Actress Ramya: ಮತ್ತೆ ದರ್ಶನ್, ಯಡಿಯೂರಪ್ಪ, ಪ್ರಜ್ವಲ್, ಸೂರಜ್ ರೇವಣ್ಣ ವಿರುದ್ಧ ಸಿಡಿದೆದ್ದ ಮೋಹಕತಾರೆ ರಮ್ಯಾ
ಬೆಂಗಳೂರು, ಜೂನ್. 22: ರಾಜ್ಯದಲ್ಲಿ ಕಳೆದ ಎರಡು ತಿಂಗಳಿನಿಂದ ಒಂದಲ್ಲ ಒಂದು ವಿಷಯ ಸದ್ದು ಮಾಡುತ್ತಲೆ ಇದೆ. ಒಬ್ಬರಾದ ಮೇಲೆ ಒಬ್ಬರ ಮೇಲೆ ಗಂಭೀರ ಪ್ರಕರಣಗಳು ದಾಖಲಾಗುತ್ತಿವೆ. ಇದಕ್ಕೆ ಪ್ರತಿಕ್ರಿಯಿಸುವವರ ಸಂಖ್ಯೆ ತೀರಾ ಚಿಕ್ಕದಿದೆ. ಆದರೂ, ಎಲ್ಲಾ ಘಟನೆಗಳಿಗೂ ಮೊದಲು ಸ್ಪಂದಿಸುವುದು ಮೋಕಹ ತಾರೆ ರಮ್ಯಾ.
ಹೌದು.... ಅದು ಲೈಂಗಿಕ ದೌರ್ಜನ್ಯ ಪ್ರಕರಣವಿರಲಿ, ಕೊಲೆ ಆರೋಪಗಳಿರಲಿ.. ದೊಡ್ಡ ನಟ, ದೊಡ್ಡ ರಾಜಕಾರಣಿ ಯಾರೇ ಆಗಿರಲಿ. ಎಲ್ಲರ ವಿರುದ್ಧ ಗಟ್ಟಿಯಾಗಿ ದನಿ ಎತ್ತುತ್ತಿರುವುದು ನಟಿ ರಮ್ಯಾ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಪಾಲಾಗಿರುವ ಪ್ರಜ್ವಲ್ ರೇವಣ್ಣ, ಕೊಲೆ ಆರೋಪಗಳನ್ನು ಎದುರಿಸುತ್ತಿರುವ ನಟ ದರ್ಶನ್, ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಈಗ ಅಸಹಜ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರ ಆರೋಪದ ಕೇಸ್ ಹಾಕಿಸಿಕೊಂಡಿರುವ ಎಂಎಲ್ಸಿ ಸೂರಜ್ ರೇವಣ್ಣ ಎಲ್ಲರ ವಿರುದ್ಧ ನಟಿ, ಮಾಜಿ ಸಂಸದೆ ರಮ್ಯಾ ಕಿಡಿ ಕಾರಿದ್ದಾರೆ.

ನಾಲ್ವರು ಆರೋಪಿಗಳ ವಿರುದ್ಧ ರಮ್ಯಾ ಕೆಂಡಾಮಂಡಲ
ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಂಚಿಕೊಂಡಿರುವ ನಟಿ ರಮ್ಯಾ, "ಕಾನೂನನ್ನು ಉಲ್ಲಂಘಿಸಿ ಸುದ್ದಿಯಲ್ಲಿರುವವರು ಶ್ರೀಮಂತರು ಮತ್ತು ಶಕ್ತಿಶಾಲಿಗಳು. ಆದರೆ, ಅವರ ಹಿಂಸಾತ್ಮಕ ಕ್ರಿಯೆಗಳಿಂದ ಅಂತ್ಯ ಕಾಣುವವರು ಬಡವರು, ಮಹಿಳೆಯರು ಮತ್ತು ಮಕ್ಕಳು. ಕರ್ನಾಟಕದ ಜನಸಾಮಾನ್ಯರು" ಎಂದು ಬರೆದಿದ್ದಾರೆ.
"ಈ ಅಪರಾಧ ಪ್ರಕರಣಗಳನ್ನು ಹೊರಗೆ ತಂದ ಪೊಲೀಸರಿಗೆ ಮತ್ತು ಮಾಧ್ಯಮಗಳಿಗೆ ಹ್ಯಾಟ್ಸ್ ಆಫ್. ವಿಚಾರಣೆಯನ್ನು ತ್ವರಿತಗೊಳಿಸಿದಾಗ ಮತ್ತು ಪ್ರಕರಣಗಳನ್ನು ಅವುಗಳ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಾಗ ಮಾತ್ರ ನಿಜವಾಗಿಯೂ ನ್ಯಾಯ ಸಿಗುತ್ತದೆ. ಪ್ರಕರಣಗಳಲ್ಲಿ ನ್ಯಾಯವು ಮೇಲುಗೈ ಸಾಧಿಸದಿದ್ದರೆ, ಸಾರ್ವಜನಿಕರಿಗೆ ನಾವು ಯಾವ ಸಂದೇಶವನ್ನು ನೀಡುತ್ತೇವೆ?" ಎಂದು ಪ್ರಶ್ನಿಸಿದ್ದಾರೆ.
The ones breaking the law who have been in the news are the rich and powerful and the ones at the receiving end of their violent actions are the poor, women & children. The common people of Karnataka. Hats off to the police and media for bringing these crimes out. Justice will…
— Ramya/Divya Spandana (@divyaspandana) June 22, 2024
ಈ ಪೋಸ್ಟ್ಗೆ ನಟಿ ರಮ್ಯಾ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ನಟ ದರ್ಶನ್ ತೂಗುದೀಪ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಎಂಎಲ್ಸಿ ಸೂರಜ್ ರೇವಣ್ಣ ಅವರ ಹೆಸರನ್ನು ಹ್ಯಾಶ್ ಟ್ಯಾಗ್ ಮೂಲಕ ಉಲ್ಲೇಖಿಸಿದ್ದಾರೆ. ನಾಲ್ವರನ್ನು ಉಲ್ಲೇಖಿಸುವ ಮೂಲಕ ಈ ಪ್ರಕರಣಗಳನ್ನು ಬೇಗ ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಬೇಕು ಎಂದು ಒತ್ತಾಯಿಸಿದ್ದಾರೆ.

ರಮ್ಯಾ ಕೆಂಡ ಕಾರಿದ ನಾಲ್ಕು ಪ್ರಕರಣಗಳು
ನಟ ದರ್ಶನ್ ವಿರುದ್ಧ ಕೊಲೆ ಆರೋಪವಿದ್ದು, ಅವರನ್ನು ಸೇರಿಸಿ ಒಟ್ಟು ಹತ್ತೊಂಬ್ಬತ್ತು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ನಟಿ ಪವಿತ್ರಾ ಗೌಡಾಗೆ ಅಶ್ಲಿಲ ಮೆಸೇಜ್ ಮಾಡಿದ್ದ ಎಂದು ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿರುವ ಆರೋಪ ಇವರೆಲ್ಲರ ಮೇಲಿದೆ.
ಇನ್ನು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಸಹಾಯಕ್ಕಾಗಿ ಮಾಜಿ ಮುಖ್ಯಮಂತ್ರಿಯ ಮನೆಗೆ ತೆರಳಿದಾಗ ಅವರು ತನ್ನ ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನವೆಸಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತೆ ತಾಯಿ ಮಾರ್ಚ್ ತಿಂಗಳಲ್ಲಿ ಎಫ್ಐಆರ್ ದಾಖಲಿಸಿದ್ದರು. ಬಳಿಕ ಅವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಇತ್ತೀಚೆಗೆ ನ್ಯಾಯಾಲಯ ಬಿಎಸ್ವೈಗೆ ಜಾಮೀನು ನೀಡಿದೆ.
ಇತ್ತ, ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಅವರು ಜೈಲು ಪಾಲಾಗಿದ್ದಾರೆ. ಇದರ ನಡುವೆಯೇ ಅವರ ಸಹೋದರ ಎಂಎಲ್ಸಿ ಸೂರಜ್ ರೇವಣ್ಣ ವಿರುದ್ಧವೂ ಗಂಭೀರ ಆರೋಪ ಕೇಳಿ ಬಂದಿದೆ. ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಅವರ ಮೇಲಿದೆ.
-
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications