ಸಿನಿಮಾ ಕೆರಿಯರ್ ಬಗ್ಗೆ ನಟಿ ರಾಧಿಕಾ ಶಾಕಿಂಗ್ ಹೇಳಿಕೆ
ಸ್ಯಾಂಡಲ್ವುಡ್ ನಟಿ ರಾಧಿಕಾ ಕುಮಾರಸ್ವಾಮಿ ಅವರು ನಟಿಸಿರುವ ಭೈರಾದೇವಿ ಸಿನಿಮಾ ರಿಲೀಸ್ಗೆ ರೆಡಿಯಾಗಿದೆ. ಈ ನಡುವೆಯೇ ಅವರು ತಮ್ಮ ಸಿನಿಮಾ ಕೆರಿಯರ್ ಬಗ್ಗೆ ಶಾಕಿಂಗ್ ವಿಚಾರ ಬಿಚ್ಚಿಡುವ ಮೂಲಕ ಅಭಿಮಾನಿಗಳನ್ನು ಬೆಚ್ಚಿಬೀಳಿಸಿದ್ದಾರೆ. ಈ ಸಿನಿಮಾ ಪ್ರಮೋಷನ್ ವೇಳೆಯೇ ನಟಿ ರಾಧಿಕಾ ಸಿನಿಮಾ ರಂಗ ತೊರೆಯುವ ಬಗ್ಗೆ ಮಾತನಾಡಿದ್ದಾರೆ.
ನಿನ್ನೆ ಭೈರಾದೇವಿ ಸಿನಿಮಾದ ಪ್ರಮೋಷನ್ ಕಾರ್ಯಕ್ರಮದಲ್ಲಿ ನಟಿ ರಾಧಿಕಾ ಅವರು ಸಿನಿಮಾದ ಬಗ್ಗೆ ಮಾತನಾಡುತ್ತಿದ್ದರು. ಈ ವೇಳೆ ಅವರು ದೀಢೀರನೆ ಚಿತ್ರರಂಗ ತೊರೆಯುವ ಮಾತನ್ನಾಡಿದರು. ಇದಕ್ಕೆ ಅಲ್ಲಿದ್ದವರೆಲ್ಲ ಒಂದು ಕ್ಷಣ ಶಾಕ್ ಕೂಡ ಆದರು. ಇದಕ್ಕೆ ಅಸಲಿ ಕಾರಣವನ್ನು ರಾಧಿಕಾ ಅವರೇ ಹೇಳಿದ್ದು, ಭೈರಾದೇವಿ ಸಿನಿಮಾದ ಸಕ್ಸಸ್ ಮೇಲೆ ನನ್ನ ಭವಿಷ್ಯ ನಿಂತಿದೆ ಎಂದಿದ್ದಾರೆ.

ನನ್ನ ಕೆರಿಯರ್ನಲ್ಲಿ ಈ ಭೈರಾದೇವಿ ದೊಡ್ಡ ಸಿನಿಮಾ. ಈ ಸಿನಿಮಾ ಯಶಸ್ವಿಯಾದರೆ ಮಾತ್ರ ನಾನು ಬೇರೆ ಸಿನಿಮಾಗಳನ್ನು ಮಾಡುತ್ತೇನೆ. ಒಂದು ವೇಳೆ ಸಕ್ಸಸ್ ಆಗದಿದ್ದರೆ ಇದೇ ನನ್ನ ಕೊನೆಯ ಸಿನಿಮಾ ಆಗಲಿದೆ. ಪ್ರೇಕ್ಷಕರಿಗೆ ನಾನು ಇಷ್ಟವಾಗದಿದ್ದರೆ ಸಿನಿಮಾರಂಗದಿಂದಲೇ ದೂರ ಹೋಗಲು ನಿರ್ಧರಿಸಿದ್ದೆ. ಈ ಬಗ್ಗೆ ನಾನು ನಿರ್ದೇಶಕರಿಗೂ ಹೇಳಿದ್ದೆ ಎಂದು ನಟಿ ರಾಧಿಕಾ ಕುಮಾರಸ್ವಾಮಿ ವೇದಿಕೆಯಲ್ಲಿ ಭಾವುಕರಾದರು.
ನನ್ನ ಮೇಲೆ ನಂಬಿಕೆ ಇಟ್ಟು ಇಂತಹ ಪಾತ್ರ ಮಾಡಿಸಿದ್ದಾರೆ. ಇದು ನನ್ನ ಕೆರಿಯರ್ನಲ್ಲೇ ಹಿಟ್ ಸಿನಿಮಾ ಆಗುತ್ತೆ ಅನ್ನೋ ನಂಬಿಕೆ ನನಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಾನು ಈ ಸಿನಿಮಾಗಾಗಿ ತುಂಬಾ ಕಷ್ಟಪಟ್ಟಿದ್ದೇನೆ. ತುಂಬಾ ಸಮಸ್ಯೆಗಳನ್ನು ಎದುರಿಸಿದ್ದೇನೆ. ಇದೆಲ್ಲ ನೋಡಿದಾಗ ಕಲಾವಿದರು ಯಾಕೆ ಇಷ್ಟೊಂದು ಕಷ್ಟ ಪಡುತ್ತಾರೆ? ಎಂದು ನನಗೆ ಅನಿಸುತ್ತೆ. ಸ್ಮಶಾನದಲ್ಲೆಲ್ಲ ಅದೆಷ್ಟೋ ದಿನ ಬಹಳ ಸವಾಲುಗಳಿಂದ ಶೂಟಿಂಗ್ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಇನ್ನು ಈ ಭೈರಾದೇವಿ ಸಿನಿಮಾದ ಟ್ರೈಲರ್ ನಿನ್ನೆ ಬೆಂಗಳೂರಿನಲ್ಲಿ ಬಿಡುಗಡೆಯಾಗಿದೆ. ಈ ಸಿನಿಮಾದಲ್ಲಿ ನಟಿ ರಾಧಿಕಾ ಅವರು ಕಾಳಿಯ ಅವತಾರ ತಾಳಿದ್ದಾರೆ. ಈ ಬಗ್ಗೆ ಮಾತನಾಡಿರುವ ರಾಧಿಕಾ, ನಾನು ಕಾಳಿ ವೇಷ ಧರಿಸಿದಾಗ ನನ್ನಲ್ಲಿ ಕೆಲವು ಬದಲಾವಣೆ ಆಗುತ್ತಿತ್ತು ಎಂದಿದ್ದಾರೆ. ಮೊದಲ ದಿನ ನಾನು ಕಾಳಿ ವೇಷ ಧರಿಸಿದಾಗ ತಲೆ ಎತ್ತಲು ನನಗೆ ಕಷ್ಟವಾಗುತ್ತಿತ್ತು ಎಂದು ಶೂಟಿಂಗ್ ವೇಳೆ ಎದುರಾದ ಸಮಸ್ಯೆಗಳನ್ನು ಬಿಚ್ಚಿಟ್ಟಿದ್ದಾರೆ.
ಈ ಘಟನೆ ನಂತರ ನಮ್ಮ ಕೋರಿಯೋಗ್ರಫರ್ ಹಾಗೂ ಡೈರೆಕ್ಟರ್ ನನ್ನನ್ನು ದೇವಸ್ಥಾನವೊಂದಕ್ಕೆ ಕರೆದುಕೊಂಡು ಹೋಗಿ ದೃಷ್ಟಿ ತೆಗೆಸಿದರು. ಆನಂತರವೇ ನನಗೆ ಈ ಪಾತ್ರದಲ್ಲಿ ನಟಿಸುವುದು ಸುಲಭವಾಯಿತು ಎಂದು ರಾಧಿಕಾ ಹೇಳಿಕೊಂಡಿದ್ದಾರೆ.

ಜೆ.ಎಸ್.ವಾಲಿ ಈ ಸಿನಿಮಾದ ಛಾಯಾಗ್ರಾಹಕರು, ರವಿವರ್ಮಾ ಸಾಹಸ ಸಂಯೋಜನೆ, ಮೋಹನ್ ಬಿ ಕೆರೆ ಆರ್ಟ್ ವರ್ಕ್, ಕೆ.ಕೆ.ಸೆಂಥಿಲ್ ಪ್ರಕಾಶ್ ಸಂಗೀತ ಈ ಭೈರಾದೇವಿ ಚಿತ್ರಕ್ಕಿದೆ. ಬಹಳ ಅದ್ಧೂರಿಯಾಗಿ ಸಿನಿಮಾ ನಿರ್ಮಾಣವಾಗಿದೆ.
ರಾಧಿಕಾ ಕುಮಾರಸ್ವಾಮಿ ಅವರೇ ನಿರ್ಮಿಸಿ, ನಟಿಸುತ್ತಿರುವ ಬಹುನಿರೀಕ್ಷಿತ ಭೈರಾದೇವಿ ಸಿನಿಮಾ ಇದೇ ಅಕ್ಟೋಬರ್ 3ರಂದು ಪ್ರೇಕ್ಷಕರ ಮುಂದೆ ಬರಲಿದೆ. ಈಗಾಗಲೇ ಚಿತ್ರದ ಟ್ರೈಲರ್, ಸಾಂಗ್ಸ್ ರಿಲೀಸ್ ಆಗಿ ಸದ್ದು ಮಾಡ್ತಿದೆ. ಶ್ರೀಜೈ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಹಲವು ದಿನಗಳ ನಂತರ ಬರುತ್ತಿರುವ ಕನ್ನಡದ ಹಾರರ್ ಸಿನಿಮಾ ನೋಡಲು ಪ್ರೇಕ್ಷಕರು ಕಾತರದಿಂದ ಕಾದಿದ್ದಾರೆ.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ












Click it and Unblock the Notifications