Get Updates
Get notified of breaking news, exclusive insights, and must-see stories!

Actress Ramya: ಮತ್ತೆ ದರ್ಶನ್, ಯಡಿಯೂರಪ್ಪ, ಪ್ರಜ್ವಲ್, ಸೂರಜ್ ರೇವಣ್ಣ ವಿರುದ್ಧ ಸಿಡಿದೆದ್ದ ಮೋಹಕತಾರೆ ರಮ್ಯಾ

ಬೆಂಗಳೂರು, ಜೂನ್. 22: ರಾಜ್ಯದಲ್ಲಿ ಕಳೆದ ಎರಡು ತಿಂಗಳಿನಿಂದ ಒಂದಲ್ಲ ಒಂದು ವಿಷಯ ಸದ್ದು ಮಾಡುತ್ತಲೆ ಇದೆ. ಒಬ್ಬರಾದ ಮೇಲೆ ಒಬ್ಬರ ಮೇಲೆ ಗಂಭೀರ ಪ್ರಕರಣಗಳು ದಾಖಲಾಗುತ್ತಿವೆ. ಇದಕ್ಕೆ ಪ್ರತಿಕ್ರಿಯಿಸುವವರ ಸಂಖ್ಯೆ ತೀರಾ ಚಿಕ್ಕದಿದೆ. ಆದರೂ, ಎಲ್ಲಾ ಘಟನೆಗಳಿಗೂ ಮೊದಲು ಸ್ಪಂದಿಸುವುದು ಮೋಕಹ ತಾರೆ ರಮ್ಯಾ.

ಹೌದು.... ಅದು ಲೈಂಗಿಕ ದೌರ್ಜನ್ಯ ಪ್ರಕರಣವಿರಲಿ, ಕೊಲೆ ಆರೋಪಗಳಿರಲಿ.. ದೊಡ್ಡ ನಟ, ದೊಡ್ಡ ರಾಜಕಾರಣಿ ಯಾರೇ ಆಗಿರಲಿ. ಎಲ್ಲರ ವಿರುದ್ಧ ಗಟ್ಟಿಯಾಗಿ ದನಿ ಎತ್ತುತ್ತಿರುವುದು ನಟಿ ರಮ್ಯಾ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಪಾಲಾಗಿರುವ ಪ್ರಜ್ವಲ್ ರೇವಣ್ಣ, ಕೊಲೆ ಆರೋಪಗಳನ್ನು ಎದುರಿಸುತ್ತಿರುವ ನಟ ದರ್ಶನ್‌, ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಈಗ ಅಸಹಜ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರ ಆರೋಪದ ಕೇಸ್ ಹಾಕಿಸಿಕೊಂಡಿರುವ ಎಂಎಲ್‌ಸಿ ಸೂರಜ್‌ ರೇವಣ್ಣ ಎಲ್ಲರ ವಿರುದ್ಧ ನಟಿ, ಮಾಜಿ ಸಂಸದೆ ರಮ್ಯಾ ಕಿಡಿ ಕಾರಿದ್ದಾರೆ.

Actress Ramya tweets about darshan bs yediyurappa prajwal revanna Suraj Revanna cases

ನಾಲ್ವರು ಆರೋಪಿಗಳ ವಿರುದ್ಧ ರಮ್ಯಾ ಕೆಂಡಾಮಂಡಲ

ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಂಚಿಕೊಂಡಿರುವ ನಟಿ ರಮ್ಯಾ, "ಕಾನೂನನ್ನು ಉಲ್ಲಂಘಿಸಿ ಸುದ್ದಿಯಲ್ಲಿರುವವರು ಶ್ರೀಮಂತರು ಮತ್ತು ಶಕ್ತಿಶಾಲಿಗಳು. ಆದರೆ, ಅವರ ಹಿಂಸಾತ್ಮಕ ಕ್ರಿಯೆಗಳಿಂದ ಅಂತ್ಯ ಕಾಣುವವರು ಬಡವರು, ಮಹಿಳೆಯರು ಮತ್ತು ಮಕ್ಕಳು. ಕರ್ನಾಟಕದ ಜನಸಾಮಾನ್ಯರು" ಎಂದು ಬರೆದಿದ್ದಾರೆ.

"ಈ ಅಪರಾಧ ಪ್ರಕರಣಗಳನ್ನು ಹೊರಗೆ ತಂದ ಪೊಲೀಸರಿಗೆ ಮತ್ತು ಮಾಧ್ಯಮಗಳಿಗೆ ಹ್ಯಾಟ್ಸ್ ಆಫ್. ವಿಚಾರಣೆಯನ್ನು ತ್ವರಿತಗೊಳಿಸಿದಾಗ ಮತ್ತು ಪ್ರಕರಣಗಳನ್ನು ಅವುಗಳ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಾಗ ಮಾತ್ರ ನಿಜವಾಗಿಯೂ ನ್ಯಾಯ ಸಿಗುತ್ತದೆ. ಪ್ರಕರಣಗಳಲ್ಲಿ ನ್ಯಾಯವು ಮೇಲುಗೈ ಸಾಧಿಸದಿದ್ದರೆ, ಸಾರ್ವಜನಿಕರಿಗೆ ನಾವು ಯಾವ ಸಂದೇಶವನ್ನು ನೀಡುತ್ತೇವೆ?" ಎಂದು ಪ್ರಶ್ನಿಸಿದ್ದಾರೆ.

ಈ ಪೋಸ್ಟ್‌ಗೆ ನಟಿ ರಮ್ಯಾ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ, ನಟ ದರ್ಶನ್‌ ತೂಗುದೀಪ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಎಂಎಲ್‌ಸಿ ಸೂರಜ್‌ ರೇವಣ್ಣ ಅವರ ಹೆಸರನ್ನು ಹ್ಯಾಶ್‌ ಟ್ಯಾಗ್‌ ಮೂಲಕ ಉಲ್ಲೇಖಿಸಿದ್ದಾರೆ. ನಾಲ್ವರನ್ನು ಉಲ್ಲೇಖಿಸುವ ಮೂಲಕ ಈ ಪ್ರಕರಣಗಳನ್ನು ಬೇಗ ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಬೇಕು ಎಂದು ಒತ್ತಾಯಿಸಿದ್ದಾರೆ.

Actress Ramya tweets about darshan bs yediyurappa prajwal revanna Suraj Revanna cases

ರಮ್ಯಾ ಕೆಂಡ ಕಾರಿದ ನಾಲ್ಕು ಪ್ರಕರಣಗಳು

ನಟ ದರ್ಶನ್ ವಿರುದ್ಧ ಕೊಲೆ ಆರೋಪವಿದ್ದು, ಅವರನ್ನು ಸೇರಿಸಿ ಒಟ್ಟು ಹತ್ತೊಂಬ್ಬತ್ತು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ನಟಿ ಪವಿತ್ರಾ ಗೌಡಾಗೆ ಅಶ್ಲಿಲ ಮೆಸೇಜ್ ಮಾಡಿದ್ದ ಎಂದು ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿರುವ ಆರೋಪ ಇವರೆಲ್ಲರ ಮೇಲಿದೆ.

ಇನ್ನು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಸಹಾಯಕ್ಕಾಗಿ ಮಾಜಿ ಮುಖ್ಯಮಂತ್ರಿಯ ಮನೆಗೆ ತೆರಳಿದಾಗ ಅವರು ತನ್ನ ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನವೆಸಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತೆ ತಾಯಿ ಮಾರ್ಚ್​ ತಿಂಗಳಲ್ಲಿ ಎಫ್​ಐಆರ್ ದಾಖಲಿಸಿದ್ದರು. ಬಳಿಕ ಅವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಇತ್ತೀಚೆಗೆ ನ್ಯಾಯಾಲಯ ಬಿಎಸ್‌ವೈಗೆ ಜಾಮೀನು ನೀಡಿದೆ.

ಇತ್ತ, ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಅವರು ಜೈಲು ಪಾಲಾಗಿದ್ದಾರೆ. ಇದರ ನಡುವೆಯೇ ಅವರ ಸಹೋದರ ಎಂಎಲ್‌ಸಿ ಸೂರಜ್ ರೇವಣ್ಣ ವಿರುದ್ಧವೂ ಗಂಭೀರ ಆರೋಪ ಕೇಳಿ ಬಂದಿದೆ. ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಅವರ ಮೇಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+