Aishwarya Rai: ಬಾಲಿವುಡ್ ನಟಿ ಐಶ್ವರ್ಯಾ ರೈ ಕಾರು ಅಪಘಾತ
Aishwarya Rai Bachchan: ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಅವರ ಕಾರಿಗೆ ಬಸ್ ಡಿಕ್ಕಿ ಹೊಡೆದ ಘಟನೆ ಮುಂಬೈನಲ್ಲಿ ನಡೆದಿದೆ.
ಐಶ್ವರ್ಯಾ ರೈ ಅವರ ಕಾರಿಗೆ ಮುಂಬೈನ ರಸ್ತೆಯೊಂದರಲ್ಲಿ ಬೆಸ್ಟ್ ಬಸ್ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ. ಘಟನೆ ವೇಳೆ ನಟಿ ಕಾರಿನೊಳಗೆ ಇದ್ದರೇ ಎಂಬುದು ತಿಳಿದಿಲ್ಲ. ಈ ಸುದ್ದಿಯನ್ನು ಮೊದಲು ಸೆಲೆಬ್ರಿಟಿ ಪಾಪರಾಜೋ ವರಿಂದರ್ ಚಾವ್ಲಾ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲಿ ಅವರು ನಟಿಯ ಕಾರಿಗೆ ಬೆಸ್ಟ್ ಬಸ್ ಡಿಕ್ಕಿ ಹೊಡೆಯುವ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ.

ನಟಿ ಐಶ್ವರ್ಯಾ ಅವರ 1.49 ಕೋಟಿ ರೂಪಾಯಿ ಬೆಲೆಯ ಸಿಮೆಂಟ್ ಕಲರ್ನ ಐಷಾರಾಮಿ ಟೊಯೊಟಾ ವೆಲ್ಫೈರ್ ಕಾರಿಗೆ ಹಿಂದುಗಡೆಯಿಂದ ಬೆಸ್ಟ್ ಬಸ್ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಐಶ್ವರ್ಯಾ ಅವರ ಉಪಸ್ಥಿತಿ ಬಗ್ಗೆ ಇನ್ನೂ ತಿಳಿದುಬಂದಿಲ್ಲ.
ಓರ್ವ ಸಾವು: ರಾಜ್ಯದಲ್ಲಿ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇವೆ. ಹಾಗೆಯೇ ಇತ್ತೀಚೆಗಷ್ಟೇ ಎರಡು ಖಾಸಗಿ ಬಸ್ಗಳ ನಡುವೆ ಅಪಘಾತ ಸಂಭವಿಸಿದ್ದು, ಬಸ್ನಲ್ಲಿದ್ದ ಓರ್ವ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.
ಕೋಲಾರ ಜಿಲ್ಲೆ ಶ್ರೀನಿವಾಸಪುರ ಗುಂಟಪಲ್ಲಿ ಕ್ರಾಸ್ ಬಳಿ ಘಟನೆ ನಡೆದಿದೆ. ಅಪಘಾತದಲ್ಲಿ ಆಂದ್ರಪ್ರದೇಶ ಮೂಲದ ಮದನಪಲ್ಲಿಯ ಗಂಗಾಧರ್ ಎಂಬ ಪ್ರಯಾಣಿಕ ಸಾವನ್ನಪ್ಪಿದ್ದಾರೆ. ಅತೀ ವೇಗವಾಗಿದ್ದ ಖಾಸಗಿ ಬಸ್ ಓವರ್ ಟೆಕ್ ಮಾಡಲು ಹೋಗಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿತ್ತು.
ಘಟನೆಯಲ್ಲಿ ಗಾಯಗೊಂಡವರನ್ನು ಆಂದ್ರಪ್ರದೇಶದ ಮದನಪಲ್ಲಿ ಹಾಗೂ ಕೋಲಾರ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ. ಇನ್ನು ಸ್ಥಳಕ್ಕೆ ರಾಯಲ್ಪಾಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದರು.
ಭೀಕರ ಅಪಘಾತ: ಕಾರು ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐವರು ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಕೊಳ್ಳೇಗಾಲ ತಾಲೂಕಿನಲ್ಲಿ ಚಿಕ್ಕಿಂದುವಾಡಿ ಬಳಿಯ ಮುಖ್ಯ ರಸ್ತೆಯಲ್ಲಿ ಇತ್ತೀಚೆಗಷ್ಟೇ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ, ಕಾರಿನಲ್ಲಿದ್ದ ಮೂವರು ಪುರುಷರು, ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಇವರು ಮಂಡ್ಯ ಮೂಲದವರು ಎಂದು ತಿಳಿದುಬಂದಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವದ ನಡೆಯುತ್ತಿದ್ದು, ಈ ಮಹಾ ರಥೋತ್ಸವದಲ್ಲಿ ಪಾಲ್ಗೊಳ್ಳಲು ಇವರು ಕಾರಿನಲ್ಲಿ ತೆರಳುತ್ತಿದ್ದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಸ್ಥಳೀಯರ ಮಾಹಿತಿ ಮೇರೆಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.
ಮತ್ತೊಂದೆಡೆ, ಲಾರಿ ಮತ್ತು ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ 8 ಜನ ಸಾವನ್ನಪ್ಪಿದ್ದ, 33 ಮಂದಿ ಭೀಕರವಾಗಿ ಗಾಯಗೊಂಡ ಘಟನೆ ಕೆಲವು ತಿಂಗಳುಗಳ ಹಿಂದೆಯಷ್ಟೇ ಧ್ರಪ್ರದೇಶದಲ್ಲಿ ನಡೆದಿತ್ತು.
ತಿರುಪತಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಮೊಘಲಿ ಘಾಟ್ ರಸ್ತೆಯಲ್ಲಿ ಎರಡು ಲಾರಿಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸುಮಾರು 30 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿತ್ತು. ಗಾಯಾಳುಗಳನ್ನು ಚಿತ್ತೂರು ಜಿಲ್ಲೆಯ ಸ್ಥಳೀಯ ಆಸ್ಪತ್ರೆಗಳಿಗೆ ರವಾನಿಸಲಾಗಿತ್ತು.
ಮಾಹಿತಿ ತಿಳಿದ ತಕ್ಷಣವೇ ಪೊಲೀಸರು ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗಳಿಗೆ ಸ್ಥಳಾಂತರಿಸಿದ್ದರು. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳಾಂತರಿಸಲಾಗುತ್ತಿದೆ. ಇನ್ನು ತನಿಖೆ ಆರಂಭಿಸಲು ಪ್ರಕರಣ ದಾಖಲಿಸಲಾಗಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿತ್ತು. ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದರು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications