Shivrajkumar Campaign: ಶಿವರಾಜಕುಮಾರ್ಗೆ ಮೀನೂಟಾ ಅಂದ್ರ ತುಂಬಾ ಇಷ್ಟ ಅಂತೆ...
ಕಾಂಗ್ರೆಸ್ ಪರ ಸ್ಯಾಂಡಲ್ವುಡ್ ನಟ ಶಿವರಾಜಕುಮಾರ್ ಪ್ರಚಾರ ಆರಂಭಿಸಿದ್ದಾರೆ. ಚುನಾವಣೆ ಪ್ರಚಾರದ ವೇಳೆ ತಮಗೆ ಇಷ್ಟವಾಗುವ ಮೀನೂಟದ ಬಗ್ಗೆ ಹೇಳಿಕೊಂಡಿದ್ದಾರೆ.
ಪತ್ನಿ ಪರ ಮಾತ್ರವಲ್ಲದೆ ಇತರ ಕ್ಷೇತ್ರಗಳಲ್ಲಿಯೂ ಪ್ರಚಾರಕ್ಕೆ ಬರುವುದಾಗಿ ಕಾಂಗ್ರೆಸ್ ಶಿವರಾಜ್ ಕುಮಾರ್ ಅಭಯ ನೀಡಿದ್ದರು. ಅದರಂತೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಅಭಿಯಾನದಲ್ಲಿ ಭಾಗವಹಿಸಿದ ಅವರು, ಕರಾವಳಿ ಭಾಗದ ಮೀನೂಟ ಅಂದರೆ ತಮಗೆ ತುಂಬಾನೇ ಇಷ್ಟ ಎಂದಿದ್ದಾರೆ.

ಅಂಜಲ್, ಕಾಣೆ, ಭೂತಾಯಿ ಮೀನು ಅಂದರೆ ತಮಗೆ ತುಂಬಾ ಇಷ್ಟ ಎಂದು ಹೇಳಿಕೊಂಡಿದ್ದಾರೆ. ಜೊತೆಗೆ ಕರಾವಳಿ ಜನರ ಬಗ್ಗೆ ಪ್ರೀತಿ-ಅಭಿಮಾನದ ಮಾತುಗಳನ್ನಾಡಿದ್ದಾರೆ. ಅಪ್ಪಾಜಿ ಬಿಟ್ಟರೆ ನಾನು ಹೆಚ್ಚಾಗಿ ಕರಾವಳಿ ಭಾಗದಲ್ಲಿ ಶೂಟಿಂಗ್ ಮಾಡಿದ್ದೇನೆ. ಈಗ ಎರಡನೇ ಸಲ ಬೈಂದೂರಿಗೆ ಬರುತ್ತಿದ್ದೇವೆ.
ಖಂಡಿತಾ ಒಳ್ಳೆ ಕೆಲಸ ಮಾಡುತ್ತೇವೆ ನಮಗೆ ಒಂದು ಅವಕಾಶ ಕೊಡಿ ಎಂದು ಶಿವರಾಜಕುಮಾರ್ ಕೇಳಿಕೊಂಡರು. 'ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಮಾಡಬಹುದು. ಇದಕ್ಕೆ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಗಿಂತ ಬೇರೆ ಉದಾಹರಣೆ ಬೇಕಾ? ನನ್ನ ಪತ್ನಿ ಗೀತಾ ಶಕ್ತಿಧಾಮ ನಿರ್ವಹಣೆ ಮಾಡುತ್ತಿದ್ದಾರೆ. ಆಕೆಗೆ ಸೇವಾ ಅನುಭವ ಇದೆ. ಚುನಾವಣೆಯಲ್ಲಿ ಜನರ ಆಶೀರ್ವಾದಕ್ಕಾಗಿ ಬಂದಿದ್ದೇವೆ' ಎಂದು ಶಿವರಾಜಕುಮಾರ್ ಹೇಳಿದರು.

ಕೊಲ್ಲೂರಿನ ತಾಯಿ ಮೂಕಾಂಬಿಕಾ ಆಶೀರ್ವಾದ ನಾವು ಬೇಡಿದ್ದೇವೆ. ಬಂಗಾರಪ್ಪ ಆಶೀರ್ವಾದ, ಮಧು ಬಂಗಾರಪ್ಪ ಸಾಥ್ ನೀಡಿದ್ದಾರೆ. ಈಗ ನಾವು ಜನರ ಆಶೀರ್ವಾದ ಪಡೆಯಲು ಬಂದಿದ್ದೇವೆ. ಪ್ರೊಡ್ಯೂಸರ್, ಫಿಲಂ ಚೇಂಬರ್ ಎಲ್ಲರೂ ಪ್ರಚಾರಕ್ಕೆ ಬರುತ್ತಾರೆ ನಾನು ಶೇಕಡ ಎಂಬತ್ತರಷ್ಟು ಕ್ಷೇತ್ರದಲ್ಲಿ ಪ್ರಚಾರದಲ್ಲಿ ಇರುತ್ತೇನೆ. ಎಲ್ಲಾ ಊರಿಗೂ ಹೋಗುತ್ತೇನೆ ಎಂದು ಅವರು ಹೇಳಿದರು.
ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಗೀತಾ ಶಿವರಾಜಕುಮಾರ್ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷಕ್ಕೆ ಕಣಕ್ಕಿಳಿಸಿದೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications