Rashmika Mandanna: ರಶ್ಮಿಕಾ ಮಂದಣ್ಣ ಸಹಾಯಕ್ಕೆ ನಟ ಜೂನಿಯರ್ ಎನ್ಟಿಆರ್ & ಹೃತಿಕ್ ರೋಷನ್!
Rashmika Mandanna: ನಟಿ ರಶ್ಮಿಕಾ ಮಂದಣ್ಣ ಈಗ ನ್ಯಾಷನಲ್ ಕ್ರಶ್. ವಿಶ್ವದಾದ್ಯಂತ ಅವರ ಅಭಿಮಾನಿಗಳು ಇದ್ದಾರೆ. ರಶ್ಮಿಕಾ ಮಂದಣ್ಣ ಅವರು ಇದೀಗ ದಕ್ಷಿಣ ಭಾರತದಲ್ಲಿ ಮಾತ್ರವಲ್ಲ ಉತ್ತರ ಭಾರತದಲ್ಲೂ ಫೇಮಸ್ ಆಗಿದ್ದು ಅಲ್ಲೂ ಮಿಂಚುತ್ತಿದ್ದಾರೆ. ಬಾಲಿವುಡ್ನಲ್ಲೂ ಮಿಂಚುತ್ತಿದ್ದಾರೆ. ಟ್ರೋಲ್ಗಳಾಗಲಿ ಅಥವಾ ಯಾರಾದರೂ ಟೀಕೆ ಮಾಡಲಿ ಆ ವಿಷಯಗಳ ಬಗ್ಗೆ ರಶ್ಮಿಕಾ ಮಂದಣ್ಣ ಅವರು ಹೆಚ್ಚು ತಲೆಕೆಡಿಸಿಕೊಂಡಂತೆ ಇಲ್ಲ. ರಶ್ಮಿಕಾ ಅವರು ಟ್ರೋಲ್ಗೆ ಒಳಗಾಗುತ್ತಿರುವ ನಡುವೆಯೇ ಅವರ ಸಹಾಯಕ್ಕೆ ಸ್ಟಾರ್ ನಟರಾದ ಜೂನಿಯರ್ ಎನ್ಟಿಆರ್ ಮತ್ತು ಹೃತಿಕ್ ರೋಷನ್ ಅವರು ಸಹಾಯಕ್ಕೆ ಬಂದಿದ್ದಾರೆ. ಇದು ಯಾವ ರೀತಿಯ ಸಹಾಯ ಈ ಮೂರು ತಾರೆಯರು ಒಂದು ಕಡೆ ಸೇರುತ್ತಿರುವುದು ಯಾವ ಕಾರಣಕ್ಕೆ ಎನ್ನುವ ಮಾಹಿತಿ ಇಲ್ಲಿದೆ.
ರಶ್ಮಿಕಾ ಮಂದಣ್ಣ ಅವರು ಈಗ ಸಿಕ್ಕಾಪಟ್ಟೆ ಬ್ಯೂಸಿಯಾಗಿದ್ದಾರೆ. ದಕ್ಷಿಣ ಭಾರತೀಯ ಸಿನಿಮಾ ರಂಗದಲ್ಲಿ ಮಿಂಚಿದ ನಂತರ ಅವರು ಉತ್ತರ ಭಾರತದಲ್ಲೂ ಧೂಳೆಬ್ಬಿಸುತ್ತಿದ್ದಾರೆ. ಅವರ ಸಿನಿಮಾಗಳು ಬಾಲಿವುಡ್ನಲ್ಲೂ ಹವಾ ಸೃಷ್ಟಿ ಮಾಡಿದೆ. ಬಾಲಿವುಡ್ನಲ್ಲಿ ರಶ್ಮಿಕಾ ಮಂದಣ್ಣ ಈಗ ಬಹು ಬೇಡಿಕೆಯ ನಟಿ. ರಶ್ಮಿಕಾ ಮಂದಣ್ಣ ಅವರು ದಕ್ಷಿಣ ಭಾರತೀಯ ಸಿನಿಮಾರಂಗ ಮತ್ತು ಬಾಲಿವುಡ್ ಎರಡೂ ಚಿತ್ರರಂಗಗಳಲ್ಲೂ ಏಕಕಾಲಕ್ಕೆ ಬ್ಯೂಸಿಯಾಗಿದ್ದಾರೆ. ದಿನೇಶ್ ವಿಜನ್ ನಿರ್ಮಾಣದ ಹಾರರ್ ಕಾಮಿಡಿ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ರಶ್ಮಿಕಾ ಮಂದಣ್ಣ ಕೆರಿಯರ್ನಲ್ಲಿ ಇದು ಹೊಸ ಮಾದರಿಯ ಸಿನಿಮಾ ಅಂತಲೇ ಹೇಳಲಾಗುತ್ತಿದೆ.

ಈ ಸಿನಿಮಾದ ಹೀರೋ ಆಯುಷ್ಮಾನ್ ಖುರಾನಾ. ಸಿನಿಮಾದ ಹೆಸರು ಥಮಾ. ಇದು ಬಹು ನಿರೀಕ್ಷೆಯ ಸಿನಿಮಾ ಆಗಿದ್ದು. ರಶ್ಮಿಕಾ ಅವರ ಸಿನಿಮಾ ಕೆರಿಯರ್ಗೆ ಇದು ಹೊಸ ತಿರುವು ಕೊಡಲಿದೆ ಅಂತಲೇ ಹೇಳಲಾಗುತ್ತಿದೆ. ಸಿನಿಮಾವೊಂದರ ವಿಚಾರವಾಗಿ ರಶ್ಮಿಕಾ ಮಂದಣ್ಣ ಅವರ ಸಹಾಯಕ್ಕೆ ಜೂನಿಯರ್ ಎನ್ಟಿಆರ್ ಹಾಗೂ ಹೃತಿಕ್ ರೋಷನ್ ಅವರು ಬಂದಿದ್ದಾರೆ. ಬಾಲಿವುಡ್ನಲ್ಲೇ ಇದು ಹೊಸ ಮಾದರಿಯ ಪ್ರಯೋಗ ಅಂತಲೇ ಹೇಳಲಾಗುತ್ತಿದೆ.
ರಶ್ಮಿಕಾ ಅವರ ಥಮಾ ಸಿನಿಮಾಕ್ಕಾಗಿ ಜೂನಿಯರ್ ಎನ್ಟಿಆರ್ ಹಾಗೂ ಹೃತಿಕ್ ರೋಷನ್ ಅವರು ಒಂದಾಗಿದ್ದು. ಸಹಾಯ ಮಾಡುವುದಕ್ಕೆ ಮುಂದೆ ಬಂದಿದ್ದಾರೆ. ಬಾಲಿವುಡ್ನಲ್ಲಿ ಇದು ಹೊಸ ಮಾದರಿಯ ಪ್ರಯೋಗ ಅಂತಲೇ ಹೇಳಲಾಗುತ್ತಿದೆ. ಈ ಸಿನಿಮಾ ಇದೇ ವರ್ಷಾಂತ್ಯಕ್ಕೆ ಬಿಡುಗಡೆ ಆಗಲಿದೆ. ಈ ಸಿನಿಮಾದ ಪ್ರಚಾರ ಕಾರ್ಯಕ್ಕೆ ಜೂನಿಯರ್ ಎನ್ಟಿಆರ್ ಹಾಗೂ ಹೃತಿಕ್ ರೋಷನ್ ಅವರು ಒಂದಾಗಲಿದ್ದಾರೆ ಅಂತ ಹೇಳಲಾಗುತ್ತಿದೆ.
ಈ ಸಿನಿಮಾವನ್ನು ದಿನೇಶ್ ವಿಜನ್ ಅವರು ನಿರ್ಮಾಣ ಮಾಡಿದ್ದು. ಆಗಸ್ಟ್ 14ಕ್ಕೆ ರಿಲೀಸ್ ಆಗಲಿರುವ ಜೂ.ಎನ್ಟಿಆರ್ ಹಾಗೂ ಹೃತಿಕ್ ರೋಷನ್ ಅವರು ಅಭಿನಯಿಸಿರುವ ವಾರ್ 2 ಸಿನಿಮಾವನ್ನು ತಮ್ಮ ಸಿನಿಮಾದ ಪ್ರಚಾರಕ್ಕೆ ಬಳಸಿಕೊಳ್ಳಲಿದ್ದಾರೆ ಅಂತ ಹೇಳಲಾಗಿದೆ. ವಾರ್ 2 ಸಿನಿಮಾ ಥಿಯೇಟರ್ ಪ್ರಸಾರವಾಗುವ ಸಂದರ್ಭದಲ್ಲಿ ಈ ಚಿತ್ರದ ಟೀಸರ್ ಪ್ರಸಾರ ಕಾಣಿಸಿಕೊಳ್ಳಲಿದೆ. ಹಿಂದೆ ಈ ಮಾದರಿಯ ಸಿನಿಮಾಗಳು ಯಶಸ್ಸು ಕಂಡಿದ್ದು ರಶ್ಮಿಕಾ ಮಂದಣ್ಣ ಅವರಿಗೂ ಯಶಸ್ಸು ಪಕ್ಕಾ ಅಂತಲೇ ಹೇಳಲಾಗುತ್ತಿದೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications