ಯುವ ರಾಜ್ಕುಮಾರ್ ಬಾಳಲಿ ಬಿರುಕು : ಆ ಹುಡುಗ SSLC, ನನ್ನ ಮಗಳು ವಿದ್ಯಾವಂತೆ: ಶ್ರೀದೇವಿ ತಂದೆ ಬಿಚ್ಚಿಟ್ಟ ಸತ್ಯವೇನು?
ಬೆಂಗಳೂರು, ಜೂನ್ 11: ಚಂದನ್ ಶೆಟ್ಟಿ - ನಿವೇದಿತಾ ಗೌಡ ವಿಚ್ಛೇದನದ ಬಳಿಕ ಸ್ಯಾಂಡಲ್ವುಡ್ನಲ್ಲಿ ಮತ್ತೊಂದು ಡಿವೋರ್ಸ್ ಕೇಸ್ ಸಾಕಷ್ಟು ಸದ್ದು ಮಾಡುತ್ತಿದೆ. ಡಾ ರಾಜ್ಕುಮಾರ್ ಅವರ ಮೊಮ್ಮಗ ಹಾಗೂ ರಾಘವೇಂದ್ರ ರಾಜ್ಕುಮಾರ್ ಅವರ ಕಿರಿಯ ಮಗ ಯುವ ರಾಜ್ಕುಮಾರ್ (ಗುರು ರಾಜ್ಕುಮಾರ್) ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. ರಾಜ್ ಕುಮಾರ್ ಕುಟುಂಬದ ವಿರುದ್ಧ ಶ್ರೀದೇವಿ ತಂದೆ ಭೈರಪ್ಪ ಗಂಭೀರ ಆರೋಪ ಮಾಡಿದ್ದಾರೆ.
ಯುವ ರಾಜ್ಕುಮಾರ್ ವಿಚ್ಛೇದನದ ಕುರಿತು ಯುವ ಪತ್ನಿ ಶ್ರೀದೇವಿ ತಂದೆ ಭೈರಪ್ಪ ಅವರು ಮಾತನಾಡಿ, ಮೊದಲು ನನಗೆ ಇದರ ಬಗ್ಗೆ ಗೊತ್ತಿರಲಿಲ್ಲ. ನನ್ನ ಮಗಳು ನವೆಂಬರ್ನಲ್ಲಿ ಅಮೆರಿಕದಿಂದ ಬಂದಾಗ ಅವರು ಗಲಾಟೆ ಮಾಡಿದ್ದಾರೆ. ಅವರ ಟಾರ್ಚರ್ಗೆ ಹೆದರಿಕೊಂಡು ನನ್ನ ಮಗಳು ಆಸ್ಪತ್ರೆಗೆ ದಾಖಲಾಗಿದ್ದಳು. ಈಗಲೂ ಅವಳು ಅಲ್ಲಿ ಇರುವುದು ನನಗೆ ಇಷ್ಟ ಇಲ್ಲ' ಎಂದು ಶ್ರೀದೇವಿ ತಂದೆ ಭೈರಪ್ಪ ಹೇಳಿದ್ದಾರೆ.

ಅವರು ದೊಡ್ಮನೆ ಅಂತ ಹೇಳಿಕೊಳ್ಳಬಾರದು. ಇದನ್ನು ನಾವು ನಿರೀಕ್ಷಿಸಿರಲಿಲ್ಲ. ನನ್ನ ಮಗಳು ನವೆಂಬರ್ನಲ್ಲಿ ಅಮೆರಿಕದಿಂದ ಬಂದಾಗ ಅವರು ಗಲಾಟೆ ಮಾಡಿದ್ದಾರೆ. ಆಗ ನನ್ನ ಮಗಳು ಅತ್ತುಕೊಂಡು ಫೋನ್ ಮಾಡಿದ್ದಳು. ಆಗ ಮಾತನಾಡಲು ಅವರ ಮನೆಗೆ ಹೋದಾಗ ಯುವ ಜೊತೆ ಮಾತನಾಡೋಕೆ ಅವರ ತಂದೆ-ತಾಯಿ ನಮ್ಮನ್ನು ಬಿಡಲೇ ಇಲ್ಲ. ಆತ ಕೂಡ ತನಗೆ ಬಿಡುವು ಇಲ್ಲ ಅಂತ ಹೇಳಿ ಹೊರಟುಹೋದ್ರು ಎಂದು ಯುವ ಜೊತೆಗಿನ ಮನಸ್ಥಾಪದ ಬಗ್ಗೆ ಮಾತನಾಡಿದ್ದಾರೆ.
ನನ್ನ ಮಗಳು ಕಿರುಕುಳ ಮಾಡುತ್ತಾಳೆ ಅಂತ ಆರೋಪ ಹೊರಿಸಿದ್ದಾರೆ. ನನ್ನ ಮಗಳು ಕಿರುಕುಳ ನೀಡುವಂತವಳಲ್ಲ, ಡಿಸೆಂಬರ್ನಲ್ಲಿ ಇಲ್ಲಿಗೆ ಬರ್ತೀನಿ ಅಂದ್ರು. ಬಂದು ಸುಮ್ಮನೇ ಕುಳಿತಿದ್ದರು. ಮಗಳ ತಪ್ಪು ಏನು ಅಂತ ನಾನು ಕೇಳಿದ್ದಕ್ಕೂ ಉತ್ತರ ಕೊಡಲಿಲ್ಲ. ನನ್ನ ಮಗಳು ವಿದ್ಯಾವಂತೆ. ದುಡಿದು ತಿನ್ನುವಂತಹ ಶಕ್ತಿ ಇರುವಂತವಳು. ಆ ಹುಡುಗ ಎಸ್ಎಸ್ಎಲ್ಸಿ. ಆದ್ರೂ ನಾವು ಮದುವೆ ಮಾಡಿದ್ದೇವೆ ಎಂದು ಶ್ರೀದೇವಿ ತಂದೆ ಬೈರಪ್ಪ ಹೇಳಿದ್ದಾರೆ.
ಇನ್ನೂ ನನ್ನ ಮಗಳು ತನ್ನ ಬಗ್ಗೆ ಕೆಟ್ಟ ಮಾತು ಆಡುತ್ತಾರೆ ಎಂದು ನಮಗೆ ಯಾವತ್ತೂ ಹೇಳಲಿಲ್ಲ. ನವೆಂಬರ್ನಲ್ಲಿ ಅವರ ಮನೆಯಲ್ಲೇ ಇದ್ದಳು. ಬಳಿಕ ಅಕಾಡೆಮಿಗೆ ಕಳಿಸಿದೆ. ನಂತರ ಫ್ರೆಂಡ್ ಮನೆಗೆ ಹೋದಳು. ಅಲ್ಲಿಂದ ಅವಳನ್ನು ಕರೆದುಕೊಂಡು ಹೋಟೆಲ್ಗೆ ಕರೆದುಕೊಂಡು ಹೋಗಿ ಅಲ್ಲಿ ಬಿಟ್ಟ. ಮರುದಿನ ಅವಳು ಅಮೆರಿಕಗೆ ಹೋದಳು. ಮನೆಯಲ್ಲಿ ತುಂಬ ಕೆಟ್ಟ ಮಾತು ಆಡುತ್ತಿದ್ದರು ಅಂತ ನನ್ನ ಮಗಳು ನನಗೆ ಹೇಳಿದ್ದಳು ಎಂದು ಭೈರಪ್ಪ ಅವರು ತಿಳಿಸಿದ್ದಾರೆ.
ನನ್ನ ಮಗಳನ್ನ ಮದುವೆ ಮಾಡಿಕೊಡಿ ಅಂತ ಹಿಂಸೆ ಮಾಡಿದ್ದರು. ತುಂಬ ಒತ್ತಾಯ ಮಾಡಿದರು. ಆಮೇಲೆ ನಾವು ಒಪ್ಪಿಕೊಂಡು ನಿಶ್ಚಿತಾರ್ಥ ಮಾಡಿದೆವು. ಆ ನಂತರವೂ ಬೇಡ ಮದುವೆ ಬೇಡ ಅನಿಸುತ್ತದೆ ಅಂತ ನಾನು ನನ್ನ ಮಗಳಿಗೆ ಹೇಳಿದ್ದೆ. ಆಮೇಲೆ ನಾನೇ ಮನಸ್ಸು ಸೋತೆ. ಯುವರಾಜ್ ನನ್ನ ಜೊತೆ ತುಂಬ ಚೆನ್ನಾಗಿ ಇದ್ದ. ನನಗೆ ಹುಷಾರಿಲ್ಲ ಎಂದರೆ ಮಗಳು-ಅಳಿಯ ಬರುತ್ತಿದ್ದರು. ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ನನಗೆ ತಿಳಿದ ಮಟ್ಟಿಗೆ ಮನೆಯವರದ್ದೇ ಸಮಸ್ಯೆ. ಮನೆಯವರೇ ಯುವರಾಜ್ಗೆ ಕೇಳಿಕೊಟ್ಟು ಈ ಥರ ಟಾರ್ಚರ್ ಮಾಡಿಸುತ್ತಾ ಇದ್ದಾರೆ ಎಂದು ಯುವ ಕುಟುಂಬದವರ ವಿರುದ್ಧ ಭೈರಪ್ಪ ಅವರು ಆರೋಪ ಮಾಡಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications