Vinod Raj: ನಟ ವಿನೋದ್ ರಾಜ್ಗೆ ಆರೋಗ್ಯ ಸಮಸ್ಯೆ... ಆಪರೇಷನ್!
Vinod Raj: ನಟ ವಿನೋದ್ ರಾಜ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ವಿನೋದ್ ರಾಜ್ ಅವರು ಕೆಲವು ದಿನಗಳಿಂದ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಇದೀಗ ಕಾಣಿಸಿಕೊಂಡಿದ್ದು ತಮ್ಮ ಆರೋಗ್ಯ ಸಮಸ್ಯೆಯ ಬಗ್ಗೆ ಹಾಗೂ ಇಷ್ಟು ದಿನ ಯಾಕೆ ಹೊರಗೆ ಬರಲು ಸಾಧ್ಯವಾಗಲಿಲ್ಲ ಎನ್ನುವ ಬಗ್ಗೆ ಮಾತನಾಡಿದ್ದಾರೆ. ನಾನು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದು. ಇದೇ ಕಾರಣಕ್ಕೆ ಕಳೆದ ಕೆಲವು ದಿನಗಳಿಂದ ನಾನು ಹೊರಗೆ ಬಂದು ಮಾತನಾಡಲು ಸಾಧ್ಯವಾಗಲಿಲ್ಲ ಅಂತ ಅವರು ಹೇಳಿದ್ದಾರೆ. ಅವರ ಧ್ವನಿ ಸಹ ತುಸು ಬದಲಾಗಿದೆ. ವಿನೋದ್ ರಾಜ್ಗೆ ಏನು ಆರೋಗ್ಯ ಸಮಸ್ಯೆ ಆಗಿತ್ತು. ಅವರು ಹೇಳಿದ್ದೇನು ಎನ್ನುವ ವಿವರ ಇಲ್ಲಿದೆ..
ಹೌದು ನನಗೆ ಸ್ವಲ್ಪ ಆರೋಗ್ಯ ಸರಿ ಇಲ್ಲ. ಹೀಗಾಗಿ, ಹೊರಗಡೆ ಬರುವುದಕ್ಕೆ ಸಾಧ್ಯವಾಗಲಿಲ್ಲ. ನನಗೆ ಆರೋಗ್ಯ ಸಮಸ್ಯೆಯಿಂದ ಆಪರೇಷನ್ ಆಗಿದೆ. ಹೀಗಾಗಿ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಕ್ಷಮಿಸಿ ನನ್ನ ಜೀವನವೇ ಬೇರೆ ಕಡೆ ಹೋಗಿದೆ ಅಂತಲೂ ಅವರು ಹೇಳಿದ್ದಾರೆ. ಈ ಮೂಲಕ ಸಿನಿಮಾ ರಂಗ ಹಾಗೂ ರಿಯಾಲಿಟಿ ಶೋಗಳು, ಕಿರುತೆರೆಗಳಿಂದಲೂ ವಿನೋದ್ ರಾಜ್ ಅವರು ಯಾಕೆ ದೂರವಾಗಿದ್ದಾರೆ ಎನ್ನುವ ಬಗ್ಗೆ ಮಾತನಾಡಿದ್ದಾರೆ.

ವಿನೋದ್ ರಾಜ್ ಅವರು ಕಳೆದ ಕೆಲವು ದಿನಗಳಿಂದ ಎಲ್ಲೂ ಹೊರಗಡೆ ಕಾಣಿಸಿಕೊಂಡಿರಲಿಲ್ಲ. ಅವರು ಸೋಷಿಯಲ್ ಮೀಡಿಯಾದಲ್ಲೂ ಅಷ್ಟೊಂದು ಕಾಣಿಸಿಕೊಳ್ಳದೆ ಇರುವುದರಿಂದ ಅವರಿಗೆ ಏನಾಗಿದೆ ಅಂತ ಅವರ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದರು. ಇದೀಗ ಕೊನೆಗೂ ಅವರು ಮಾಧ್ಯಮಗಳ ಮುಂದೆ ಕಾಣಿಸಿಕೊಂಡಿದ್ದು. ಅವರ ಆರೋಗ್ಯ ಸಮಸ್ಯೆಯ ಬಗ್ಗೆ ಮಾತನಾಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡುತ್ತ ಅವರು, ಕ್ಷಮಿಸಿ ನನ್ನ ಜೀವನವೇ ಬದಲಾಗಿ ಹೋಗಿದೆ. ನಾನು ಈಗ ಹಳ್ಳಿ.. ಜೀವನ ಹಾಗೂ ಕೃಷಿಯಲ್ಲಿ ನನ್ನನ್ನು ತೊಡಗಿಸಿಕೊಂಡಿದ್ದೀನಿ. ಹೀಗಾಗಿ, ಎಲ್ಲೂ ಕಾಣಿಸಿಕೊಳ್ಳಲು ಸಾಧ್ಯವಾಗಲಿಲ್ಲ. ದೇಹದ ಒಳಗಡೆ ಏನೆಲ್ಲಾ ಆಗಿರುತ್ತೋ ತಿಳಿಯಲ್ಲ. ನಾವು ಗಾಡಿಗಳಿಗೆ ಸರ್ವೀಸ್ ಮಾಡಿ ಬಿಡುತ್ತೇವೆ ದೇಹಕ್ಕೆ ಸರ್ವೀಸ್ ಮಾಡಲ್ಲ. ಇಲ್ಲ ಮಾಡಿಕೊಳ್ಳಲು ಮರೆತು ಹೋಗ್ತೀವಿ ಅಂತ ಅವರು ಹೇಳಿದ್ದಾರೆ.
ಬ್ಯಾಂಕ್ಗೆ ಹೋಗಿ ದುಡ್ಡಿದೆಯಾ ಅಂತ ಚೆಕ್ ಮಾಡಿಕೊಳ್ಳುತ್ತೇವೆ. ಆದರೆ ಆರೋಗ್ಯ ಸರಿ ಇದೆಯಾ ಅಂತ ನೋಡಿಕೊಳ್ಳಲ್ಲ. ಶಾಶ್ವತವಲ್ಲದ ಈ ಬದುಕು ಅಮೂಲ್ಯವಾದದ್ದು. ಇದನ್ನು ನಾವು ಉಳಿಸಿಕೊಳ್ಳಬೇಕು ಅಂತಲೂ ಹೇಳಿದ್ದಾರೆ.
ನನಗೆ ಆರೋಗ್ಯ ಸರಿ ಇರಲಿಲ್ಲ. ಹೀಗಾಗಿ ಆಪರೇಷನ್ ಸಹ ಆಗಿದೆ. ಈಗ ಆರೋಗ್ಯ ತುಸು ಚೇತರಿಸಿಕೊಂಡಿದೆ ಪರವಾಗಿಲ್ಲ ಅಂತ ಅವರು ಹೇಳಿದ್ದಾರೆ. ದೇವರು ಕೆಲವೊಮ್ಮೆ ಜೀವನದಲ್ಲಿ ಎಲ್ಲಾ ಕೊಟ್ಟಿರುತ್ತಾರೆ. ಆರೋಗ್ಯ ಕ್ಷೀಣಿಸಬಾರದು. ಇವೊತ್ತು ಫಿಲಂ ಚೇಂಬರ್ನಲ್ಲಿ ಏರ್ಪಡಿಸಿರುವ ಆರೋಗ್ಯ ತಪಾಸಣೆ ಶಿಬಿರದಲ್ಲಿ ಭಾಗವಹಿಸಿರುವುದು ಖುಷಿ ತಂದಿದೆ. ಇದನ್ನು ತುಂಬಾ ಚೆನ್ನಾಗಿ ಮಾಡಿದ್ದಾರೆ ಅಂತಲೂ ಅವರು ಹೇಳಿದ್ದಾರೆ. ಔಷಧಿಗಳನ್ನೂ ತಂದಿರಿಸಿದ್ದಾರೆ.
ಕರ್ನಾಟಕ ವಾಣಿಜ್ಯ ಮಂಡಳಿಯು ಕಾಲ ಕಾಲಕ್ಕೆ ಏನೆಲ್ಲಾ ಮಾಡಬೇಕೋ ಆ ಕೆಲಸಗಳನ್ನು ಮಾಡಿಕೊಂಡು ಬಂದಿದೆ. ಇನ್ನು ಚಿತ್ರರಂಗದ ನಿರ್ಮಾಪಕರು, ನಿರ್ದೇಶಕರಿಗೆ ಹಾಗೂ ಕಾಲವಿದರೆಗೆ ರಾಜ್ಯ ಸರ್ಕಾರದಿಂದ ಆರೋಗ್ಯ ವಿಮೆ ಕಾರ್ಡ್ನಂತಹ ಸೇವೆಗಳು ಸಿಕ್ಕರೆ ಅನುಕೂಲವಾಗಲಿದೆ. ಕಲಾವಿದರು ಸಂಧ್ಯಾಕಾಲದಲ್ಲಿ ಆರೋಗ್ಯ ಸಮಸ್ಯೆಗಳು ಎದುರಿಸುತ್ತಿದ್ದಾರೆ. ಅವರ ಆದಾಯಗಳು ನಿಂತು ಹೋಗುತ್ತವೆ ಅಂತಲೂ ಅವರು ಅಭಿಪ್ರಾಯಪಟ್ಟಿದ್ದಾರೆ.
ಪಾಕ್ ಮೇಲೆ ಯುದ್ಧ ಬೇಡ: ಇನ್ನು ದೇಶದ ವಿಚಾರವಾಗಿಯೂ ಮಾತನಾಡಿರುವ ಅವರು ಇದೀಗ ಪಾಕ್ - ಭಾರತದ ಯುದ್ಧ ಬೇಡ ಎಂದು ಅಭಿಪ್ರಾಯಪಟ್ಟಿದ್ದಾರೆ. ದೇಶದ ಪರಿಸ್ಥಿತಿ ನೋಡಿದರೆ, ಯುದ್ಧ ಮಾಡುವುದು ಶ್ರೇಷ್ಠವಲ್ಲ ಎಂದನಿಸುತ್ತದೆ ಎಂದು ಹೇಳಿದ್ದಾರೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications