Get Updates
Get notified of breaking news, exclusive insights, and must-see stories!

ಸಿನಿಮಾ ಕೆರಿಯರ್‌ ಬಗ್ಗೆ ನಟಿ ರಾಧಿಕಾ ಶಾಕಿಂಗ್‌ ಹೇಳಿಕೆ

ಸ್ಯಾಂಡಲ್‌ವುಡ್‌ ನಟಿ ರಾಧಿಕಾ ಕುಮಾರಸ್ವಾಮಿ ಅವರು ನಟಿಸಿರುವ ಭೈರಾದೇವಿ ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ಈ ನಡುವೆಯೇ ಅವರು ತಮ್ಮ ಸಿನಿಮಾ ಕೆರಿಯರ್‌ ಬಗ್ಗೆ ಶಾಕಿಂಗ್‌ ವಿಚಾರ ಬಿಚ್ಚಿಡುವ ಮೂಲಕ ಅಭಿಮಾನಿಗಳನ್ನು ಬೆಚ್ಚಿಬೀಳಿಸಿದ್ದಾರೆ. ಈ ಸಿನಿಮಾ ಪ್ರಮೋಷನ್‌ ವೇಳೆಯೇ ನಟಿ ರಾಧಿಕಾ ಸಿನಿಮಾ ರಂಗ ತೊರೆಯುವ ಬಗ್ಗೆ ಮಾತನಾಡಿದ್ದಾರೆ.

ನಿನ್ನೆ ಭೈರಾದೇವಿ ಸಿನಿಮಾದ ಪ್ರಮೋಷನ್‌ ಕಾರ್ಯಕ್ರಮದಲ್ಲಿ ನಟಿ ರಾಧಿಕಾ ಅವರು ಸಿನಿಮಾದ ಬಗ್ಗೆ ಮಾತನಾಡುತ್ತಿದ್ದರು. ಈ ವೇಳೆ ಅವರು ದೀಢೀರನೆ ಚಿತ್ರರಂಗ ತೊರೆಯುವ ಮಾತನ್ನಾಡಿದರು. ಇದಕ್ಕೆ ಅಲ್ಲಿದ್ದವರೆಲ್ಲ ಒಂದು ಕ್ಷಣ ಶಾಕ್‌ ಕೂಡ ಆದರು. ಇದಕ್ಕೆ ಅಸಲಿ ಕಾರಣವನ್ನು ರಾಧಿಕಾ ಅವರೇ ಹೇಳಿದ್ದು, ಭೈರಾದೇವಿ ಸಿನಿಮಾದ ಸಕ್ಸಸ್‌ ಮೇಲೆ ನನ್ನ ಭವಿಷ್ಯ ನಿಂತಿದೆ ಎಂದಿದ್ದಾರೆ.

Actress Radhika Kumaraswamy Has Spoken About Leaving The Film Industry

ನನ್ನ ಕೆರಿಯರ್‌ನಲ್ಲಿ ಈ ಭೈರಾದೇವಿ ದೊಡ್ಡ ಸಿನಿಮಾ. ಈ ಸಿನಿಮಾ ಯಶಸ್ವಿಯಾದರೆ ಮಾತ್ರ ನಾನು ಬೇರೆ ಸಿನಿಮಾಗಳನ್ನು ಮಾಡುತ್ತೇನೆ. ಒಂದು ವೇಳೆ ಸಕ್ಸಸ್‌ ಆಗದಿದ್ದರೆ ಇದೇ ನನ್ನ ಕೊನೆಯ ಸಿನಿಮಾ ಆಗಲಿದೆ. ಪ್ರೇಕ್ಷಕರಿಗೆ ನಾನು ಇಷ್ಟವಾಗದಿದ್ದರೆ ಸಿನಿಮಾರಂಗದಿಂದಲೇ ದೂರ ಹೋಗಲು ನಿರ್ಧರಿಸಿದ್ದೆ. ಈ ಬಗ್ಗೆ ನಾನು ನಿರ್ದೇಶಕರಿಗೂ ಹೇಳಿದ್ದೆ ಎಂದು ನಟಿ ರಾಧಿಕಾ ಕುಮಾರಸ್ವಾಮಿ ವೇದಿಕೆಯಲ್ಲಿ ಭಾವುಕರಾದರು.

ನನ್ನ ಮೇಲೆ ನಂಬಿಕೆ ಇಟ್ಟು ಇಂತಹ ಪಾತ್ರ ಮಾಡಿಸಿದ್ದಾರೆ. ಇದು ನನ್ನ ಕೆರಿಯರ್‌ನಲ್ಲೇ ಹಿಟ್‌ ಸಿನಿಮಾ ಆಗುತ್ತೆ ಅನ್ನೋ ನಂಬಿಕೆ ನನಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಾನು ಈ ಸಿನಿಮಾಗಾಗಿ ತುಂಬಾ ಕಷ್ಟಪಟ್ಟಿದ್ದೇನೆ. ತುಂಬಾ ಸಮಸ್ಯೆಗಳನ್ನು ಎದುರಿಸಿದ್ದೇನೆ. ಇದೆಲ್ಲ ನೋಡಿದಾಗ ಕಲಾವಿದರು ಯಾಕೆ ಇಷ್ಟೊಂದು ಕಷ್ಟ ಪಡುತ್ತಾರೆ? ಎಂದು ನನಗೆ ಅನಿಸುತ್ತೆ. ಸ್ಮಶಾನದಲ್ಲೆಲ್ಲ ಅದೆಷ್ಟೋ ದಿನ ಬಹಳ ಸವಾಲುಗಳಿಂದ ಶೂಟಿಂಗ್‌ ಮಾಡಿದ್ದೇವೆ ಎಂದು ಹೇಳಿದ್ದಾರೆ.

Actress Radhika Kumaraswamy Has Spoken About Leaving The Film Industry

ಇನ್ನು ಈ ಭೈರಾದೇವಿ ಸಿನಿಮಾದ ಟ್ರೈಲರ್ ನಿನ್ನೆ ಬೆಂಗಳೂರಿನಲ್ಲಿ ಬಿಡುಗಡೆಯಾಗಿದೆ. ಈ ಸಿನಿಮಾದಲ್ಲಿ ನಟಿ ರಾಧಿಕಾ ಅವರು ಕಾಳಿಯ ಅವತಾರ ತಾಳಿದ್ದಾರೆ. ಈ ಬಗ್ಗೆ ಮಾತನಾಡಿರುವ ರಾಧಿಕಾ, ನಾನು ಕಾಳಿ ವೇಷ ಧರಿಸಿದಾಗ ನನ್ನಲ್ಲಿ ಕೆಲವು ಬದಲಾವಣೆ ಆಗುತ್ತಿತ್ತು ಎಂದಿದ್ದಾರೆ. ಮೊದಲ ದಿನ ನಾನು ಕಾಳಿ ವೇಷ ಧರಿಸಿದಾಗ ತಲೆ ಎತ್ತಲು ನನಗೆ ಕಷ್ಟವಾಗುತ್ತಿತ್ತು ಎಂದು ಶೂಟಿಂಗ್‌ ವೇಳೆ ಎದುರಾದ ಸಮಸ್ಯೆಗಳನ್ನು ಬಿಚ್ಚಿಟ್ಟಿದ್ದಾರೆ.

ಈ ಘಟನೆ ನಂತರ ನಮ್ಮ ಕೋರಿಯೋಗ್ರಫರ್ ಹಾಗೂ ಡೈರೆಕ್ಟರ್‌ ನನ್ನನ್ನು ದೇವಸ್ಥಾನವೊಂದಕ್ಕೆ ಕರೆದುಕೊಂಡು ಹೋಗಿ ದೃಷ್ಟಿ ತೆಗೆಸಿದರು. ಆನಂತರವೇ ನನಗೆ ಈ ಪಾತ್ರದಲ್ಲಿ ನಟಿಸುವುದು ಸುಲಭವಾಯಿತು ಎಂದು ರಾಧಿಕಾ ಹೇಳಿಕೊಂಡಿದ್ದಾರೆ.

Actress Radhika Kumaraswamy Has Spoken About Leaving The Film Industry

ಜೆ.ಎಸ್.ವಾಲಿ ಈ ಸಿನಿಮಾದ ಛಾಯಾಗ್ರಾಹಕರು, ರವಿವರ್ಮಾ ಸಾಹಸ ಸಂಯೋಜನೆ, ಮೋಹನ್ ಬಿ ಕೆರೆ ಆರ್ಟ್ ವರ್ಕ್, ಕೆ.ಕೆ.ಸೆಂಥಿಲ್ ಪ್ರಕಾಶ್ ಸಂಗೀತ ಈ ಭೈರಾದೇವಿ ಚಿತ್ರಕ್ಕಿದೆ. ಬಹಳ ಅದ್ಧೂರಿಯಾಗಿ ಸಿನಿಮಾ ನಿರ್ಮಾಣವಾಗಿದೆ.

ರಾಧಿಕಾ ಕುಮಾರಸ್ವಾಮಿ ಅವರೇ ನಿರ್ಮಿಸಿ, ನಟಿಸುತ್ತಿರುವ ಬಹುನಿರೀಕ್ಷಿತ ಭೈರಾದೇವಿ ಸಿನಿಮಾ ಇದೇ ಅಕ್ಟೋಬರ್ 3ರಂದು ಪ್ರೇಕ್ಷಕರ ಮುಂದೆ ಬರಲಿದೆ. ಈಗಾಗಲೇ ಚಿತ್ರದ ಟ್ರೈಲರ್, ಸಾಂಗ್ಸ್ ರಿಲೀಸ್ ಆಗಿ ಸದ್ದು ಮಾಡ್ತಿದೆ. ಶ್ರೀಜೈ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಹಲವು ದಿನಗಳ ನಂತರ ಬರುತ್ತಿರುವ ಕನ್ನಡದ ಹಾರರ್‌ ಸಿನಿಮಾ ನೋಡಲು ಪ್ರೇಕ್ಷಕರು ಕಾತರದಿಂದ ಕಾದಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+