ಯಾರ ಮನೆಯನ್ನೂ ಒಡೆಯಬಾರದು, ಭಾವನೆಗಳ ಜೊತೆ ಆಟ ಆಡಬಾರದು: ನಟ ಶಿವರಾಜ್ಕುಮಾರ್
Actor Shiva Rajkumar: ರಾಜ್ಯದಲ್ಲಿ ಗುರುವಾರ (ಡಿಸೆಂಬರ್ 25) ಸ್ಯಾಂಡಲ್ವುಡ್ನ ದೊಡ್ಡ ಸ್ಟಾರ್ಗಳ ಎರಡು ಸಿನಿಮಾಗಳು ಬಿಡುಗಡೆಯಾಗಿವೆ. ನಟ ಶಿವರಾಜ್ಕುಮಾರ್, ಉಪೇಂದ್ರ ರಾಜ್ ಬಿ ಶೆಟ್ಟಿ ನಟನೆಯ 45 ಹಾಗೂ ಕಿಚ್ಚ ಸುದೀಪ್ ಅವರ ಮಾರ್ಕ್ ಚಿತ್ರಗಳು ತೆರೆ ಕಂಡಿವೆ. ಇನ್ನೂ ಶಿವಣ್ಣ ತಮ್ಮ ಸಿನಿಮಾ ವೀಕ್ಷಣೆ ಮಾಡಿ ಹೊರಗಡೆ ಬಂದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಕಿಚ್ಚ ಹಾಗೂ ದಚ್ಚು ಫ್ಯಾನ್ಸ್ ನಡುವೆ ನಡೆದ ವಾಕ್ ಸಮರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಹಾಗೂ ಸುದೀಪ್ ಅಭಿಮಾನಿಗಳ ವಾರ್ ನಡೆದಿದೆ. ಇನ್ನೂ ಶಿವರಾಜ್ಕುಮಾರ್ ಅಭಿನಯದ 45 ಸಿನಿಮಾ ಸಹ ಬಿಡುಗಡೆಯಾಗಿದ್ದು, ಫಸ್ಟ್ ಡೇ ಫಸ್ಟ್ ಶೋ ಸಿನಿಮಾ ವೀಕ್ಷಣೆ ಮಾಡಿದ ಬಳಿಕ ಶಿವಣ್ಣ ಫ್ಯಾನ್ಸ್ ವಾರ್ ಕುರಿತು ಮಾತನಾಡಿದ್ದಾರೆ.

ಶಿವಣ್ಣ ಕಿವಿಮಾತು: "ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಯಾರ ಮನೆಯನ್ನೂ ಒಡೆಯೋಕೆ ಹೋಗಬಾರದು. ಯಾರ ಭಾವನೆಗಳ ಜೊತೆಗೂ ಆಟ ಆಡಬಾರದು. ಸಮಸ್ಯೆ ಪರಿಹರಿಸಲು ಪ್ರಯತ್ನಿಸಬೇಕು. ಇದ್ದಷ್ಟು ದಿನ ಎಲ್ಲಾರೂ ಚೆನ್ನಾಗಿರೋಣ. ಬದುಕೋಣ, ಬದುಕೋಕೆ ಬಿಡೋಣ ಎಂಬ ಭಾವನೆ ಎಲ್ಲರಿಗೂ ಇರಬೇಕು. ನಾವೆಲ್ಲರೂ ಅನ್ಯೋನ್ಯವಾಗಿ ಹೊಂದಿಕೊಂಡು ಇರಬೇಕು," ಎಂದು ನಟ ಶಿವರಾಜ್ಕುಮಾರ್ ಹೇಳಿದರು.
45 ಸಿನಿಮಾ ಬಗ್ಗೆ ಶಿವಣ್ಣ ಹೇಳಿದ್ದೇನು?: ಅರ್ಜುನ್ ಜನ್ಯ ನಿರ್ದೇಶನದ 45 ಸಿನಿಮಾ ಬಿಡುಗಡೆಯಾಗಿದೆ. ಈ ಸಿನಿಮಾದಲ್ಲಿ ಶಿವರಾಜ್ ಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ನಟನೆ ಮಾಡಿದ್ದಾರೆ. ಸಿನಿಮಾದ ಬಗ್ಗೆ ಶಿವರಾಜ್ ಕುಮಾರ್ ಮಾತನಾಡಿದ್ದಾರೆ. ಅರ್ಜುನ್ ಜನ್ಯ ಫಸ್ಟ್ ಟೈಂ ನಿರ್ದೇಶನ ಅಂದಾಗ ಒಂದು ಕಾತರವಿತ್ತು. ಅವರು ಜನರಿಗೆ ಇಷ್ಟವಾಗುವ ವಿಷಯವನ್ನು ಕೊಟ್ಟಿದ್ದಾರೆ. ಕಮರ್ಷಿಯಲ್ ಜೊತೆಗೆ ಫಿಲಾಸಫಿ ಕೂಡ ಹೇಳಿದ್ದಾರೆ ಎಂದು ಹೇಳಿದ್ದಾರೆ.
ಮಾರ್ಕ್ಗೆ ಶುಭಹಾರೈಸಿದ ಶಿವಣ್ಣ: ರಾಯಪ್ಪ, ಶಿವಪ್ಪ ಎರಡು ಅಪ್ಪನೇ ವರ್ಕ್ ಆಗಿದೆ. ಅಭಿಮಾನಿ ದೇವರುಗಳ ಪ್ರೀತಿ ವಿಶ್ವಾಸದಿಂದ ನಾವು ಇಲ್ಲಿದ್ದೀವಿ. ಕಳೆದ ವರ್ಷ ನಿನ್ನೆಗೆ (ಡಿಸೆಂಬರ್ 24) ಒಂದು ವರ್ಷದ ಹಿಂದೆ ಅಮೆರಿಕಾದಲ್ಲಿ ಆಪರೇಷನ್ ಆಗಿತ್ತು. ಅಭಿಮಾನಿಗಳನ್ನ ಅಪ್ಪಾಜಿ ದೇವರು ಅಂತಾ ಕರೆದರು ಎಂದು ಹೇಳಿದ್ದಾರೆ. ಇನ್ನೂ ಮಾರ್ಕ್ ಸಿನಿಮಾ ಬಗ್ಗೆ ಮಾತನಾಡಿದ ಅವರು, ಮಾರ್ಕ್ ಸಿನಿಮಾ ಕೂಡ ಇವತ್ತು ಬಿಡುಗಡೆಯಾಗಿದೆ. ಆ ಸಿನಿಮಾಗೂ ಒಳ್ಳೆಯದಾಗಲಿ ಎಂದು ಹಾರೈಸಿದರು.
ಇನ್ನೂ ಥಿಯೇಟರ್ನಲ್ಲಿ ಇಂದು ಮೂವರು ನಟರ ಅಭಿಮಾನಿಗಳು ಅಭಿಮಾನಿಗಳು ಸಿನಿಮಾ ನೋಡಿ ಸಂಭ್ರಮಿಸಿದ್ದಾರೆ. ಟ್ರೈಲರ್ ಮೂಲಕ ಕುತೂಹಲ ಸೃಷ್ಟಿಸಿದ್ದ 45 ಸಿನಿಮಾ ಇದೀಗ ಪ್ರೇಕ್ಷಕರಿಗೆ ಮನರಂಜನೆಯ ರಸದೌತಣವನ್ನೇ ಬಡಿಸಿದೆ. ಹೊಸ ರೀತಿಯ ಕಥೆ ಒಳಗೊಂಡ ಈ ಸಿನಿಮಾ ಅಭಿಮಾನಿಗಳ ಮನಸು ಕದ್ದುಬಿಟ್ಟಿದೆ. ಅಷ್ಟರ ಮಟ್ಟಿದೆ ಮೂವರು ನಟರು ತಮ್ಮ ಪಾತ್ರವನ್ನು ನಿಭಾಯಿಸಿದ್ದಾರೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್ ಹಾಗೂ ಇಡೀ ಚಿತ್ರತಂಡ ಅಭಿಮಾನಿಗಳೊಟ್ಟಿಗೆ ಬೆಂಗಳೂರಿನಲ್ಲಿರುವ ತ್ರಿವೇಣಿ ಚಿತ್ರಮಂದಿರಕ್ಕೆ ಆಗಮಿಸಿ ಸಿನಿಮಾ ವೀಕ್ಷಣೆ ಮಾಡಿ ಸಂಭ್ರಮಿಸಿದರು.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications