Deepika Padukone: ನಟಿ ದೀಪಿಕಾ ಪಡುಕೋಣೆಗೆ ಮಹತ್ವದ ಜವಾಬ್ದಾರಿ ಕೊಟ್ಟ ಭಾರತ ಸರ್ಕಾರ
ಬಾಲಿವುಡ್ ಖ್ಯಾತ ನಟಿ, ಕನ್ನಡತಿ ದೀಪಿಕಾ ಪಡುಕೋಣೆ ಅವರಿಗೆ ಭಾರತ ಸರ್ಕಾರವು ಮಹತ್ವದ ಜವಾಬ್ದಾರಿಯೊಂದನ್ನು ನೀಡಿದೆ. ದೀಪಿಕಾ 10 ವರ್ಷಗಳ ಹಿಂದೆ ಆತಂಕ ಮತ್ತು ಖಿನ್ನತೆಯೊಂದಿಗಿನ ತಮ್ಮ ಹೋರಾಟದ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದರು. ಇದೀಗ ನಟಿ ದೀಪಿಕಾ ಪಡುಕೋಣೆ ಅವರನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮೊದಲ ಮಾನಸಿಕ ಆರೋಗ್ಯ (ಮೆಂಟಲ್ ಹೆಲ್ತ್) ರಾಯಭಾರಿಯಾಗಿ ನೇಮಕ ಮಾಡಲಾಗಿದೆ.
ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು, ಅದರ ಸುತ್ತಲಿನ ಕಳಂಕವನ್ನು ಕಡಿಮೆ ಮಾಡಲು ದೀಪಿಕಾ 2015ರಲ್ಲಿ ದಿ ಲಿವ್ ಲವ್ ಲಾಫ್ ಫೌಂಡೇಶನ್ ಅನ್ನು ಸಹ ಸ್ಥಾಪಿಸಿದ್ದರು. ಮಾನಸಿಕ ಅಸ್ವಸ್ಥತೆಯಿಂದಾಗಿ ಯಾವುದೇ ಜೀವ ಕಳೆದುಕೊಳ್ಳಬಾರದು ಎಂಬುದು ಅವರ ಉದ್ದೇಶ. ಅಂದಿನಿಂದಲೂ ಅವರು ಸಾರ್ವಜನಿಕ ಜಾಗೃತಿ ಅಭಿಯಾನಗಳು, ಕುಟುಂಬಗಳನ್ನು ಭೇಟಿ ಮಾಡುವುದು, ಅವರೊಂದಿಗೆ ಮಾತನಾಡುವ ಮೂಲಕ ಮಾನಸಿಕ ಆರೋಗ್ಯ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ. ಆರೋಗ್ಯಕರ ಜೀವನಶೈಲಿಗಾಗಿ ಕೆಲಸ-ಜೀವನದ ಸಮತೋಲನವನ್ನು ಕಾಪಾಡಿಕೊಳ್ಳಲು ಯಾವಾಗಲೂ ಪ್ರಾಮುಖ್ಯತೆ ನೀಡಿದ್ದಾರೆ.

ಇದೀಗ ಕೇಂದ್ರ ಸರ್ಕಾರವು ಅಕ್ಟೋಬರ್ 10ರ ವಿಶ್ವ ಮಾನಸಿಕ ಆರೋಗ್ಯ ದಿನದ ಅಂಗವಾಗಿ ದೀಪಿಕಾ ಅವರನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮೊದಲ 'ಮಾನಸಿಕ ಆರೋಗ್ಯ ರಾಯಭಾರಿ'ಯಾಗಿ ನೇಮಿಸಿದೆ. ಈ ಬೆಳವಣಿಗೆಯು ಅವರ ವೃತ್ತಿಜೀವನದಲ್ಲಿ ಒಂದು ಪ್ರಮುಖ ಮೈಲಿಗಲ್ಲನ್ನು ಗುರುತಿಸುತ್ತದೆ. ಅಲ್ಲದೆ ಭಾರತದಲ್ಲಿನ ಮಾನಸಿಕ ಆರೋಗ್ಯ ಪರಿಸರ ವ್ಯವಸ್ಥೆಯನ್ನು ಬೆಂಬಲಿಸುತ್ತದೆ ಎಂದು ಹೇಳಲಾಗಿದೆ.
ಈ ಬಗ್ಗೆ ಪೋಸ್ಟ್ ಹಂಚಿಕೊಂಡಿರುವ ದೀಪಿಕಾ, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮೊದಲ ಮಾನಸಿಕ ಆರೋಗ್ಯ ರಾಯಭಾರಿಯಾಗಿ ನೇಮಕಗೊಂಡಿರುವುದು ತುಂಬಾ ಗೌರವವನ್ನುಂಟುಮಾಡುತ್ತಿದೆ ಎಂದು ಹೇಳಿದ್ದಾರೆ. ನಮ್ಮ ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಮ್ಮ ರಾಷ್ಟ್ರವು ಸಾರ್ವಜನಿಕ ಆರೋಗ್ಯದ ಹೃದಯಭಾಗದಲ್ಲಿ ಮಾನಸಿಕ ಆರೋಗ್ಯಕ್ಕಾಗಿ ಅರ್ಥಪೂರ್ಣ ಕ್ರಮಗಳನ್ನು ತೆಗೆದುಕೊಂಡಿದೆ ಎಂದಿದ್ದಾರೆ.
ಈ ಹುದ್ದೆಯನ್ನು ವಹಿಸಿಕೊಳ್ಳಲು ತುಂಬಾ ಗೌರವವಿದೆ. ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತದ ನಡೆಯುತ್ತಿರುವ ಪ್ರಯತ್ನಗಳನ್ನು ಬೆಂಬಲಿಸುವ ತಮ್ಮ ಬದ್ಧತೆಯನ್ನು ಒತ್ತಿ ಹೇಳಿದ್ದಾರೆ. ಈ ಸಹಯೋಗದೊಂದಿಗೆ, ಮಾನಸಿಕ ಯೋಗಕ್ಷೇಮಕ್ಕೆ ಆದ್ಯತೆ ನೀಡುವಲ್ಲಿ ಭಾರತ ಮಾಡಿರುವ ಮಹತ್ವದ ಪ್ರಗತಿಯನ್ನು ಆಧರಿಸಿ, ದೇಶದ ಮಾನಸಿಕ ಆರೋಗ್ಯ ಚೌಕಟ್ಟನ್ನು ಬಲಪಡಿಸಲು ಕೊಡುಗೆ ನೀಡುವ ಗುರಿ ಹೊಂದಿದ್ದೇನೆ ಎಂದಿದ್ದಾರೆ ದೀಪಿಕಾ. ಪತ್ನಿಗೆ ಈ ಮಹತ್ವದ ಹುದ್ದೆ ನೀಡಿರುವ ಹಿನ್ನೆಲೆ ಪತಿ ರಣವೀರ್ ಸಿಂಗ್, ದೀಪಿಕಾ ಅವರ ಪೋಸ್ಟ್ ಅನ್ನು ಹಂಚಿಕೊಂಡು ಈ ಬಗ್ಗೆ "ತುಂಬಾ ಹೆಮ್ಮೆಯಿದೆ" ಎಂದು ಬರೆದುಕೊಂಡಿದ್ದಾರೆ.
ದೀಪಿಕಾ ಪಡುಕೋಣೆ ಅವರೊಂದಿಗಿನ ಈ ಪಾಲುದಾರಿಕೆಯು ಭಾರತದಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಗಳ ಬಗ್ಗೆ ವ್ಯಾಪಕವಾಗಿ ಜಾಗೃತಿ ಮೂಡಿಸಲು, ಅದರ ಕಳಂಕವನ್ನು ಕಡಿಮೆ ಮಾಡಲು, ಮಾನಸಿಕ ಆರೋಗ್ಯವನ್ನು ಸಾರ್ವಜನಿಕ ಆರೋಗ್ಯದ ಅವಿಭಾಜ್ಯ ಅಂಶವಾಗಿ ಎತ್ತಿ ತೋರಿಸಲು ಸಹಾಯ ಮಾಡುತ್ತದೆ ಎಂದು ಕೇಂದ್ರ ಸಚಿವ ಜೆ.ಪಿ.ನಡ್ಡಾ ಹೇಳಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications