ಗುಡ್ನ್ಯೂಸ್ ಕೊಟ್ಟ ಗೊಂಬೆ.. ಮೊದಲ ಮಗುವಿನ ನಿರೀಕ್ಷೆಯಲ್ಲಿ ನೇಹಾ-ಚಂದನ್ ಜೋಡಿ
ಕನ್ನಡ ಕಿರುತೆರೆಯ ಜನಪ್ರಿಯ ಜೋಡಿ ನಟಿ ಗೊಂಬೆ ಹಾಗೂ ನಟ ಚಂದನ್ ಗೌಡ ದಂಪತಿ ಅಭಿಮಾನಿಗಳಿಗೆ ಗುಡ್ನ್ಯೂಸ್ ನೀಡಿದ್ದಾರೆ. ನಟಿ ನೇಹಾ ಗೌಡ ಹಾಗೂ ಚಂದನ್ ಗೌಡ ದಂಪತಿ ಇದೀಗ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಗರ್ಭಿಣಿ ಆಗಿರುವ ನೇಹಾ ಗೌಡ ಈ ಖುಷಿಯ ವಿಷಯವನ್ನು ತಮ್ಮ ಅಭಿಮಾನಿಗಳೊಂದಿಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಲಕ್ಷ್ಮೀ ಬಾರಮ್ಮ ಧಾರಾವಾಹಿಯಲ್ಲಿ ಗೊಂಬೆ ಪಾತ್ರದಲ್ಲಿ ಅಭಿನಯಿಸಿದವರು ನೇಹಾ ಗೌಡ ಕಿರುತೆರೆಯ ಗೊಂಬೆ ಎಂದೇ ಜನಪ್ರಿಯತೆ ಪಡೆದಿದ್ದರು. ನೇಹಾ ಪತಿ ಚಂದನ್ ಗೌಡ ಸದ್ಯ ಅಂತರಪಟ ಧಾರಾವಾಹಿಯಲ್ಲಿ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಇನ್ನು ರಾಜ-ರಾಣಿ ಸೀಜನ್-೧ ಶೋನಲ್ಲಿ ಭಾಗವಹಿಸಿದ್ದ ಈ ದಂಪತಿ ವಿನ್ನರ್ ಆಗಿ ಹೊರಹೊಮ್ಮಿದ್ದರು.

ನಟಿ ನೇಹಾ ಗೌಡ ಫೆಬ್ರವರಿ 18, 2018ರಂದು ತಮ್ಮ ದೀರ್ಘಕಾಲದ ಗೆಳೆಯ ಚಂದನ್ ಗೌಡ ಅವರನ್ನು ವಿವಾಹವಾದರು. ಇವರಿಬ್ಬರದು ಚಿಕ್ಕವಯಸ್ಸಿನ ಪ್ರೇಮವಾಗಿದ್ದು, ಸುದೀರ್ಘ ಪ್ರೀತಿ ಬಳಿಕ ನೇಹಾ - ಚಂದನ್ ಕುಟುಂಬಸ್ಥರ ಸಮ್ಮುಖದಲ್ಲಿ ಅದ್ಧೂರಿಯಾಗಿ ವಿವಾಹವಾಗಿದ್ದರು. ಇದೀಗ ಮದುವೆಯಾಗಿ 6 ವರ್ಷಗಳ ಬಳಿಕ ನೇಹಾ ಗೌಡ ಹಾಗೂ ಚಂದನ್ ಸಿಹಿ ಸುದ್ದಿ ನೀಡಿದ್ದಾರೆ.
ಈ ವಿಚಾರವನ್ನು ನೇಹಾ ಗೌಡ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, "ನಮ್ಮ ಕುಟುಂಬದಲ್ಲಿ ಹೊಸ ಜೀವನ ಸ್ವಾಗತಿಸಲು ನಾವು ಸಿದ್ಧರಾಗಿದ್ದೇವೆ. ನಮ್ಮ ಹೃದಯವು ಸಂತೋಷ ಮತ್ತು ನಿರೀಕ್ಷೆಯಿಂದ ತುಂಬಿ ತುಳುಕುತ್ತಿದೆ.

ನಿಮ್ಮಲ್ಲಿ ಹಲವರು ಇದನ್ನು ಊಹಿಸಿದ್ದಾರೆ. ಹೌದು, ನೀವು ಹೇಳಿದ್ದು ಸರಿ. ನಾವೀಗ ಇಬ್ಬರಿಂದ ಮೂವರಾಗುತ್ತಿದ್ದೇವೆ. ನಿದ್ದೆಯಿಲ್ಲದ ರಾತ್ರಿಗಳು, ಮಿತಿಯಿಲ್ಲದ ಪ್ರೀತಿ ಹಾಗೂ ನಗು ತುಂಬಿದ ಜೀವನದ ಹೊಸ ಅಧ್ಯಾಯಕ್ಕಾಗಿ ಕಾಯುತ್ತಿದ್ದೇವೆ" ಎಂದಿದ್ದಾರೆ.
ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿರುವ ನೇಹಾ - ಚಂದನ್ ದಂಪತಿಗೆ ಸೋಷಿಯಲ್ ಮೀಡಿಯಾದಲ್ಲಿ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಕಿರುತೆರೆ ಕಲಾವಿದರಾದ ಚಂದನಾ ಅನಂತಕೃಷ್ಣ, ನೀತಾ ಅಶೋಕ್, ಅಮೃತಾ ರಾಮಮೂರ್ತಿ, ರಶ್ಮಿ ಪ್ರಭಾಕರ್, ಪ್ರಿಯಾಂಕಾ, ಶ್ರುತಿ ಪ್ರಕಾಶ್ ಸೇರಿದಂತೆ ಹಲವಾರು ನಟ - ನಟಿಯರು ಈ ದಂಪತಿಗೆ ಶುಭ ಹಾರೈಸಿದ್ದಾರೆ.
ಮೊದಲ ಮಗುವಿನ ನಿರೀಕ್ಷೆಯಲ್ಲಿ ಚಂದನ್-ಕವಿತಾ ಗೌಡ ದಂಪತಿ
ಇನ್ನು ಲಕ್ಷ್ಮೀ ಬಾರಮ್ಮ ಧಾರಾವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡ ನಟ ಚಂದನ್ ಕುಮಾರ್ ಹಾಗೂ ಕವಿತಾ ಗೌಡ ದಂಪತಿ ಕೂಡ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇತ್ತೀಚಿಗೆ ಬೇಬಿ ಸ್ಕ್ಯಾನ್ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿರುವ ನಟಿ ಕವಿತಾ ಗೌಡ ತಾವು ತಾಯಾಗುತ್ತಿರುವ ಖುಷಿಯನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದರು. ಈ ಸ್ವಾರ್ ಜೋಡಿಗೆ ಶುಭಾಶಯಗಳ ಮಹಾಪೂರವೇ ಹರಿದುಬಂದಿತ್ತು.
-
ಧುರಂಧರ್ 2 ಟ್ರೈಲರ್ ಔಟ್: ರಕ್ತ ಚರಿತ್ರೆ ಬರೆಯಲಿದೆ ಸಿನಿಮಾ, ಭರ್ಜರಿ ಕಲೆಕ್ಷನ್ ನಿರೀಕ್ಷೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications