Ramya: ಎಲ್ಲ ಮಹಿಳೆಯರಿಗೆ ನ್ಯಾಯ ಸಿಕ್ಕಿದೆ: ಪ್ರಜ್ವಲ್ ತೀರ್ಪು ಬಗ್ಗೆ ನಟಿ ರಮ್ಯಾ ಮಹತ್ವದ ಪೋಸ್ಟ್
ಸ್ಯಾಂಡಲ್ವುಡ್ ಮೋಹಕತಾರೆ, ನಟಿ ರಮ್ಯಾ (ದಿವ್ಯ ಸ್ಪಂದನ) ಅವರು ಮಹಿಳೆಯರ ಮೇಲಿನ ಶೋಷಣೆ ವಿಚಾರವಾಗಿ ಧ್ವನಿ ಎತ್ತುತ್ತಲೇ ಇದ್ದಾರೆ. ಧರ್ಮಸ್ಥಳ ಕೇಸ್, ರೇಣುಕಾಸ್ವಾಮಿ ಕೊಲೆ ಕೇಸ್ ಬಳಿಕ ಅವರು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಕೇಸ್ ವಿಚಾರವಾಗಿಯೂ ಪೋಸ್ಟ್ ಹಂಚಿಕೊಂಡು ಮಹಿಳೆಯರ ಪರ ನಿಲುವು ವ್ಯಕ್ತಪಡಿಸಿದ್ದಾರೆ. ಮಹಿಳೆಯೊಬ್ಬರ ಮೇಲಿನ ಅತ್ಯಾಚಾರ ಕೇಸ್ನಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್ ತೀರ್ಪು ಪ್ರಕಟಿಸಿದೆ. ಈ ಬಗ್ಗೆ ರಮ್ಯಾ ಅವರು ಪೋಸ್ಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.
ಕಳೆದ ಪ್ರಜ್ವಲ್ ರೇವಣ್ಣನ ಕೇಸ್ ಬಯಲಿಗೆ ಬಂದಾಗ ಅವರನ್ನು ಅರೆಸ್ಟ್ ಮಾಡಲಾಗಿತ್ತು. ಆ ಸಂದರ್ಭದಲ್ಲೂ ರಮ್ಯಾ ಅವರು ಪ್ರತಿಕ್ರಿಯಿಸಿದ್ದರು. ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಬಂಧನ ಹಾಗೂ ಅತ್ಯಾಚಾರ ಕೇಸ್ನಲ್ಲಿ ಪ್ರಜ್ವಲ್ ರೇವಣ್ಣ ಅರೆಸ್ಟ್ ಆದ ಬಗ್ಗೆ ಮಾತನಾಡಿದ್ದ ಅವರು "ಕಾನೂನಿಗಿಂತ ಯಾರೂ ದೊಡ್ಡವರಲ್ಲ" ಎಂದಿದ್ದರು. ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ, ಕರ್ನಾಟಕ ಪೊಲೀಸರಿಗೆ ಸಲ್ಯೂಟ್ ಎಂದಿದ್ದರು.

'ಕಾನೂನು ಉಲ್ಲಂಘಿಸುವವರ ಬಗ್ಗೆ ಸುದ್ದಿಯಲ್ಲಿರುವವರು ಶ್ರೀಮಂತರು ಮತ್ತು ಪ್ರಭಾವಿಗಳು ಮತ್ತು ಅವರ ಹಿಂಸಾತ್ಮಕ ಕೃತ್ಯಗಳಿಗೆ ಬಲಿಯಾಗುವವರು ಬಡವರು, ಮಹಿಳೆಯರು ಮತ್ತು ಮಕ್ಕಳು, ಒಟ್ಟಾರೆ ಕರ್ನಾಟಕದ ಸಾಮಾನ್ಯ ಜನರು. ಈ ಅಪರಾಧಗಳನ್ನು ಹೊರತಂದ ಪೊಲೀಸರು ಮತ್ತು ಮಾಧ್ಯಮಗಳಿಗೆ ಹ್ಯಾಟ್ಸ್ಆಫ್. ವಿಚಾರಣೆಯನ್ನು ತ್ವರಿತಗೊಳಿಸಿ ಪ್ರಕರಣಗಳನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡಾಗ ನಿಜವಾಗಿಯೂ ನ್ಯಾಯ ಸಿಗುತ್ತದೆ. ನ್ಯಾಯವು ಮೇಲುಗೈ ಸಾಧಿಸದಿದ್ದರೆ ನಾವು ಸಾರ್ವಜನಿಕರಿಗೆ ಯಾವ ಸಂದೇಶವನ್ನು ನೀಡುತ್ತಿದ್ದೇವೆ?' ಎಂದು ರಮ್ಯಾ ಪೋಸ್ಟ್ ಹಂಚಿಕೊಂಡಿದ್ದರು. ಆಗ ಪ್ರಜ್ವಲ್ ರೇವಣ್ಣ ಕೇಸ್ ಅನ್ನು ಸಹ ರಮ್ಯಾ ಉಲ್ಲೇಖಿಸಿದ್ದರು.
'ಈ ಪರಿಸ್ಥಿತಿಯಲ್ಲಿ ತಮ್ಮ ಕರ್ತವ್ಯ ನಿಭಾಯಿಸಿದ ಪೊಲೀಸರ ಬಗ್ಗೆ ಗೌರವ, ಮೆಚ್ಚುಗೆ ವ್ಯಕ್ತಪಡಿಸಲು ಇಚ್ಛಿಸುತ್ತೇನೆ. ಪೊಲೀಸರ ಕೆಲಸ ನಿಜಕ್ಕೂ ಥ್ಯಾಂಕ್ಲೆಸ್. ತಮ್ಮ ಮಿತಿಯಲ್ಲಿ ಅವರು ಸಮರ್ಥವಾಗಿ ಕೆಲಸ ಮಾಡುತ್ತಿದ್ದಾರೆ. ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿಯಬಾರದು ಎಂದು ನಾನು ಬಯಸುತ್ತೇನೆ. ದೇಶದ ಕಾನೂನಿನ ಮೇಲೆ ಜನಸಾಮಾನ್ಯರಿಗೆ ವಿಶ್ವಾಸ ಮೂಡಿಸುವ ಕೆಲಸ ಮಾಡಬೇಕು' ಎಂದು ರಮ್ಯಾ ಕೋರಿದ್ದರು. ಇದರೊಂದಿಗೆ ದರ್ಶನ್, ಯಡಿಯೂರಪ್ಪ ಹಾಗೂ ಪ್ರಜ್ವಲ್ ರೇವಣ್ಣ ಹಾಗೂ ಜಸ್ಟೀಸ್ ಫಾರ್ ರೇಣುಕಾಸ್ವಾಮಿ ಹ್ಯಾಶ್ ಟ್ಯಾಗ್ ಬಳಸಿದ್ದರು.

ಎಲ್ಲಾ ಮಹಿಳೆಯರಿಗೆ ನ್ಯಾಯ !
ಪ್ರಜ್ವಲ್ ರೇವಣ್ಣ ಮೇಲಿರುವ ನಾಲ್ಕು ಕೇಸ್ಗಳ ಪೈಕಿ ಒಂದು ಅತ್ಯಾಚಾರ ಕೇಸ್ನಲ್ಲಿ ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ. ದೋಷಿ ಎಂದು ಸಾಬೀತಾದ ಹಿನ್ನೆಲೆ ಪ್ರಜ್ವಲ್ಗೆ ಭಾರಿ ಪ್ರಮಾಣದ ಶಿಕ್ಷೆ ಪ್ರಕಟವಾಗುವ ಸಾಧ್ಯತೆ ಇದೆ. ಇದರ ಬೆನ್ನಲ್ಲೇ ನಟಿ ರಮ್ಯಾ ಅವರು ಸೋಷಿಯಲ್ ಮೀಡಿಯಾದಲ್ಲಿ ಈ ತೀರ್ಪಿನ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದಾರೆ. ಪ್ರಜ್ವಲ್ ದೋಷಿ ಎಂಬ ತೀರ್ಪಿನ ಸುದ್ದಿ ಹಂಚಿಕೊಂಡಿರುವ ರಮ್ಯಾ ಅವರು, "ಎಲ್ಲಾ ಮಹಿಳೆಯರಿಗೆ ನ್ಯಾಯ ಸಿಕ್ಕಿತು" ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications