲ್ಲ. ಆದರೆ, ಅವನ ಜೊತೆ ತುಂಬಾನೇ ಹೊತ್ತು ಆಟ ಆಡಿದ್ದ ಎಂದು ಗೋವಿಂದೇ ಗೌಡ (ಜಿಜಿ) ತಿಳಿಸಿದ್ದಾರೆ.
ಗೆಳೆಯನ ಮೆಹೆಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಖುಷಿಯಾಗೇ ಸಮಯ ಕಳೆದಿದ್ದರು. ಅಲ್ಲದೇ ಅಲ್ಲಿ ಡ್ಯಾನ್ಸ್ ಕೂಡಾ ಮಾಡಿ ಸಂಭ್ರಮಿಸಿದ್ದರು. ಮೆಹೆಂದಿ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದು, ಹೃದಯಾಘಾತದಿಂದ ಮೃತಪಟ್ಟಿದ್ದಾರೆಂದು ಮೂಲಗಳು ತಿಳಿಸಿವೆ.
-
ವೆಸ್ಟ್ ಇಂಡೀಸ್ ವಿರುದ್ಧ ಭಾರತ ಗೆಲುವು: ಎರಡು ಬೌಂಡರಿಗಳ ಬಗ್ಗೆ ಯಾರೂ ಮಾತನಾಡಲಿಲ್ಲ ಎಂದು ಬೂಮ್ರಾ ಬೇಸರ -
ಇರಾನ್ ಸುಪ್ರೀಂ ಯತೊಲ್ಲಾ ಅಲಿ ಖಮೇನಿ ಅಂತ್ಯ: ವಿಶ್ವದ ಮೇಲೆ 5 ಪರಿಣಾಮ ಸಾಧ್ಯತೆ: ಆಶಿಶ್ ಸಾರಡ್ಕ ಬರಹ -
ಬೆಂಗಳೂರಿನ ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ಹೇಗಿದ್ರು ನೋಡಿ ರಶ್ಮಿಕಾ ಮಂದಣ್ಣ, ವಿಡಿಯೋ ವೈರಲ್ -
PV Sindhu: ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಪತಿ ಸ್ವಿಮ್ಮಿಂಗ್ ಪೂಲ್ನಲ್ಲಿ ಈಜು ಸಾಹಸ: ಫಿಟ್ನೆಸ್ ತಜ್ಞರು ಹೇಳಿದ್ದೇನು? -
Viral : ರ್ಯಾಪಿಡೋ ಬುಕ್ ಮಾಡಿದವನಿಗೆ ಕಾದಿತ್ತು ಬಿಗ್ ಶಾಕ್: ತನ್ನ ಶಾಲೆಯ 'ಕ್ಲಾಸ್ ಟಾಪರ್' ಈಗ ರ್ಯಾಪಿಡೋ ರೈಡರ್ -
High Speed Rail: ಬೆಂಗಳೂರು-ಹೈದರಾಬಾದ್ ತಲುಪಲು 2 ಗಂಟೆ ಸಾಕು, 3 ಕಡೆ ಎಂಟ್ರಿ, ಮಹತ್ವದ ಅಪ್ಡೇಟ್ -
Sanju Samson: ವೆಸ್ಟ್ ಇಂಡೀಸ್ ವಿರುದ್ಧ ಅಬ್ಬರ: ತೆಗಳಿದ ಬಾಯಲ್ಲೇ ಸಂಜು ಸ್ಯಾಮ್ಸನ್ಗೆ ಗೌತಮ್ ಗಂಭೀರ್ ಶಹಭಾಸ್ಗಿರಿ -
Gold Rate: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ? -
ಒಂದೇ ವರ್ಷದಲ್ಲಿ 800 ಕೋಟಿ ರೂ ಮೌಲ್ಯದ ಕಂಪನಿ ಕಟ್ಟಿದ 23ರ ಹರೆಯದ ಅಂಜಲಿ ಸರ್ದಾನಾ -
Lunar Eclipse 2026:ನಾಳೆ ಕೇತುಗ್ರಸ್ತ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ದರ್ಶನದ ಸಮಯ ಬದಲು, ಗ್ರಹಣ ಶಾಂತಿ ಹೋಮ -
Vrial News: ಕೆಲಸದಿಂದ ತೆಗೆದ ಬಳಿಕ ಪುಕ್ಕಟೆ ಸಹಾಯ ಕೇಳಿದ ಮಾಜಿ ಬಾಸ್: ನೌಕರ ಕೊಟ್ಟ ಉತ್ತರ ವೈರಲ್ -
ಹೊಸ ಮನೆಯಲ್ಲಿ ರಶ್ಮಿಕಾ-ವಿಜಯ್ ಸತ್ಯನಾರಾಯಣ ಪೂಜೆ: ಹುಟ್ಟೂರಿಗೆ ಬಂದ ನವದಂಪತಿಗೆ ಗ್ರಾಮಸ್ಥರಿಂದ ಅದ್ಧೂರಿ ಸ್ವಾಗತ












Click it and Unblock the Notifications