ಸುದೀಪ್ ಹೆಸರಲ್ಲಿ ದೋಖಾ: ಸ್ಟಾರ್ ನಿರ್ದೇಶಕ ನಂದ ಕಿಶೋರ್ ಬಗ್ಗೆ ಏನಿದು ಆರೋಪ?
ಸ್ಯಾಂಡಲ್ವುಡ್ನ ಸ್ಟಾರ್ ನಿರ್ದೇಶಕ ಹಾಗೂ ಹಿರಿಯ ನಟ ಸುಧೀರ್ ಅವರ ಪುತ್ರ ನಂದ ಕಿಶೋರ್ ಅವರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ರನ್ನ, ಮುಕುಂದ ಮುರಾರಿ, ವಿಕ್ಟರಿ, ಅಧ್ಯಕ್ಷ ಸೇರಿದಂತೆ ಹಲವು ಹಿಟ್ ಸಿನಿಮಾಗಳನ್ನು ನಿರ್ದೇಶಿಸಿರುವ ನಂದ ಕಿಶೋರ್ ಅವರ ಮೇಲೆ ಹಣ ವಂಚನೆ ಆರೋಪ ಮಾಡಲಾಗಿದೆ. ನಟ ಕಿಚ್ಚ ಸುದೀಪ್ ಅವರ ಹೆಸರು ಹೇಳಿಕೊಂಡು ನಂದ ಕಿಶೋರ್ ವಂಚನೆ ಮಾಡಿದ್ದಾರೆ ಎಂದು ನಟರೊಬ್ಬರು ಶಾಕಿಂಗ್ ಆರೋಪಗಳನ್ನು ಮಾಡಿದ್ದಾರೆ. ಸದ್ಯ ಇದು ಸ್ಯಾಂಡಲ್ವುಡ್ನಲ್ಲಿ ಸಂಚಲನ ಸೃಷ್ಟಿಸಿದೆ. ಇದರ ಸಂಪೂರ್ಣ ವಿವರ ಇಲ್ಲಿದೆ.
ಯುವನಟ ಶಬರೀಶ್ ಶೆಟ್ಟಿ ಎಂಬುವವರು ನಂದ ಕಿಶೋರ್ ವಿರುದ್ಧ ಈ ಆರೋಪಗಳನ್ನ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಿರುವ ಶಬರೀಶ್, ನಂದ ಕಿಶೋರ್ ಅವರು ನನಗೆ ಕೆಲ ವರ್ಷಗಳ ಹಿಂದೆ ಜಿಮ್ನಲ್ಲಿ ಪರಿಚಯವಾಗಿದ್ದರು. ಆಗ ನಾನು ನನ್ನ ಚಿನ್ನ ಅಡವಿಟ್ಟು ನಂದ ಕಿಶೋರ್ ಅವರಿಗೆ 22 ಲಕ್ಷ ರೂಪಾಯಿ ಹಣ ನೀಡಿದ್ದೆ. ಬರೋಬ್ಬರಿ 9 ವರ್ಷಗಳಿಂದಲೂ ನಂದ ಕಿಶೋರ್ ಹಣ ವಾಪಸ್ ನೀಡಲಿಲ್ಲ. ಹಣ ವಾಪಸ್ ಕೇಳಿದಾಗ ಸುದೀಪ್ ಅವರ ಹೆಸರು ಹೇಳುತ್ತಿದ್ದರು ಎಂದು ನಟ ಶಬರೀಶ್ ಶೆಟ್ಟಿ ಅಳಲು ತೋಡಿಕೊಂಡಿದ್ದಾರೆ.

ಹಣ ವಾಪಸ್ ಕೇಳಿದರೆ ನನಗೆ ಧಮ್ಕಿ ಹಾಕುತ್ತಾರೆ. ನನಗೂ ಆರ್ಥಿಕ ಸಮಸ್ಯೆ ಇದೆ. ನನ್ನ ಹಣ ವಾಪಸ್ ಕೊಡಿ ಎಂದರೆ ನಟ ಕಿಚ್ಚ ಸುದೀಪ್ ಅವರ ಹೆಸರು ಹೇಳಿ ಯಾಮಾರಿಸುತ್ತಾರೆ. ಅಲ್ಲದೆ ಸಿನಿಮಾಗಳಲ್ಲಿ ಅವಕಾಶ ಕೊಡುವುದಾಗಿ ಹೇಳಿ ನನಗೆ ವಂಚನೆ ಮಾಡಿದ್ದಾರೆ. ನನಗೆ ಅವಕಾಶವೂ ಕೊಡಲಿಲ್ಲ, ನನ್ನ ಹಣವನ್ನೂ ಹಿಂತಿರುಗಿಸಲಿಲ್ಲ ಎಂದು ಶಬರೀಶ್ ಆರೋಪ ಮಾಡಿದ್ದಾರೆ.
ಫಿಲ್ಮ್ ಚೇಂಬರ್ಗೆ ದೂರು ಕೊಡ್ತೀನಿ
ಸದ್ಯ ನನ್ನ ರಾಮಧೂತ ಸಿನಿಮಾ ಶೂಟಿಂಗ್ ಮುಗಿದಿದ್ದು, ಸಿನಿಮಾ ರಿಲೀಸ್ ಮಾಡಲು ನನ್ನ ಹತ್ತಿರ ಹಣ ಕೂಡ ಇಲ್ಲ. ಹೀಗಾಗಿ ನನ್ನ ಹಣ ವಾಪಸ್ ಕೊಡಿ ಎಂದು ಕೇಳಿದ್ದಕ್ಕೆ, ನೀನು ಏನು ಮಾಡಿಕೊಳ್ತಿಯೋ ಮಾಡ್ಕೋ ಎಂದು ಹೇಳುತ್ತಾರೆ. ನಾನಿನ್ನೂ ಸಣ್ಣಪುಟ್ಟ ಕಲಾವಿದ, ಇಂತವರೊಂದಿಗೆ ಹೇಗೆ ಬದುಕಬೇಕು ಎಂಬುದೇ ತಿಳಿಯುತ್ತಿಲ್ಲ. ಇದೇ ವಿಚಾರವನ್ನ ನಾನು ಈ ಹಿಂದೆ ಸುದೀಪ್ ಅವರ ಗಮನಕ್ಕೆ ತರಲು ಮುಂದಾದಾಗಲೂ ನನ್ನನ್ನ ನಂದಕಿಶೋರ್ ತಡೆದಿದ್ದರು. ಹಣಕ್ಕಾಗಿ ಕಾದು ವರ್ಷಗಳೇ ಉರುಳಿವೆ. ಹೀಗಾಗಿ ನನ್ನ ಹಣ ಅವರು ವಾಪಸ್ ಕೊಡಿದೇ ಇದ್ದರೆ ಕಾನೂನು ಮೂಲಕ ಹೋರಾಡುತ್ತೇನೆ. ನಂದ ಕಿಶೋರ್ ಅವರ ವಿರುದ್ಧ ಶಿವಣ್ಣ ಹಾಗು ಸುದೀಪ್ ಸರ್ಗೆ ದೂರು ಕೊಡ್ತೀನಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೂ (ಫಿಲ್ಮ್ ಚೇಂಬರ್) ದೂರು ಕೊಡುತ್ತೇನೆ ಎಂದು ಶಬರೀಶ್ ಹೇಳಿದ್ದಾರೆ.
ಸಿಸಿಎಲ್ನಲ್ಲಿ ಆಟವಾಡುವುದು ನನ್ನ ಕನಸಾಗಿತ್ತು. ಈಗಾಗಲೇ ಕೆಸಿಸಿ ಟೂರ್ನಿಯಲ್ಲಿ ನಾನು ಎರಡು ಸೀಸನ್ನಲ್ಲಿ ಆಟವಾಡಿದ್ದೇನೆ. ಈಗ ಹಣ ಕೇಳಿದರೆ ನನನ್ನ ಕೆಸಿಸಿಯಿಂದಲೂ ಹೊರಗೆ ಹಾಕುವುದಾಗಿ ಬೆದರಿಕೆ ಹಾಕುತ್ತಾರೆ. ನನಗೆ ಮೊದಲಿನಿಂದಲೂ ಕಿಚ್ಚ ಸುದೀಪ್ ಅವರ ಜೊತೆ ಕ್ರಿಕೆಟ್ ಆಡಬೇಕು ಎನ್ನುವ ಆಸೆ ಇದ್ದ ಕಾರಣಕ್ಕೆ ನಂದ ಕಿಶೋರ್ ಮಾತಿಗೆ ಸುಮ್ಮನಾಗುತ್ತಿದ್ದೆ. ಈಗ ಅವರು ಮಾಡಿರುವ ವಂಚನೆಗೆ ನ್ಯಾಯ ಕೇಳುತ್ತಿದ್ದೇನೆ. ಹಣ ಕೊಡದಿದ್ದರೆ ಅವರ ಮೇಲೆ ದೂರು ಕೊಡಲು ನಿರ್ಧರಿಸಿದ್ದೇನೆ ಎಂದಿದ್ದಾರೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications