Malashree: ಶಿರಡಿ ಸಾಯಿಬಾಬಾಗೆ ದುಬಾರಿ ಚಿನ್ನದ ಕಿರೀಟ ಅರ್ಪಿಸಿದ ನಟಿ ಮಾಲಾಶ್ರೀ, ಬೆಲೆ ಎಷ್ಟು?
ಕನ್ನಡ ಚಿತ್ರರಂಗದ "ಕನಸಿನ ರಾಣಿ" ಖ್ಯಾತಿಯ ನಟಿ ಮಾಲಾಶ್ರೀ ಇದೀಗ ಸುದ್ದಿಯಲ್ಲಿದ್ದಾರೆ. ಶಿರಡಿ ಶ್ರೀಸಾಯಿಬಾಬಾ ಅವರ ಭಕ್ತೆಯಾಗಿರುವ ಮಾಲಾಶ್ರೀ ಅವರು ದುಬಾರಿ ಬೆಲೆಬಾಳುವ ಚಿನ್ನದ ಕಿರೀಟವನ್ನು ಭಕ್ತಿಪೂರ್ವಕವಾಗಿ ಅರ್ಪಿಸಿದ್ದಾರೆ. ತಮ್ಮ ಪುತ್ರಿ ಆರಾಧನಾ ಅವರೊಂದಿಗೆ ಶಿರಡಿಗೆ ತೆರಳಿ ಚಿನ್ನದ ಕಿರೀಟವನ್ನು ಹಸ್ತಾಂತರಿಸಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮಾಲಾಶ್ರೀ ಅವರು ನೀಡಿರುವ ಈ ಚಿನ್ನದ ಕಿರೀಟದ ಬೆಲೆ ಎಷ್ಟು ಗೊತ್ತಾ?
ಮಾಲಾಶ್ರೀ ಅವರು 1989ರಲ್ಲಿ ಬಿಡುಗಡೆಯಾದ "ನಂಜುಂಡಿ ಕಲ್ಯಾಣ" ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಈ ಮೊದಲ ಸಿನಿಮಾದಲ್ಲೇ ಅವರು ಜನಪ್ರಿಯತೆ ಗಳಿಸಿದ್ದರು. ಇದೇ ಸಮಯದಲ್ಲಿ ಮಾಲಾಶ್ರೀ ಅವರು ಮೊದಲ ಬಾರಿಗೆ ಶಿರಡಿಗೆ ಮಾಲಾಶ್ರೀ ಭೇಟಿ ನೀಡಿದ್ದನ್ನು ನೆನೆದಿದ್ದಾರೆ. 'ಇವತ್ತು ನಾನು ಚಿತ್ರರಂಗದಲ್ಲಿ ಮಾಡಿರುವ ಸಾಧನೆ, ನನಗೆ ಸಿಕ್ಕಿರುವ ಜನಪ್ರಿಯತೆ ಎಲ್ಲವೂ ಬಾಬಾ ಅವರ ಆಶೀರ್ವಾದದಿಂದಲೇ ಸಿಕ್ಕಿದೆ' ಎಂದಿದ್ದಾರೆ. ಈ ವಿಡಿಯೋವನ್ನು ಶಿರಡಿ ಮಂದಿರ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.

'ಬಾಬಾ ಎಲ್ಲವನ್ನೂ ಕರುಣಿಸಿದ್ದಾರೆ'
ಕುಟುಂಬದೊಂದಿಗೆ ಶಿರಡಿಗೆ ತೆರಳಿರುವ ಮಾಲಾಶ್ರೀ ಅವರು ಸಾಯಿಬಾಬಾ ಅವರ ದರ್ಶನ ಪಡೆದು ಪುನೀತರಾಗಿದ್ದಾರೆ. 'ನಾನು ಮೊದಲಿನಿಂದಲೂ ಬಾಬಾಗೆ ಏನಾದ್ರೂ ಕೊಡಬೇಕು ಅಂದುಕೊಂಡಿದ್ದೆ. ಬಾಬಾ ನಿಜಕ್ಕೂ ನನಗೆ ತೀರಾ ಹತ್ತಿರದವರಿದ್ದಂತೆ. ಬಾಬಾ ನಾನು ಕೇಳಿದ ಎಲ್ಲವನ್ನೂ ಕರುಣಿಸಿದ್ದಾರೆ. ಹೀಗಾಗಿ ನನ್ನ ಕಡೆಯಿಂದ ಇದೊಂದು ಪುಟ್ಟ ಕಾಣಿಕೆಯನ್ನು ಅವರಿಗೆ ನೀಡಲು ಬಯಸಿದ್ದೇನೆ. ಇದರಿಂದ ಬಾಬಾ ಕೂಡ ಖುಷಿಪಡುತ್ತಾರೆ ಎಂದು ಭಾವಿಸಿದ್ದೇನೆ' ಎಂದು ಮಾಲಾಶ್ರೀ ಹೇಳಿದ್ದಾರೆ.
'ನಿಜ ಹೇಳಬೇಕು ಅಂದ್ರೆ ನನ್ನ ಮಗಳು ಆರಾಧನಾ ಕೂಡ ಶಿರಡಿಯಿಂದಲೇ ತನ್ನ ಕೆರಿಯರ್ ಶುರು ಮಾಡಿದ್ದು. ಅವಳು ಕೂಡ ತನ್ನ ಮೊದಲ ಸಿನಿಮಾದಲ್ಲಿ ನಟಿಸುವ ಮುನ್ನ ಶಿರಡಿಗೆ ಬಂದು ಆಶೀರ್ವಾದ ಪಡೆದಿದ್ದಳು. ಬಾಬಾ ಅವರ ಮಹಿಮೆ ಏನೆಂದು ಎಲ್ಲರಿಗೂ ಗೊತ್ತಿದೆ. ನಾನು ಬಾಬಾ ಮಂದಿರದ ಆಡಳಿತ ಮಂಡಳಿಗೆ ಹಾಗೂ ವೈಯಕ್ತಿಕವಾಗಿ ಸಾಯಿಬಾಬಾಗೆ ಧನ್ಯವಾದ ಹೇಳಲು ಬಯಸುತ್ತೇನೆ' ಎಂದಿದ್ದಾರೆ.
ಮಾಲಾಶ್ರೀ ಅವರು ತುಂಬಾ ವರ್ಷಗಳಿಂದಲೂ ಶಿರಡಿ ಸಾಯಿಬಾಬಾ ಮಂದಿರಕ್ಕೆ ನಿರಂತರವಾಗಿ ಭೇಟಿ ನೀಡುತ್ತಿದ್ದು, ಇಲ್ಲಿಗೆ ಬಂದು ಹೋದಾಗಲೆಲ್ಲ ನಮಗೆ ಒಳ್ಳೆಯದೇ ಆಗಿದೆ ಎಂದಿದ್ದಾರೆ. ಮಾಲಾಶ್ರೀ ಅವರ ಪತಿ, ನಿರ್ಮಾಪಕ ರಾಮು ಅವರು ಕೂಡ ಸಾಯಿಬಾಬಾ ಭಕ್ತರಾಗಿದ್ದರು. ಹೀಗಾಗಿ ಕುಟುಂಬ ಸಮೇತರಾಗಿ ಅವರು ಶಿರಡಿಗೆ ಹೋಗಿ ಬಾಬಾ ದರ್ಶನ ಮಾಡುತ್ತಾರೆ. ಇನ್ನು ಬಾಬಾಗೆ ಮಂದಿರಕ್ಕೆ ಅರ್ಪಿಸಿರುವ ಚಿನ್ನದ ಕಿರೀಟದ ಬೆಲೆ ಅಧಿಕೃತವಾಗಿ ರಿವೀಲ್ ಮಾಡಿಲ್ಲ, ಆದರೆ ಇದರ ಮೌಲ್ಯ ಬಾರಿ ದುಬಾರಿ ಎಂದು ಹೇಳಲಾಗುತ್ತಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications