Payal Rajput: ನ್ಯಾಯ ಬೇಕು ಎಂದು ಪಟ್ಟು ಹಿಡಿದ ಹೆಡ್ ಬುಷ್ ನಟಿ ಪಾಯಲ್ ರಜಪೂತ್
ಮುಂಬೈ, ಮೇ. 20: ಇತ್ತೀಚೆಗೆ ಡೈರೆಕ್ಟರ್ಸ್ ಡೇ ಕಾರ್ಯಕ್ರಮದಲ್ಲಿ ಪಾಯಲ್ ರಜಪೂತ್ ಅವರ ಇತ್ತೀಚಿನ ಚಿತ್ರ 'ರಕ್ಷಣಾ' ಟ್ರೇಲರ್ ಅನ್ನು ಅನಾವರಣಗೊಳಿಸಲಾಗಿದೆ. ಕಾರ್ಯಕ್ರಮ ನಡೆದ ಬೆನ್ನಲ್ಲೇ ನಟಿ ಈ ಚಿತ್ರದ ಬಿಡುಗಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ನನಗೆ ನ್ಯಾಯ ಬೇಕು ಎಂದು ಮನವಿ ಮಾಡಿದ್ದಾರೆ.
ಕನ್ನಡದ ಹೆಡ್ ಬುಷ್ ಸಿನಿಮಾದಲ್ಲಿ ನಟ ಡಾಲಿ ಧನಂಜಯ್ ಜೊತೆಗೆ ನಟಿಸಿದ್ದ ಮಂಗಳಾವರಂ ಸಿನಿಮಾ ಮೂಲಕ ಸಕತ್ ಸದ್ದು ಮಾಡಿದ್ದ ನಟಿ ಪಾಯಲ್ ರಜಪೂತ್. ಈಗ ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ಚಲನಚಿತ್ರದ ನಿರ್ಮಾಪಕರ ವಿರುದ್ಧ ಕಿಡಿಕಾರಿದ್ದಾರೆ. ತಮ್ಮ ಬಾಕಿಯನ್ನು ಪಾವತಿಸಲು ವಿಫಲರಾದ ಕಾರಣ ನಿರ್ಮಾಪಕರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಬೆದರಿಕೆ ಹಾಕಿದ್ದಾರೆ.

ರಕ್ಷಣಾ ಸಿನಿಮಾ ಮೇಲೆ ಪಾಯಲ್ ಗರಂ
ನಟಿ ಪಾಯಲ್ ರಜಪೂತ್ ತನ್ನ ಅಧಿಕೃತ ಹೇಳಿಕೆಯಲ್ಲಿ, ರಕ್ಷಣಾ ಚಲನಚಿತ್ರವನ್ನು ಪ್ರಚಾರ ಮಾಡದಿದ್ದರೆ ನಿರ್ಮಾಪಕರು ತೆಲುಗು ಚಿತ್ರಗಳಿಂದ ನಿಷೇಧಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಇತ್ತೀಚಿನ ಸಭೆಗಳಲ್ಲಿ ನಿರ್ಮಾಪಕರು 'ಅನುಚಿತ' ಭಾಷೆ ಬಳಸಿದ್ದಾರೆ ಎಂದು ಪಾಯಲ್ ಆರೋಪಿಸಿದ್ದಾರೆ.
ಪಾಯಲ್ ಅವರ ತಂಡವು ಪ್ರಚಾರಕ್ಕಾಗಿ ಅವರೊಂದಿಗೆ ಮಾತುಕತೆ ನಡೆಸಲು ಪ್ರಯತ್ನಿಸಿದೆ. ಆದರೆ ಅವರು ತಮ್ಮ ಬಾಕಿಯನ್ನು ಪಾವತಿಸಲು ನಿರಾಕರಿಸಿದ್ದಾರೆ. "ನಾನು 2019 ಮತ್ತು 2020 ರಲ್ಲಿ ನಟಿಸಿದ್ದ ರಕ್ಷಣ ಎಂಬ ಚಲನಚಿತ್ರವಿದೆ. ಇದನ್ನು ಮೂಲತಃ 5Ws ಎಂದು ಹೆಸರಿಸಲಾಗಿತ್ತು. ಚಿತ್ರದ ಬಿಡುಗಡೆಯು ವಿಳಂಬವಾಯಿತು. ಆದರೆ, ನಿರ್ಮಾಪಕಕರು ಈಗ ನನ್ನ ಇತ್ತೀಚಿನ ಯಶಸ್ಸಿನ ಲಾಭವನ್ನು ಪಡೆಯಲು ಪ್ರಯತ್ನಿಸುತ್ತಿದ್ದಾರೆ. ನನ್ನ ಬಾಕಿ ಕೂಡ ಪಾವತಿಸದೆ ಪ್ರಚಾರಕ್ಕೆ ಬರಬೇಕು ಎಂದು ಹೇಳುದ್ದಾರೆ. ನಾನು ಸಿನಿಮಾಗಳಲ್ಲಿ ಬ್ಯುಸಿ ಇರುವ ಕಾರಣ ಈಗ ಸಮಯವಿಲ್ಲ ಎಂದು ನನ್ನ ತಂಡ ತಿಳಿಸಿದೆ. ಆದರೆ , ಅವರು ನನ್ನನ್ನು ತೆಲುಗು ಚಿತ್ರರಂಗದಿಂದ ನಿಷೇಧಿಸುವ ಬೆದರಿಕೆ ಹಾಕಿದ್ದಾರೆ" ಎಂದು ತಿಳಿಸಿದ್ದಾರೆ.
An important message to my fans and the film fraternity. #needjustice pic.twitter.com/u96QVbWEdT
— paayal rajput (@starlingpayal) May 19, 2024
"ನಮ್ಮ ತಂಡವು "ರಕ್ಷಣಾ" ಡಿಜಿಟಲ್ ಪ್ರಚಾರಕ್ಕಾಗಿ ಮಾತುಕತೆ ನಡೆಸಲು ಪ್ರಯತ್ನಿಸಿದೆ. ಬಾಕಿಯನ್ನು ನೀಡುವಂತೆ ಕೂಡ ತಿಳಿಸಿದೆ. ಆದರೆ, ಅವರು ರಾಜಿ ಮಾಡಿಕೊಳ್ಳಲು ನಿರಾಕರಿಸಿದರು. ನನ್ನ ಹೆಸರನ್ನು ಹಾಳುಮಾಡುವ ರೀತಿಯಲ್ಲಿ ಬಳಸಿದರು, ಇದು ಸ್ವೀಕಾರಾರ್ಹವಲ್ಲ. ತನ್ನ ಒಪ್ಪಿಗೆಯಿಲ್ಲದೆ ಚಿತ್ರವನ್ನು ಬಿಡುಗಡೆ ಮಾಡಲು ಬಯಸುತ್ತಿರುವ ಕಾರಣ ನಿರ್ಮಾಪಕರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಯೋಜಿಸುತ್ತಿದ್ದೇವೆ" ಎಂದು ಪಾಯಲ್ ಬರೆದಿದ್ದಾರೆ. ಪಾಯಲ್ ಪೋಸ್ಟ್ ಅನ್ನು ಹಂಚಿಕೊಂಡ ಕೂಡಲೇ, ಅವರ ಅಭಿಮಾನಿಗಳು ನಟಿಗೆ ಬೆಂಬಲವನ್ನು ನೀಡಿ, ಬಾಕಿ ಪಾವತಿಸುವಂತೆ ನಿರ್ಮಾಪಕರನ್ನು ಒತ್ತಾಯಿಸಿದ್ದಾರೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications